<p>ಮೈಸೂರು: ‘ಪುಸ್ತಕಗಳನ್ನು ಖರೀದಿಸಲು ಒಲ್ಲದ ಓದುಗರು ಮತ್ತು ವ್ಯವಸ್ಥೆಯ ನಡುವೆ ಕನ್ನಡ ಪುಸ್ತಕೋದ್ಯಮವಿದೆ’ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷ ಪ್ರೊ.ರಾಜಪ್ಪ ದಳವಾಯಿ ವಿಷಾದಿಸಿದರು.</p>.<p>ನಗರದಲ್ಲಿ ಗುರುವಾರ ವಿಶ್ವ ಪುಸ್ತಕ ದಿನದ ಅಂಗವಾಗಿ ‘ಚಿಂತನ ಚಿತ್ತಾರ’ ಪ್ರಕಾಶನ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರ ಮಳಿಗೆಯು ಏರ್ಪಡಿಸಿದ್ದ ‘ಪತ್ರಕರ್ತರು ಮತ್ತು ಪುಸ್ತಕ ಸಾಂಗತ್ಯ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಅನುದಾನವೇ ಇಲ್ಲದ ಸಮಿತಿಗೆ ನನ್ನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ಮೊದಲಿಗೆ, ಸ್ಥಳೀಯ ಆಡಳಿತ ಸಂಸ್ಥೆಗಳು ಸಾರ್ವಜನಿಕರಿಂದ ವಸೂಲಿ ಮಾಡುವ ಗ್ರಂಥಾಲಯ ತೆರಿಗೆಯು ಇಲಾಖೆಗೆ ನೇರವಾಗಿ ಬರುವಂತಾಗಬೇಕು. ಆ ಬಗ್ಗೆ ಶೀಘ್ರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಗಮನ ಸೆಳೆಯುವೆ’ ಎಂದು ಹೇಳಿದರು.</p>.<p>‘ಪುಸ್ತಕ ಪ್ರಕಾಶಕರ ಸಂಘವು ಮನವಿ ನೀಡಿದ್ದು, ಸಂಘದವರೊಬ್ಬರನ್ನು ಸಮಿತಿಯ ಸಹಸದಸ್ಯರನ್ನಾಗಿ ಸೇರಿಸಿಕೊಳ್ಳಲಾಗುವುದು’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-51-1184861914</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಪುಸ್ತಕಗಳನ್ನು ಖರೀದಿಸಲು ಒಲ್ಲದ ಓದುಗರು ಮತ್ತು ವ್ಯವಸ್ಥೆಯ ನಡುವೆ ಕನ್ನಡ ಪುಸ್ತಕೋದ್ಯಮವಿದೆ’ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷ ಪ್ರೊ.ರಾಜಪ್ಪ ದಳವಾಯಿ ವಿಷಾದಿಸಿದರು.</p>.<p>ನಗರದಲ್ಲಿ ಗುರುವಾರ ವಿಶ್ವ ಪುಸ್ತಕ ದಿನದ ಅಂಗವಾಗಿ ‘ಚಿಂತನ ಚಿತ್ತಾರ’ ಪ್ರಕಾಶನ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರ ಮಳಿಗೆಯು ಏರ್ಪಡಿಸಿದ್ದ ‘ಪತ್ರಕರ್ತರು ಮತ್ತು ಪುಸ್ತಕ ಸಾಂಗತ್ಯ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಅನುದಾನವೇ ಇಲ್ಲದ ಸಮಿತಿಗೆ ನನ್ನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ಮೊದಲಿಗೆ, ಸ್ಥಳೀಯ ಆಡಳಿತ ಸಂಸ್ಥೆಗಳು ಸಾರ್ವಜನಿಕರಿಂದ ವಸೂಲಿ ಮಾಡುವ ಗ್ರಂಥಾಲಯ ತೆರಿಗೆಯು ಇಲಾಖೆಗೆ ನೇರವಾಗಿ ಬರುವಂತಾಗಬೇಕು. ಆ ಬಗ್ಗೆ ಶೀಘ್ರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಗಮನ ಸೆಳೆಯುವೆ’ ಎಂದು ಹೇಳಿದರು.</p>.<p>‘ಪುಸ್ತಕ ಪ್ರಕಾಶಕರ ಸಂಘವು ಮನವಿ ನೀಡಿದ್ದು, ಸಂಘದವರೊಬ್ಬರನ್ನು ಸಮಿತಿಯ ಸಹಸದಸ್ಯರನ್ನಾಗಿ ಸೇರಿಸಿಕೊಳ್ಳಲಾಗುವುದು’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-51-1184861914</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>