<p><strong>ಮೈಸೂರು</strong>: ‘ಐಟಿಸಿ ಕಂಪನಿಯು ಹರಾಜಿನಲ್ಲಿ ನ್ಯಾಯಯುತ ಬೆಲೆಗೆ ತಂಬಾಕು ಖರೀದಿಸಬೇಕು. ರೈತರಿಗೆ ಅನ್ಯಾಯವಾದರೆ ಕಂಪನಿಯ ಗೋದಾಮುಗಳನ್ನು ಜಪ್ತಿ ಮಾಡಲಾಗುವುದು’ ಎಂದು ರೇಷ್ಮೆ ಮತ್ತು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಸೋಮವರ ಇಲ್ಲಿ ಎಚ್ಚರಿಸಿದರು.</p>.<p>ತಂಬಾಕು ಬೆಳೆಗಾರರು, ಜಿಲ್ಲಾಡಳಿತ, ತಂಬಾಕು ಮಂಡಳಿ ಹಾಗೂ ಕಂಪನಿ ಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಅವರು, ‘ಹರಾಜು ಆರಂಭಗೊಂಡ ದಿನ ಇದ್ದ ಬೆಲೆ ಅಥವಾ ಅದಕ್ಕಿಂತ ಹೆಚ್ಚಿನ ದರದಲ್ಲೇ ಹರಾಜು ನಡೆಸಬೇಕು. ಕಂಪನಿಯವರು ಮಂಗಳವಾರ ಸಂಜೆ ಒಳಗೆ ನಿರ್ಧಾರ ಪ್ರಕಟಿಸಬೇಕು’ ಎಂದು ಸೂಚಿಸಿದರು.</p>.<p>‘ಹೊಗೆಸೊಪ್ಪು ಬೆಲೆ ಕುಸಿತದಿಂದ ರೈತರಿಗೆ ನಷ್ಟವಾಗುತ್ತಿದೆ. ಕಡಿಮೆ ಬೆಲೆಗೆ ಹರಾಜು ಮಾಡುವುದು, ಕಡಿಮೆ ಉತ್ಪನ್ನ ಖರೀದಿಸುವುದು ಸರಿಯಲ್ಲ’ ಎಂದು ಅಭಿಪ್ರಾಯಪಟ್ಟರು. </p>.<p>ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ‘ತಂಬಾಕಿನಿಂದ ಬೇರೆ ಬೆಳೆಗಳಿಗೆ ರೈತರನ್ನು ಪರಿವರ್ತಿಸುವ ಕುರಿತು ಯೋಜನೆಗಳ ಅವಶ್ಯಕತೆ ಇದೆ. ಈ ಸಂಬಂಧ ಚರ್ಚೆಗೆ ಕೇಂದ್ರ ಸರ್ಕಾರದ ಬಳಿಗೆ ನಿಯೋಗ ಕರೆದೊಯ್ಯಲಾಗುವುದು’ ಎಂದು ಭರವಸೆ ನೀಡಿದರು. </p>.<p>ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ‘ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ 10 ಕೋಟಿ ಕೆ.ಜಿ.ಗಳಷ್ಟು ತಂಬಾಕು ಉತ್ಪಾದನೆಯ ಗುರಿ ಇತ್ತು. ಆದರೆ ಕೇವಲ 8 ಕೋಟಿ ಕೆ.ಜಿ.ಗಳಷ್ಟೇ ಉತ್ಪನ್ನವಾಗಿದೆ. ನಿರೀಕ್ಷೆಗಿಂತ ಕಡಿಮೆ ಇದ್ದರೂ ಕಂಪನಿಯು ಖರೀದಿಸದೆ ಸತಾಯಿಸುವುದು ಸರಿಯಲ್ಲ’ ಎಂದು ಆಕ್ಷೇಪಿಸಿದರು.</p>.<p>‘ಕಂಪನಿಯ ಷೇರು ದರ ವ್ಯತ್ಯಾಸದಿಂದಾಗಿ ಹರಾಜಿನಲ್ಲಿ ವ್ಯತ್ಯಯವಾಗಿದೆ. ಆದರೆ ಹರಾಜು ನಿಲ್ಲಿಸಿಲ್ಲ. ಕೃಷಿಕರ ಸಮಸ್ಯೆಗಳನ್ನು ಪ್ರಧಾನ ಕಚೇರಿ ಗಮನಕ್ಕೆ ತರಲಾಗುವುದು’ ಎಂದು ಕಂಪನಿಯ ಪ್ರತಿನಿಧಿಗಳು ತಿಳಿಸಿದರು.</p>.<div><blockquote>ಬೆಲೆ ಕುಸಿತದಿಂದ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ. ಆಂಧ್ರಪ್ರದೇಶ ಮಾರುಕಟ್ಟೆ ತೆರೆಯುವ ಮೊದಲೇ ಇಲ್ಲಿನ ಸಮಸ್ಯೆ ಬಗೆಹರಿಸಿ ಹರಾಜು ಮುಗಿಸಬೇಕು </blockquote><span class="attribution">ಜಿ.ಡಿ. ಹರೀಶ್ ಗೌಡ ಹುಣಸೂರು ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಐಟಿಸಿ ಕಂಪನಿಯು ಹರಾಜಿನಲ್ಲಿ ನ್ಯಾಯಯುತ ಬೆಲೆಗೆ ತಂಬಾಕು ಖರೀದಿಸಬೇಕು. ರೈತರಿಗೆ ಅನ್ಯಾಯವಾದರೆ ಕಂಪನಿಯ ಗೋದಾಮುಗಳನ್ನು ಜಪ್ತಿ ಮಾಡಲಾಗುವುದು’ ಎಂದು ರೇಷ್ಮೆ ಮತ್ತು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಸೋಮವರ ಇಲ್ಲಿ ಎಚ್ಚರಿಸಿದರು.</p>.<p>ತಂಬಾಕು ಬೆಳೆಗಾರರು, ಜಿಲ್ಲಾಡಳಿತ, ತಂಬಾಕು ಮಂಡಳಿ ಹಾಗೂ ಕಂಪನಿ ಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಅವರು, ‘ಹರಾಜು ಆರಂಭಗೊಂಡ ದಿನ ಇದ್ದ ಬೆಲೆ ಅಥವಾ ಅದಕ್ಕಿಂತ ಹೆಚ್ಚಿನ ದರದಲ್ಲೇ ಹರಾಜು ನಡೆಸಬೇಕು. ಕಂಪನಿಯವರು ಮಂಗಳವಾರ ಸಂಜೆ ಒಳಗೆ ನಿರ್ಧಾರ ಪ್ರಕಟಿಸಬೇಕು’ ಎಂದು ಸೂಚಿಸಿದರು.</p>.<p>‘ಹೊಗೆಸೊಪ್ಪು ಬೆಲೆ ಕುಸಿತದಿಂದ ರೈತರಿಗೆ ನಷ್ಟವಾಗುತ್ತಿದೆ. ಕಡಿಮೆ ಬೆಲೆಗೆ ಹರಾಜು ಮಾಡುವುದು, ಕಡಿಮೆ ಉತ್ಪನ್ನ ಖರೀದಿಸುವುದು ಸರಿಯಲ್ಲ’ ಎಂದು ಅಭಿಪ್ರಾಯಪಟ್ಟರು. </p>.<p>ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ‘ತಂಬಾಕಿನಿಂದ ಬೇರೆ ಬೆಳೆಗಳಿಗೆ ರೈತರನ್ನು ಪರಿವರ್ತಿಸುವ ಕುರಿತು ಯೋಜನೆಗಳ ಅವಶ್ಯಕತೆ ಇದೆ. ಈ ಸಂಬಂಧ ಚರ್ಚೆಗೆ ಕೇಂದ್ರ ಸರ್ಕಾರದ ಬಳಿಗೆ ನಿಯೋಗ ಕರೆದೊಯ್ಯಲಾಗುವುದು’ ಎಂದು ಭರವಸೆ ನೀಡಿದರು. </p>.<p>ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ‘ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ 10 ಕೋಟಿ ಕೆ.ಜಿ.ಗಳಷ್ಟು ತಂಬಾಕು ಉತ್ಪಾದನೆಯ ಗುರಿ ಇತ್ತು. ಆದರೆ ಕೇವಲ 8 ಕೋಟಿ ಕೆ.ಜಿ.ಗಳಷ್ಟೇ ಉತ್ಪನ್ನವಾಗಿದೆ. ನಿರೀಕ್ಷೆಗಿಂತ ಕಡಿಮೆ ಇದ್ದರೂ ಕಂಪನಿಯು ಖರೀದಿಸದೆ ಸತಾಯಿಸುವುದು ಸರಿಯಲ್ಲ’ ಎಂದು ಆಕ್ಷೇಪಿಸಿದರು.</p>.<p>‘ಕಂಪನಿಯ ಷೇರು ದರ ವ್ಯತ್ಯಾಸದಿಂದಾಗಿ ಹರಾಜಿನಲ್ಲಿ ವ್ಯತ್ಯಯವಾಗಿದೆ. ಆದರೆ ಹರಾಜು ನಿಲ್ಲಿಸಿಲ್ಲ. ಕೃಷಿಕರ ಸಮಸ್ಯೆಗಳನ್ನು ಪ್ರಧಾನ ಕಚೇರಿ ಗಮನಕ್ಕೆ ತರಲಾಗುವುದು’ ಎಂದು ಕಂಪನಿಯ ಪ್ರತಿನಿಧಿಗಳು ತಿಳಿಸಿದರು.</p>.<div><blockquote>ಬೆಲೆ ಕುಸಿತದಿಂದ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ. ಆಂಧ್ರಪ್ರದೇಶ ಮಾರುಕಟ್ಟೆ ತೆರೆಯುವ ಮೊದಲೇ ಇಲ್ಲಿನ ಸಮಸ್ಯೆ ಬಗೆಹರಿಸಿ ಹರಾಜು ಮುಗಿಸಬೇಕು </blockquote><span class="attribution">ಜಿ.ಡಿ. ಹರೀಶ್ ಗೌಡ ಹುಣಸೂರು ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>