<p>ಮೈಸೂರು: ರೈತನಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ದೇವೇಗೌಡ ಸರ್ಕಲ್- ಆಲನಹಳ್ಳಿ ಸರ್ಕಲ್ ಮಧ್ಯೆ ರಿಂಗ್ ರಸ್ತೆಯಲ್ಲಿರುವ ಪಿಎಸ್ಎನ್ ಕನ್ಸ್ಟ್ರಕ್ಷನ್ ಇಕ್ಯುಪ್ಮೆಂಟ್ ಸಂಸ್ಥೆ ಮುಂಭಾಗ ಪ್ರತಿಭಟಿಸಿದರು.</p>.<p>ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕು ರೈತ ಈ ಕಂಪೆನಿಯಲ್ಲಿ ಜೆಸಿಬಿಯನ್ನು ಸಾಲ ಮಾಡಿ ಖರೀದಿಸಿದ್ದರು, ಅದು ಕೆಲವೇ ಸಮಯದಲ್ಲಿ ರಿಪೇರಿಗೆ ಬಂದಿದ್ದು, ಅದನ್ನು ಬದಲಾಯಿಸಿ ಕೊಡಿ ಎಂದಾಗ ಒಪ್ಪಿಗೆ ಸೂಚಿಸಿದ್ದರು. ಈ ಬಗ್ಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿಯೂ ಒಪ್ಪಿಕೊಂಡಿದ್ದರು’ ಎಂದರು.</p>.<p>‘ನಂತರ ಬಿಡಿ ಭಾಗಗಳನ್ನು ಸರಿಪಡಿಸುತ್ತೇವೆ ಎಂದರು. ಅದನ್ನೂ ಮಾಡಲಿಲ್ಲ. ಜೆಸಿಬಿ ಮಾಲೀಕರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಜೆಸಿಬಿಯನ್ನು ಸರಿಪಡಿಸುತ್ತೇವೆ. ಸಾಧ್ಯವಾಗದಿದ್ದರೆ ಬದಲಾಯಿಸಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಈವರೆಗೆ ಆ ಕಾರ್ಯ ಆಗಿಲ್ಲ. ತಕ್ಷಣವೇ ಬದಲಿ ಜೆಸಿಬಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಮುಖಂಡರೊಂದಿಗೆ ಕಂಪೆನಿಯ ಹಿರಿಯ ಅಧಿಕಾರಿಗಳು ಚರ್ಚಿಸಿದರು. ರೈತ ಮುಖಂಡರು ಮಾಲೀಕನಿಗೆ ಜೆಸಿಬಿ ಬದಲಾಯಿಸಿ ಕೊಡಬೇಕು ಅಥವಾ ಅದಕ್ಕೆ ನೀಡಿರುವ ₹ 26 ಲಕ್ಷವನ್ನು ವಾಪಸ್ ನೀಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಕಂಪೆನಿಯ ಶಾಖೆಗಳ ಮುಂದೆ ಪ್ರತಿಭಟಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>‘15 ದಿನಗಳೊಳಗಾಗಿ ಸಮಸ್ಯೆಯನ್ನು ಬಗೆಹರಿಸಿ ರೈತರಿಗೆ ನ್ಯಾಯ ಒದಗಿಸುತ್ತೇವೆ’ ಎಂದು ಅಧಿಕಾರಿಗಳು ತಿಳಿಸಿದ ಬಳಿಕ, ಪ್ರತಿಭಟನೆ ಹಿಂಪಡೆಯಲಾಯಿತು.</p>.<p>ಎಎಲ್ ಕೆಂಪೂಗೌಡ, ಹೊಸಕೋಟೆ ಬಸವರಾಜು, ಪಿ. ಮರಂಕಯ್ಯ, ಕೆಂಪೇಗೌಡ, ಎಣ್ಣೆಹೊಳೆ ಕೊಪ್ಪಲ್ ಮಂಜುನಾಥ್, ರಘು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-39-1427960283</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ರೈತನಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ದೇವೇಗೌಡ ಸರ್ಕಲ್- ಆಲನಹಳ್ಳಿ ಸರ್ಕಲ್ ಮಧ್ಯೆ ರಿಂಗ್ ರಸ್ತೆಯಲ್ಲಿರುವ ಪಿಎಸ್ಎನ್ ಕನ್ಸ್ಟ್ರಕ್ಷನ್ ಇಕ್ಯುಪ್ಮೆಂಟ್ ಸಂಸ್ಥೆ ಮುಂಭಾಗ ಪ್ರತಿಭಟಿಸಿದರು.</p>.<p>ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕು ರೈತ ಈ ಕಂಪೆನಿಯಲ್ಲಿ ಜೆಸಿಬಿಯನ್ನು ಸಾಲ ಮಾಡಿ ಖರೀದಿಸಿದ್ದರು, ಅದು ಕೆಲವೇ ಸಮಯದಲ್ಲಿ ರಿಪೇರಿಗೆ ಬಂದಿದ್ದು, ಅದನ್ನು ಬದಲಾಯಿಸಿ ಕೊಡಿ ಎಂದಾಗ ಒಪ್ಪಿಗೆ ಸೂಚಿಸಿದ್ದರು. ಈ ಬಗ್ಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿಯೂ ಒಪ್ಪಿಕೊಂಡಿದ್ದರು’ ಎಂದರು.</p>.<p>‘ನಂತರ ಬಿಡಿ ಭಾಗಗಳನ್ನು ಸರಿಪಡಿಸುತ್ತೇವೆ ಎಂದರು. ಅದನ್ನೂ ಮಾಡಲಿಲ್ಲ. ಜೆಸಿಬಿ ಮಾಲೀಕರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಜೆಸಿಬಿಯನ್ನು ಸರಿಪಡಿಸುತ್ತೇವೆ. ಸಾಧ್ಯವಾಗದಿದ್ದರೆ ಬದಲಾಯಿಸಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಈವರೆಗೆ ಆ ಕಾರ್ಯ ಆಗಿಲ್ಲ. ತಕ್ಷಣವೇ ಬದಲಿ ಜೆಸಿಬಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಮುಖಂಡರೊಂದಿಗೆ ಕಂಪೆನಿಯ ಹಿರಿಯ ಅಧಿಕಾರಿಗಳು ಚರ್ಚಿಸಿದರು. ರೈತ ಮುಖಂಡರು ಮಾಲೀಕನಿಗೆ ಜೆಸಿಬಿ ಬದಲಾಯಿಸಿ ಕೊಡಬೇಕು ಅಥವಾ ಅದಕ್ಕೆ ನೀಡಿರುವ ₹ 26 ಲಕ್ಷವನ್ನು ವಾಪಸ್ ನೀಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಕಂಪೆನಿಯ ಶಾಖೆಗಳ ಮುಂದೆ ಪ್ರತಿಭಟಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>‘15 ದಿನಗಳೊಳಗಾಗಿ ಸಮಸ್ಯೆಯನ್ನು ಬಗೆಹರಿಸಿ ರೈತರಿಗೆ ನ್ಯಾಯ ಒದಗಿಸುತ್ತೇವೆ’ ಎಂದು ಅಧಿಕಾರಿಗಳು ತಿಳಿಸಿದ ಬಳಿಕ, ಪ್ರತಿಭಟನೆ ಹಿಂಪಡೆಯಲಾಯಿತು.</p>.<p>ಎಎಲ್ ಕೆಂಪೂಗೌಡ, ಹೊಸಕೋಟೆ ಬಸವರಾಜು, ಪಿ. ಮರಂಕಯ್ಯ, ಕೆಂಪೇಗೌಡ, ಎಣ್ಣೆಹೊಳೆ ಕೊಪ್ಪಲ್ ಮಂಜುನಾಥ್, ರಘು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-39-1427960283</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>