<p>ಮೈಸೂರು: ಕುಮಾರ್ ಪ್ರದರ್ಶಕ ಕಲೆಗಳ ಕೇಂದ್ರದಿಂದ ನಗರದ ಮಂಚೇಗೌಡನ ಕೊಪ್ಪಲಿನ ಕಲೆಮನೆ ಸಭಾಂಗಣದಲ್ಲಿ ಭಾನುವಾರ ವಿಶ್ವ ನೃತ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ 71ನೇ ಅಂತರರಾಷ್ಟ್ರೀಯ ಕಲೆಮನೆ ಉತ್ಸವದಲ್ಲಿ ನಾಲ್ವರು ಸಾಧಕರಿಗೆ ‘ಕಲೆಮನೆ ಕಲಾಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ರಂಗಕರ್ಮಿಗಳಾದ ಮೈಸೂರಿನ ಅಶ್ವತ್ಥ್ ಕದಂಬ, ಕೆ.ಜೆ. ನಾರಾಯಣ ಕಿಕ್ಕೇರಿ, ಬೆಂಗಳೂರಿನ ಓಂಕಾರ್ ಸ್ಟುಡಿಯೊ ಮಾಲೀಕ ಬಿ. ಓಂಕಾರ್ ಮೂರ್ತಿ, ಕಲಾ ವಿಮರ್ಶಕ ನಂಜುಂಡರಾವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮುಖ್ಯ ಅತಿಥಿಯಾಗಿದ್ದರು. ಕೇಂದ್ರದ ಸಂಸ್ಥಾಪಕ ಕೆ. ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷೆ ಜಿ. ಮಾಲತಿ, ಜಂಟಿ ಕಾರ್ಯದರ್ಶಿ ಕೆ.ಎಂ. ನಿಧಿ, ರಂಗಕರ್ಮಿ ರಾಜಶೇಖರ ಕದಂಬ, ಮುನಾರಾಣಿ ಮಿರ್ಲೆ, ರಂಗನಾಥ್ ಮೈಸೂರು ಪಾಲ್ಗೊಂಡಿದ್ದರು.</p>.<p>ನಂತರ ಕೆ. ಕುಮಾರ್, ಸಂಗೀತ ಕಬಿಲನ್, ಎನ್. ಸಿಂಧು ಶಿಷ್ಯವೃಂದ, ಯಶಸ್ವಿನಿ ಅವರು ಭರತನಾಟ್ಯ ಪ್ರದರ್ಶಿಸಿದರು. ಮೀನಲ್ ಗಿರೀಶ್ ಮತ್ತು ಟಿ.ಎನ್. ಯೋಗಿತಾಮಣಿ ಅವರಿಂದ ಯುಗಳ ಭರತನಾಟ್ಯ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-39-1833128995</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಕುಮಾರ್ ಪ್ರದರ್ಶಕ ಕಲೆಗಳ ಕೇಂದ್ರದಿಂದ ನಗರದ ಮಂಚೇಗೌಡನ ಕೊಪ್ಪಲಿನ ಕಲೆಮನೆ ಸಭಾಂಗಣದಲ್ಲಿ ಭಾನುವಾರ ವಿಶ್ವ ನೃತ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ 71ನೇ ಅಂತರರಾಷ್ಟ್ರೀಯ ಕಲೆಮನೆ ಉತ್ಸವದಲ್ಲಿ ನಾಲ್ವರು ಸಾಧಕರಿಗೆ ‘ಕಲೆಮನೆ ಕಲಾಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ರಂಗಕರ್ಮಿಗಳಾದ ಮೈಸೂರಿನ ಅಶ್ವತ್ಥ್ ಕದಂಬ, ಕೆ.ಜೆ. ನಾರಾಯಣ ಕಿಕ್ಕೇರಿ, ಬೆಂಗಳೂರಿನ ಓಂಕಾರ್ ಸ್ಟುಡಿಯೊ ಮಾಲೀಕ ಬಿ. ಓಂಕಾರ್ ಮೂರ್ತಿ, ಕಲಾ ವಿಮರ್ಶಕ ನಂಜುಂಡರಾವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮುಖ್ಯ ಅತಿಥಿಯಾಗಿದ್ದರು. ಕೇಂದ್ರದ ಸಂಸ್ಥಾಪಕ ಕೆ. ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷೆ ಜಿ. ಮಾಲತಿ, ಜಂಟಿ ಕಾರ್ಯದರ್ಶಿ ಕೆ.ಎಂ. ನಿಧಿ, ರಂಗಕರ್ಮಿ ರಾಜಶೇಖರ ಕದಂಬ, ಮುನಾರಾಣಿ ಮಿರ್ಲೆ, ರಂಗನಾಥ್ ಮೈಸೂರು ಪಾಲ್ಗೊಂಡಿದ್ದರು.</p>.<p>ನಂತರ ಕೆ. ಕುಮಾರ್, ಸಂಗೀತ ಕಬಿಲನ್, ಎನ್. ಸಿಂಧು ಶಿಷ್ಯವೃಂದ, ಯಶಸ್ವಿನಿ ಅವರು ಭರತನಾಟ್ಯ ಪ್ರದರ್ಶಿಸಿದರು. ಮೀನಲ್ ಗಿರೀಶ್ ಮತ್ತು ಟಿ.ಎನ್. ಯೋಗಿತಾಮಣಿ ಅವರಿಂದ ಯುಗಳ ಭರತನಾಟ್ಯ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-39-1833128995</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>