<p>ಮೈಸೂರು: ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಶಿಶು ಮರಣ ಘಟನೆಯ ಕುರಿತು ಶೀಘ್ರಗತಿಯ ತನಿಖೆ ನಡೆಸಿ, ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂ ಎಸ್ಎಸ್) ಸದಸ್ಯೆಯರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿಗೆ ಮನವಿ ಸಲ್ಲಿಸಿದರು.</p>.<p>‘ಚಲುವಾಂಬ ಆಸ್ಪತ್ರೆಯಲ್ಲಿ ಶಿಶು ಮರಣ ಸಂಖ್ಯೆ ಹೆಚ್ಚುತ್ತಿದ್ದು, ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಮಕ್ಕಳ ಮನೆಯವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ತಕ್ಷಣವೇ ತನಿಖೆ ನಡೆಸಿ ಕ್ರಮವಹಿಸಬೇಕು. ಗುರುವಾರ ಸಾವನ್ನಪ್ಪಿದ ಶಿಶುವಿನ ತಂದೆ ದಿನಗೂಲಿ ಕೆಲಸ ಮಾಡುತ್ತಿದ್ದು. 8 ದಿನಗಳಿಂದ ಕೆಲಸಕ್ಕೂ ಹೋಗದೆ, ಆಸ್ಪತ್ರೆಯಲ್ಲಿ ಮಗುವಿನ ಚಿಕಿತ್ಸೆಗಾಗಿ ಇರಬೇಕಾದ ಅನಿವಾರ್ಯ ಇತ್ತು. ಈಗ ಮಗುವನ್ನೂ ಕಳೆದುಕೊಂಡಿರುವ ನೋವು ಜೊತೆಗೆ ಸಾಲದ ಕಾರಣ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರಿಗೆ ಸೂಕ್ತ ಪರಿಹಾರ ಒದಗಿಸಬೇಕು’ ಎಂದು ಮನವಿ ಮಾಡಿದರು.</p>.<p>ಸಂಘಟನೆಯ ಜಿಲ್ಲಾಧ್ಯಕ್ಷೆ ನಳಿನ, ಉಪಾಧ್ಯಕ್ಷರಾದ ಸೀಮಾ ಜಿ.ಎಸ್, ಆಸಿಯಾ ಬೇಗಂ, ಪುಷ್ಪಾ ಮತ್ತು ಪದ್ಮಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-39-705336839</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಶಿಶು ಮರಣ ಘಟನೆಯ ಕುರಿತು ಶೀಘ್ರಗತಿಯ ತನಿಖೆ ನಡೆಸಿ, ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂ ಎಸ್ಎಸ್) ಸದಸ್ಯೆಯರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿಗೆ ಮನವಿ ಸಲ್ಲಿಸಿದರು.</p>.<p>‘ಚಲುವಾಂಬ ಆಸ್ಪತ್ರೆಯಲ್ಲಿ ಶಿಶು ಮರಣ ಸಂಖ್ಯೆ ಹೆಚ್ಚುತ್ತಿದ್ದು, ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಮಕ್ಕಳ ಮನೆಯವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ತಕ್ಷಣವೇ ತನಿಖೆ ನಡೆಸಿ ಕ್ರಮವಹಿಸಬೇಕು. ಗುರುವಾರ ಸಾವನ್ನಪ್ಪಿದ ಶಿಶುವಿನ ತಂದೆ ದಿನಗೂಲಿ ಕೆಲಸ ಮಾಡುತ್ತಿದ್ದು. 8 ದಿನಗಳಿಂದ ಕೆಲಸಕ್ಕೂ ಹೋಗದೆ, ಆಸ್ಪತ್ರೆಯಲ್ಲಿ ಮಗುವಿನ ಚಿಕಿತ್ಸೆಗಾಗಿ ಇರಬೇಕಾದ ಅನಿವಾರ್ಯ ಇತ್ತು. ಈಗ ಮಗುವನ್ನೂ ಕಳೆದುಕೊಂಡಿರುವ ನೋವು ಜೊತೆಗೆ ಸಾಲದ ಕಾರಣ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರಿಗೆ ಸೂಕ್ತ ಪರಿಹಾರ ಒದಗಿಸಬೇಕು’ ಎಂದು ಮನವಿ ಮಾಡಿದರು.</p>.<p>ಸಂಘಟನೆಯ ಜಿಲ್ಲಾಧ್ಯಕ್ಷೆ ನಳಿನ, ಉಪಾಧ್ಯಕ್ಷರಾದ ಸೀಮಾ ಜಿ.ಎಸ್, ಆಸಿಯಾ ಬೇಗಂ, ಪುಷ್ಪಾ ಮತ್ತು ಪದ್ಮಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-39-705336839</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>