<p>ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ (ಆಡಳಿತ) ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.</p>.<p>ಕುಸುಮಾಕುಮಾರಿ 2006ನೇ ಬ್ಯಾಚ್ನ ಕೆಎಎಸ್ ಅಧಿಕಾರಿ. ಈ ಹಿಂದೆ ಮೈಸೂರು ತಾಲ್ಲೂಕು ಪಂಚಾಯಿತಿ ಇಒ ಹಾಗೂ ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತರಾಗಿದ್ದರು. ಕೆಎಸ್ಒಯುನಲ್ಲಿ ಬಹುತೇಕ ಪ್ರಾಧ್ಯಾಪಕರೇ ಕುಲಸಚಿವರಾಗಿ ಕೆಲಸ ಮಾಡಿದ್ದು, ಇದೀಗ ಆ ಜಾಗಕ್ಕೆ ಅಧಿಕಾರಿ ಒಬ್ಬರನ್ನು ಸರ್ಕಾರ ನಿಯೋಜಿಸಿದೆ.</p>.<p>ಈವರೆಗೂ ಕುಲಸಚಿವರಾಗಿದ್ದ ಪ್ರೊ.ಎಸ್.ಕೆ. ನವೀನ್ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರು ಮಂಗಳೂರು ವಿ.ವಿ. ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ಮರು ನಿಯೋಜನೆಗೊಂಡಿದ್ದಾರೆ. ಕುಲಸಚಿವರಾಗಿದ್ದ ಪ್ರೊ.ಕೆ.ಬಿ.ಪ್ರವೀಣ್ ವಿರುದ್ಧ ಆರೋಪಗಳು ಕೇಳಿ ಬಂದ ಕಾರಣ ಏಳು ತಿಂಗಳ ಹಿಂದೆ ನವೀನ್ಕುಮಾರ್ ಅವರನ್ನು ಈ ಹುದ್ದೆಗೆ ಸರ್ಕಾರ ನೇಮಕ ಮಾಡಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-39-1663576131</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ (ಆಡಳಿತ) ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.</p>.<p>ಕುಸುಮಾಕುಮಾರಿ 2006ನೇ ಬ್ಯಾಚ್ನ ಕೆಎಎಸ್ ಅಧಿಕಾರಿ. ಈ ಹಿಂದೆ ಮೈಸೂರು ತಾಲ್ಲೂಕು ಪಂಚಾಯಿತಿ ಇಒ ಹಾಗೂ ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತರಾಗಿದ್ದರು. ಕೆಎಸ್ಒಯುನಲ್ಲಿ ಬಹುತೇಕ ಪ್ರಾಧ್ಯಾಪಕರೇ ಕುಲಸಚಿವರಾಗಿ ಕೆಲಸ ಮಾಡಿದ್ದು, ಇದೀಗ ಆ ಜಾಗಕ್ಕೆ ಅಧಿಕಾರಿ ಒಬ್ಬರನ್ನು ಸರ್ಕಾರ ನಿಯೋಜಿಸಿದೆ.</p>.<p>ಈವರೆಗೂ ಕುಲಸಚಿವರಾಗಿದ್ದ ಪ್ರೊ.ಎಸ್.ಕೆ. ನವೀನ್ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರು ಮಂಗಳೂರು ವಿ.ವಿ. ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ಮರು ನಿಯೋಜನೆಗೊಂಡಿದ್ದಾರೆ. ಕುಲಸಚಿವರಾಗಿದ್ದ ಪ್ರೊ.ಕೆ.ಬಿ.ಪ್ರವೀಣ್ ವಿರುದ್ಧ ಆರೋಪಗಳು ಕೇಳಿ ಬಂದ ಕಾರಣ ಏಳು ತಿಂಗಳ ಹಿಂದೆ ನವೀನ್ಕುಮಾರ್ ಅವರನ್ನು ಈ ಹುದ್ದೆಗೆ ಸರ್ಕಾರ ನೇಮಕ ಮಾಡಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-39-1663576131</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>