<p>ಮೈಸೂರು: ‘ರಾಜ್ಯ ಸರ್ಕಾರವು ಕೆರೆಗಳ ಬಫರ್ ವಲಯವನ್ನು 30 ಮೀಟರ್ಗಿಂತಲೂ ಕಡಿತಗೊಳಿಸಿರುವುದು ಕೆರೆಗಳ ಉಳಿವಿಗೆ ಕಂಟಕವಾಗಿದೆ’ ಎಂದು ಪರಿಸರ ಉಳಿಸಿ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.</p>.<p>‘ಇದರಿಂದ ಕೆರೆಗಳ ವಿಸ್ತೀರ್ಣ ಕುಂಠಿತವಾಗುತ್ತದೆ. ಹೂಳು ತೆಗೆಯುವುದು ಮುಂತಾದ ಜೀರ್ಣೋದ್ಧಾರ ಕೆಲಸಗಳು ಸಾಧ್ಯವಾಗುವುದಿಲ್ಲ. ಒಳಹರಿವಿನ ಮೂಲಗಳು, ಮಾರ್ಗವೂ ನಾಶವಾಗುತ್ತದೆ. ತಜ್ಞರ ಸಮಿತಿ ಸಲಹೆ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸದೇ ರಾಜಕೀಯ ಪ್ರಭಾವದಿಂದ ಈ ನಿಯಮ ಜಾರಿಗೆ ತರಲಾಗಿದೆ’ ಎಂದು ಸಮಿತಿ ಸಂಚಾಲಕ ಕಿರಣ್ ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.</p>.<p>‘ಕೂಡಲೇ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ಕನಿಷ್ಠ 100 ಮೀಟರ್ ಬಫರ್ ವಲಯ ನಿಗದಿ ಮಾಡಬೇಕು. ಈಗ ತಂದಿರುವ ನಿಯಮದ ಬಗ್ಗೆ ಕೆರೆ ಪ್ರಾಧಿಕಾರವು ಬಹಿರಂಗ ಹೇಳಿಕೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-39-1271582864</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ರಾಜ್ಯ ಸರ್ಕಾರವು ಕೆರೆಗಳ ಬಫರ್ ವಲಯವನ್ನು 30 ಮೀಟರ್ಗಿಂತಲೂ ಕಡಿತಗೊಳಿಸಿರುವುದು ಕೆರೆಗಳ ಉಳಿವಿಗೆ ಕಂಟಕವಾಗಿದೆ’ ಎಂದು ಪರಿಸರ ಉಳಿಸಿ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.</p>.<p>‘ಇದರಿಂದ ಕೆರೆಗಳ ವಿಸ್ತೀರ್ಣ ಕುಂಠಿತವಾಗುತ್ತದೆ. ಹೂಳು ತೆಗೆಯುವುದು ಮುಂತಾದ ಜೀರ್ಣೋದ್ಧಾರ ಕೆಲಸಗಳು ಸಾಧ್ಯವಾಗುವುದಿಲ್ಲ. ಒಳಹರಿವಿನ ಮೂಲಗಳು, ಮಾರ್ಗವೂ ನಾಶವಾಗುತ್ತದೆ. ತಜ್ಞರ ಸಮಿತಿ ಸಲಹೆ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸದೇ ರಾಜಕೀಯ ಪ್ರಭಾವದಿಂದ ಈ ನಿಯಮ ಜಾರಿಗೆ ತರಲಾಗಿದೆ’ ಎಂದು ಸಮಿತಿ ಸಂಚಾಲಕ ಕಿರಣ್ ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.</p>.<p>‘ಕೂಡಲೇ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ಕನಿಷ್ಠ 100 ಮೀಟರ್ ಬಫರ್ ವಲಯ ನಿಗದಿ ಮಾಡಬೇಕು. ಈಗ ತಂದಿರುವ ನಿಯಮದ ಬಗ್ಗೆ ಕೆರೆ ಪ್ರಾಧಿಕಾರವು ಬಹಿರಂಗ ಹೇಳಿಕೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-39-1271582864</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>