<p><strong>ಮೈಸೂರು:</strong> ‘ಆರೋಗ್ಯಕರ ಜೀವನಕ್ಕೆ ಕೈಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಇದು ಕಾಯಿಲೆಗಳನ್ನು ತಡೆಯುವ ಅತ್ಯಂತ ಸರಳ ಮತ್ತು ಪರಿಣಾಮಕಾರಿ ಮಾರ್ಗ’ ಎಂದು ಜೆಎಸ್ಎಸ್ ಆಸ್ಪತ್ರೆಯ ನಿರ್ದೇಶಕ ಸಿ.ಪಿ.ಮಧು ಹೇಳಿದರು.</p>.<p>ನಗರದ ಜೆಎಸ್ಎಸ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ವಿಶ್ವ ಕೈ ನೈರ್ಮಲ್ಯ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸೋಂಕು ಅಥವಾ ಕೀಟಾಣುಗಳು ನಮ್ಮ ದೇಹವನ್ನು ಪ್ರವೇಶಿಸುವುದು ಕೈಗಳ ಮೂಲಕ. ಆದ್ದರಿಂದ ಕೈಗಳ ಸ್ವಚ್ಛತೆಗೆ ಪ್ರಧಾನ ಆದ್ಯತೆ ನೀಡಬೇಕು’ ಎಂದರು.</p>.<p>‘ವೈದ್ಯರು ರೋಗಿಯನ್ನು ಮುಟ್ಟುವ ಮುನ್ನ ಮತ್ತು ನಂತರ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ಇದರಿಂದ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಕಡಿಮೆ. ಈ ಅಭ್ಯಾಸವನ್ನು ಎಲ್ಲಾ ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ರೂಢಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಜೆಎಸ್ಎಸ್ ಆಸ್ಪತ್ರೆಯ ಉಪ ನಿರ್ದೇಶಕರಾದ ಡಾ.ಸುಮನ, ‘ಆಸ್ಪತ್ರೆಯಲ್ಲಿ ನರ್ಸ್ಗಳ ಪಾತ್ರ ಬಹಳ ಪ್ರಮುಖವಾದದ್ದು. ಅವರು ವಾರ್ಡ್ಗೆ ಪ್ರವೇಶಿಸುವ ವೈದ್ಯರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೈ ನೈರ್ಮಲ್ಯ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದರು.</p>.<p>‘ಕೈ ನೈರ್ಮಲ್ಯ ಎಂಬ ಪದ ತುಂಬಾ ಚಿಕ್ಕ ವಿಷಯವಾಗಿದ್ದರೂ ಇದು ಸಾವನ್ನು ತಪ್ಪಿಸುತ್ತದೆ. ನಮ್ಮಿಂದ ಇನ್ನೂಬ್ಬರಿಗೆ ತೊಂದರೆ ಆಗಬಾರದು. ಸೋಂಕು ಇರುವ ವ್ಯಕ್ತಿಯನ್ನು ಮುಟ್ಟಿ ಆ ಸೋಂಕು ನಮ್ಮ ಕೈಗಳಿಂದ ಮತ್ತೊಬ್ಬರಿಗೆ ಹರಡಿ ಅವರ ಪ್ರಾಣಕ್ಕೆ ಕುತ್ತಾಗಬಹುದು. ಆದ್ದರಿಂದ ನಮಗಾಗಿ ಮತ್ತು ಬೇರೆಯವರಿಗಾಗಿ ನಾವು ನಮ್ಮ ಕೈಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು’ ಎಂದು ಜೆಎಸ್ಎಸ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಡಿ.ಶ್ರೀನಿವಾಸ್ಮೂರ್ತಿ ಸಲಹೆ ನೀಡಿದರು.</p>.<p>ಆಸ್ಪತ್ರೆಯ ಸೋಂಕು ನಿಯಂತ್ರಣ ಸಮಿತಿಯ ಕಾರ್ಯದರ್ಶಿಗಳಾದ ಡಾ.ಚೇತಕ್ ಕೆ.ಬಿ. ನರ್ಸಿಂಗ್ ಸೇವೆಗಳ ಮುಖ್ಯಸ್ಥರಾದ ಜಾನೆಟ್ ಮಥಿಯಾಸ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-39-1355592839</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಆರೋಗ್ಯಕರ ಜೀವನಕ್ಕೆ ಕೈಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಇದು ಕಾಯಿಲೆಗಳನ್ನು ತಡೆಯುವ ಅತ್ಯಂತ ಸರಳ ಮತ್ತು ಪರಿಣಾಮಕಾರಿ ಮಾರ್ಗ’ ಎಂದು ಜೆಎಸ್ಎಸ್ ಆಸ್ಪತ್ರೆಯ ನಿರ್ದೇಶಕ ಸಿ.ಪಿ.ಮಧು ಹೇಳಿದರು.</p>.<p>ನಗರದ ಜೆಎಸ್ಎಸ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ವಿಶ್ವ ಕೈ ನೈರ್ಮಲ್ಯ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸೋಂಕು ಅಥವಾ ಕೀಟಾಣುಗಳು ನಮ್ಮ ದೇಹವನ್ನು ಪ್ರವೇಶಿಸುವುದು ಕೈಗಳ ಮೂಲಕ. ಆದ್ದರಿಂದ ಕೈಗಳ ಸ್ವಚ್ಛತೆಗೆ ಪ್ರಧಾನ ಆದ್ಯತೆ ನೀಡಬೇಕು’ ಎಂದರು.</p>.<p>‘ವೈದ್ಯರು ರೋಗಿಯನ್ನು ಮುಟ್ಟುವ ಮುನ್ನ ಮತ್ತು ನಂತರ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ಇದರಿಂದ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಕಡಿಮೆ. ಈ ಅಭ್ಯಾಸವನ್ನು ಎಲ್ಲಾ ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ರೂಢಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಜೆಎಸ್ಎಸ್ ಆಸ್ಪತ್ರೆಯ ಉಪ ನಿರ್ದೇಶಕರಾದ ಡಾ.ಸುಮನ, ‘ಆಸ್ಪತ್ರೆಯಲ್ಲಿ ನರ್ಸ್ಗಳ ಪಾತ್ರ ಬಹಳ ಪ್ರಮುಖವಾದದ್ದು. ಅವರು ವಾರ್ಡ್ಗೆ ಪ್ರವೇಶಿಸುವ ವೈದ್ಯರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೈ ನೈರ್ಮಲ್ಯ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದರು.</p>.<p>‘ಕೈ ನೈರ್ಮಲ್ಯ ಎಂಬ ಪದ ತುಂಬಾ ಚಿಕ್ಕ ವಿಷಯವಾಗಿದ್ದರೂ ಇದು ಸಾವನ್ನು ತಪ್ಪಿಸುತ್ತದೆ. ನಮ್ಮಿಂದ ಇನ್ನೂಬ್ಬರಿಗೆ ತೊಂದರೆ ಆಗಬಾರದು. ಸೋಂಕು ಇರುವ ವ್ಯಕ್ತಿಯನ್ನು ಮುಟ್ಟಿ ಆ ಸೋಂಕು ನಮ್ಮ ಕೈಗಳಿಂದ ಮತ್ತೊಬ್ಬರಿಗೆ ಹರಡಿ ಅವರ ಪ್ರಾಣಕ್ಕೆ ಕುತ್ತಾಗಬಹುದು. ಆದ್ದರಿಂದ ನಮಗಾಗಿ ಮತ್ತು ಬೇರೆಯವರಿಗಾಗಿ ನಾವು ನಮ್ಮ ಕೈಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು’ ಎಂದು ಜೆಎಸ್ಎಸ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಡಿ.ಶ್ರೀನಿವಾಸ್ಮೂರ್ತಿ ಸಲಹೆ ನೀಡಿದರು.</p>.<p>ಆಸ್ಪತ್ರೆಯ ಸೋಂಕು ನಿಯಂತ್ರಣ ಸಮಿತಿಯ ಕಾರ್ಯದರ್ಶಿಗಳಾದ ಡಾ.ಚೇತಕ್ ಕೆ.ಬಿ. ನರ್ಸಿಂಗ್ ಸೇವೆಗಳ ಮುಖ್ಯಸ್ಥರಾದ ಜಾನೆಟ್ ಮಥಿಯಾಸ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-39-1355592839</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>