<p><strong>ಮೈಸೂರು:</strong> ಜಿಲ್ಲೆಯಲ್ಲಿ 2025ರ ಏಪ್ರಿಲ್ನಿಂದ ಡಿಸೆಂಬರ್ವರೆಗೆ ಸಂಭವಿಸಿರುವ ಶಿಶು ಮರಣ ಪ್ರಕರಣಗಳ ಕುರಿತು ಅಧಿಕಾರಿಗಳು ಪರಿಶೋಧನೆ ನಡೆಸಿದರು.</p><p>ಇಲ್ಲಿನ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಎಂಎಂಸಿಆರ್ಐ) ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ಕುಮಾರ್ ಹಾಗೂ ತಜ್ಞ ವೈದ್ಯರು ಪಾಲ್ಗೊಂಡಿದ್ದರು.</p><p>ಡಿಸೆಂಬರ್ ಅಂತ್ಯದವರೆಗೆ 311 ಶಿಶು ಮರಣ ಪ್ರಕರಣಗಳು ಸಂಭವಿಸಿರುವ ಬಗ್ಗೆ ಕಳವಳ ವ್ಯಕ್ತವಾಯಿತು.</p><p>ಶಿಶು ಮರಣಗಳಿಗೆ ಕಾರಣವಾದ ಅಂಶಗಳ ಕುರಿತು ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಲಾಯಿತು. ಇಂತಹ ಪ್ರಕರಣ ತಡೆಗಟ್ಟಬಹುದಾದ ವಿವಿಧ ಹಂತಗಳ ಚಿಕಿತ್ಸಾ ವಿಧಾನದ ಬಗ್ಗೆ ಚರ್ಚಿಸಲಾಯಿತು.</p><p>‘ಕ್ಷೇತ್ರ ಭೇಟಿ ನೀಡಿ, ಸೂಕ್ತ ಶಿಫಾರಸುಗಳನ್ನು ಮಾಡಬೇಕು. ಹೆಚ್ಚುವರಿಯಾಗಿ ಹೆರಿಗೆ ಕೊಠಡಿ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಗಳನ್ನು ಪ್ರಾರಂಭಕ್ಕೆ, ಎಸ್ಎನ್ಸಿಯು ಘಟಕಕ್ಕೆ ಹೆಚ್ಚುವರಿ ಬೇಬಿ ವಾರ್ಮರ್ ಉಪಕರಣ ಖರೀದಿಸುವುದಕ್ಕೆ ಸಂಬಂಧಿಸಿದಂತೆ ಪ್ರಸ್ತಾವ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. </p><p>‘ಜಿಲ್ಲೆಯ ಶಿಶು ಮರಣ ಪ್ರಮಾಣವು ಸರಾಸರಿ ಶೇ 11ರಷ್ಟಿದೆ. ಈ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವ ಸಂಬಂಧ ಸಮುದಾಯದ ಮಟ್ಟದಲ್ಲಿ ಮತ್ತು ಆರೋಗ್ಯ ಸಂಸ್ಥೆಗಳಲ್ಲಿ ನಿಯಮಾನುಸಾರ ಚಿಕಿತ್ಸಾ ವಿಧಾನವನ್ನು ಅನುಸರಿಸಬೇಕು’ ಎಂದು ತಿಳಿಸಿದರು.</p><p>‘ಚೆಲುವಾಂಬ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಹಾಗೂ ಡಿಎಚ್ಒ ಕಚೇರಿ ಅಧೀನದಲ್ಲಿರುವ ಎಲ್ಲಾ ತಜ್ಞ ವೈದ್ಯರು, ಕ್ಷೇತ್ರ ಸಿಬ್ಬಂದಿಯಾದ ಪಿ.ಎಚ್.ಸಿ.ಒ, ಎಚ್.ಐ.ಒ. ಮತ್ತು ಆಶಾ ಕಾರ್ಯಕರ್ತೆಯರು ಕ್ಷೇತ್ರ ಮಟ್ಟದಲ್ಲಿ ಆದ್ಯತೆಯ ಮೇರೆಗೆ ಕರ್ತವ್ಯ ನಿರ್ವಹಿಸಬೇಕು’ ಎಂದು ನಿರ್ದೇಶನ ನೀಡಿದರು.</p><p>ಚೆಲುವಾಂಬ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಅಲ್ಲಿನ ಒಳರೋಗಿಗಳ ಆರೋಗ್ಯ ವಿಚಾರಿಸಿದರು. ರೋಗಿಗಳಿಗೆ ಸೌಲಭ್ಯ ಕಲ್ಪಿಸುವಲ್ಲಿ ಯಾವುದೇ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p><p>ಡಿಎಚ್ಒ ಡಾ.ಪಿ.ಸಿ. ಕುಮಾರಸ್ವಾಮಿ ಪಿಸಿ, ಎಂಎಂಸಿಆರ್ಐ ಡೀನ್ ಡಾ.ದಾಕ್ಷಾಯಣಿ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಮಹಮ್ಮದ್ ಸಿರಾಜ್ ಅಹಮದ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಿಲ್ಲೆಯಲ್ಲಿ 2025ರ ಏಪ್ರಿಲ್ನಿಂದ ಡಿಸೆಂಬರ್ವರೆಗೆ ಸಂಭವಿಸಿರುವ ಶಿಶು ಮರಣ ಪ್ರಕರಣಗಳ ಕುರಿತು ಅಧಿಕಾರಿಗಳು ಪರಿಶೋಧನೆ ನಡೆಸಿದರು.</p><p>ಇಲ್ಲಿನ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಎಂಎಂಸಿಆರ್ಐ) ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ಕುಮಾರ್ ಹಾಗೂ ತಜ್ಞ ವೈದ್ಯರು ಪಾಲ್ಗೊಂಡಿದ್ದರು.</p><p>ಡಿಸೆಂಬರ್ ಅಂತ್ಯದವರೆಗೆ 311 ಶಿಶು ಮರಣ ಪ್ರಕರಣಗಳು ಸಂಭವಿಸಿರುವ ಬಗ್ಗೆ ಕಳವಳ ವ್ಯಕ್ತವಾಯಿತು.</p><p>ಶಿಶು ಮರಣಗಳಿಗೆ ಕಾರಣವಾದ ಅಂಶಗಳ ಕುರಿತು ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಲಾಯಿತು. ಇಂತಹ ಪ್ರಕರಣ ತಡೆಗಟ್ಟಬಹುದಾದ ವಿವಿಧ ಹಂತಗಳ ಚಿಕಿತ್ಸಾ ವಿಧಾನದ ಬಗ್ಗೆ ಚರ್ಚಿಸಲಾಯಿತು.</p><p>‘ಕ್ಷೇತ್ರ ಭೇಟಿ ನೀಡಿ, ಸೂಕ್ತ ಶಿಫಾರಸುಗಳನ್ನು ಮಾಡಬೇಕು. ಹೆಚ್ಚುವರಿಯಾಗಿ ಹೆರಿಗೆ ಕೊಠಡಿ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಗಳನ್ನು ಪ್ರಾರಂಭಕ್ಕೆ, ಎಸ್ಎನ್ಸಿಯು ಘಟಕಕ್ಕೆ ಹೆಚ್ಚುವರಿ ಬೇಬಿ ವಾರ್ಮರ್ ಉಪಕರಣ ಖರೀದಿಸುವುದಕ್ಕೆ ಸಂಬಂಧಿಸಿದಂತೆ ಪ್ರಸ್ತಾವ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. </p><p>‘ಜಿಲ್ಲೆಯ ಶಿಶು ಮರಣ ಪ್ರಮಾಣವು ಸರಾಸರಿ ಶೇ 11ರಷ್ಟಿದೆ. ಈ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವ ಸಂಬಂಧ ಸಮುದಾಯದ ಮಟ್ಟದಲ್ಲಿ ಮತ್ತು ಆರೋಗ್ಯ ಸಂಸ್ಥೆಗಳಲ್ಲಿ ನಿಯಮಾನುಸಾರ ಚಿಕಿತ್ಸಾ ವಿಧಾನವನ್ನು ಅನುಸರಿಸಬೇಕು’ ಎಂದು ತಿಳಿಸಿದರು.</p><p>‘ಚೆಲುವಾಂಬ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಹಾಗೂ ಡಿಎಚ್ಒ ಕಚೇರಿ ಅಧೀನದಲ್ಲಿರುವ ಎಲ್ಲಾ ತಜ್ಞ ವೈದ್ಯರು, ಕ್ಷೇತ್ರ ಸಿಬ್ಬಂದಿಯಾದ ಪಿ.ಎಚ್.ಸಿ.ಒ, ಎಚ್.ಐ.ಒ. ಮತ್ತು ಆಶಾ ಕಾರ್ಯಕರ್ತೆಯರು ಕ್ಷೇತ್ರ ಮಟ್ಟದಲ್ಲಿ ಆದ್ಯತೆಯ ಮೇರೆಗೆ ಕರ್ತವ್ಯ ನಿರ್ವಹಿಸಬೇಕು’ ಎಂದು ನಿರ್ದೇಶನ ನೀಡಿದರು.</p><p>ಚೆಲುವಾಂಬ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಅಲ್ಲಿನ ಒಳರೋಗಿಗಳ ಆರೋಗ್ಯ ವಿಚಾರಿಸಿದರು. ರೋಗಿಗಳಿಗೆ ಸೌಲಭ್ಯ ಕಲ್ಪಿಸುವಲ್ಲಿ ಯಾವುದೇ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p><p>ಡಿಎಚ್ಒ ಡಾ.ಪಿ.ಸಿ. ಕುಮಾರಸ್ವಾಮಿ ಪಿಸಿ, ಎಂಎಂಸಿಆರ್ಐ ಡೀನ್ ಡಾ.ದಾಕ್ಷಾಯಣಿ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಮಹಮ್ಮದ್ ಸಿರಾಜ್ ಅಹಮದ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>