<p>ಮೈಸೂರು: ಇಲ್ಲಿನ ಬನ್ನಿಮಂಟಪದಲ್ಲಿ ಮನೆ ಮಹಡಿಯಿಂದ ಒಳನುಗ್ಗಿದ ಕಳ್ಳರು, ಬೀರುವಿನಲ್ಲಿದ್ದ 14 ಗ್ರಾಂ ಚಿನ್ನಾಭರಣ ದೋಚಿದ್ದಾರೆ.</p>.<p>ನಾತೀಹಾ ಖಾನಂ ಚಿನ್ನ ಕಳೆದುಕೊಂಡವರು. ಏ.27ರಂದು ಕುಟುಂಬ ಸಮೇತ ಸಂಬಂಧಿಕರ ಮನೆಗೆ ತೆರಳಿದ್ದ ಅವರು, ಮೇ 1ರಂದು ಮನೆಗೆ ವಾಪಸ್ ಬಂದಾಗ ಚಿನ್ನಾಭರಣ ಕಳ್ಳತನವಾಗಿರುವುದು ಗೊತ್ತಾಗಿದೆ.</p>.<p>ಎನ್ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮೈಸೂರು: ತಾಲ್ಲೂಕಿನ ವಾಜಮಂಗಲ ಗ್ರಾಮದ ಮಾವಿನ ತೋಟದಲ್ಲಿ ಜೂಜಾಡುತ್ತಿದ್ದ ಗುಂಪಿನ ಮೇಲೆ ದಾಳಿ ನಡೆಸಿದ ವರುಣಾ ಠಾಣೆ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.</p>.<p>ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. ಜೂಜಿನಲ್ಲಿ ಪಣಕ್ಕಿಟ್ಟಿದ್ದ ₹40,980 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಾಗಿದೆ.</p>.<p>ಮೂವರ ಬಂಧನ: ತಾಲ್ಲೂಕಿನ ತಳೂರು ಗ್ರಾಮದ ಕೆರೆ ಏರಿ ಬಳಿ ಜೂಜಾಡುತ್ತಿದ್ದವರ ಮೇಲೆ ದಾಳಿ ನಡೆಸಿರುವ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು 3 ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ ₹12,030 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.</p>.<p>ಅಂದರ್–ಬಾಹರ್ ಇಸ್ಪೀಟ್ ಜೂಜಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ನಾಲ್ವರು ಪರಾರಿಯಾಗಿದ್ದು, ಮೂವರು ಸಿಕ್ಕಿಬಿದ್ದಿದ್ದಾರೆ. ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-39-627309253</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಇಲ್ಲಿನ ಬನ್ನಿಮಂಟಪದಲ್ಲಿ ಮನೆ ಮಹಡಿಯಿಂದ ಒಳನುಗ್ಗಿದ ಕಳ್ಳರು, ಬೀರುವಿನಲ್ಲಿದ್ದ 14 ಗ್ರಾಂ ಚಿನ್ನಾಭರಣ ದೋಚಿದ್ದಾರೆ.</p>.<p>ನಾತೀಹಾ ಖಾನಂ ಚಿನ್ನ ಕಳೆದುಕೊಂಡವರು. ಏ.27ರಂದು ಕುಟುಂಬ ಸಮೇತ ಸಂಬಂಧಿಕರ ಮನೆಗೆ ತೆರಳಿದ್ದ ಅವರು, ಮೇ 1ರಂದು ಮನೆಗೆ ವಾಪಸ್ ಬಂದಾಗ ಚಿನ್ನಾಭರಣ ಕಳ್ಳತನವಾಗಿರುವುದು ಗೊತ್ತಾಗಿದೆ.</p>.<p>ಎನ್ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮೈಸೂರು: ತಾಲ್ಲೂಕಿನ ವಾಜಮಂಗಲ ಗ್ರಾಮದ ಮಾವಿನ ತೋಟದಲ್ಲಿ ಜೂಜಾಡುತ್ತಿದ್ದ ಗುಂಪಿನ ಮೇಲೆ ದಾಳಿ ನಡೆಸಿದ ವರುಣಾ ಠಾಣೆ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.</p>.<p>ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. ಜೂಜಿನಲ್ಲಿ ಪಣಕ್ಕಿಟ್ಟಿದ್ದ ₹40,980 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಾಗಿದೆ.</p>.<p>ಮೂವರ ಬಂಧನ: ತಾಲ್ಲೂಕಿನ ತಳೂರು ಗ್ರಾಮದ ಕೆರೆ ಏರಿ ಬಳಿ ಜೂಜಾಡುತ್ತಿದ್ದವರ ಮೇಲೆ ದಾಳಿ ನಡೆಸಿರುವ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು 3 ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ ₹12,030 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.</p>.<p>ಅಂದರ್–ಬಾಹರ್ ಇಸ್ಪೀಟ್ ಜೂಜಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ನಾಲ್ವರು ಪರಾರಿಯಾಗಿದ್ದು, ಮೂವರು ಸಿಕ್ಕಿಬಿದ್ದಿದ್ದಾರೆ. ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-39-627309253</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>