<p><strong>ಮೈಸೂರು:</strong> ಜಿಲ್ಲೆಯ ತಿ.ನರಸೀಪುರದ ರೇಷ್ಮೆ ನೂಲು ತೆಗೆಯುವ ಕಾರ್ಖಾನೆಯ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗೆ ಇಲ್ಲಿನ ಮಾನಂದವಾಡಿ ರಸ್ತೆಯಲ್ಲಿರುವ ಕೆಎಸ್ಐಸಿ ಕಾರ್ಖಾನೆಯ ನೌಕರರೂ ಬೆಂಬಲ ನೀಡಿದ್ದು, ಗುರುವಾರ ತಮ್ಮ ಕೆಲಸಕ್ಕೆ ಗೈರಾಗಿದ್ದರು. </p>.<p>ನೌಕರರಿಲ್ಲದೆ ಗುರುವಾರ ಮೈಸೂರು ರೇಷ್ಮೆ ಕಾರ್ಖಾನೆಯಲ್ಲಿ ಬಹುತೇಕ ಕೆಲಸ ಸ್ಥಗಿತಗೊಂಡಿದ್ದು, ಇದು ಮೈಸೂರು ರೇಷ್ಮೆ ಸೀರೆ ಉತ್ಪಾದನೆ ಮೇಲೆಯೂ ಪರಿಣಾಮ ಬೀರಿದೆ. ಶುಕ್ರವಾರವೂ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಉತ್ಪಾದನೆ ವ್ಯತ್ಯಯ ಆಗುವ ಸಾಧ್ಯತೆ ಇದೆ.</p>.<p>ಕಾರ್ಖಾನೆಯ 192 ನೌಕರರು ಕಳೆದ ಶನಿವಾರದಿಂದ ಪ್ರತಿಭಟನೆ ಆರಂಭಿಸಿದ್ದಾರೆ. ಇದರಿಂದ ಮೈಸೂರು ಹಾಗೂ ಚನ್ನಪಟ್ಟಣದಲ್ಲಿರುವ ರೇಷ್ಮೆ ಸೀರೆ ನೇಯ್ಗೆ ಕಾರ್ಖಾನೆಗಳಿಗೆ ನೂಲು ಪೂರೈಕೆಯು ಸ್ಥಗಿತಗೊಂಡಿದೆ. ಈ ಕುರಿತು ಪ್ರತಿಕ್ರಿಯೆಗೆ ಕಾರ್ಖಾನೆಯ ಅಧಿಕಾರಿಗಳು ದೂರವಾಣಿ ಸಂಪರ್ಕಕ್ಕೆ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಿಲ್ಲೆಯ ತಿ.ನರಸೀಪುರದ ರೇಷ್ಮೆ ನೂಲು ತೆಗೆಯುವ ಕಾರ್ಖಾನೆಯ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗೆ ಇಲ್ಲಿನ ಮಾನಂದವಾಡಿ ರಸ್ತೆಯಲ್ಲಿರುವ ಕೆಎಸ್ಐಸಿ ಕಾರ್ಖಾನೆಯ ನೌಕರರೂ ಬೆಂಬಲ ನೀಡಿದ್ದು, ಗುರುವಾರ ತಮ್ಮ ಕೆಲಸಕ್ಕೆ ಗೈರಾಗಿದ್ದರು. </p>.<p>ನೌಕರರಿಲ್ಲದೆ ಗುರುವಾರ ಮೈಸೂರು ರೇಷ್ಮೆ ಕಾರ್ಖಾನೆಯಲ್ಲಿ ಬಹುತೇಕ ಕೆಲಸ ಸ್ಥಗಿತಗೊಂಡಿದ್ದು, ಇದು ಮೈಸೂರು ರೇಷ್ಮೆ ಸೀರೆ ಉತ್ಪಾದನೆ ಮೇಲೆಯೂ ಪರಿಣಾಮ ಬೀರಿದೆ. ಶುಕ್ರವಾರವೂ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಉತ್ಪಾದನೆ ವ್ಯತ್ಯಯ ಆಗುವ ಸಾಧ್ಯತೆ ಇದೆ.</p>.<p>ಕಾರ್ಖಾನೆಯ 192 ನೌಕರರು ಕಳೆದ ಶನಿವಾರದಿಂದ ಪ್ರತಿಭಟನೆ ಆರಂಭಿಸಿದ್ದಾರೆ. ಇದರಿಂದ ಮೈಸೂರು ಹಾಗೂ ಚನ್ನಪಟ್ಟಣದಲ್ಲಿರುವ ರೇಷ್ಮೆ ಸೀರೆ ನೇಯ್ಗೆ ಕಾರ್ಖಾನೆಗಳಿಗೆ ನೂಲು ಪೂರೈಕೆಯು ಸ್ಥಗಿತಗೊಂಡಿದೆ. ಈ ಕುರಿತು ಪ್ರತಿಕ್ರಿಯೆಗೆ ಕಾರ್ಖಾನೆಯ ಅಧಿಕಾರಿಗಳು ದೂರವಾಣಿ ಸಂಪರ್ಕಕ್ಕೆ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>