<p>ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಂಗಳವಾರ ಕಾರ್ಯಾಚರಣೆ ಕೈಗೊಂಡು, ದೇವನೂರು ಗ್ರಾಮದ ಎರಡು ಕಡೆಗಳಲ್ಲಿನ ಸುಮಾರು ₹80 ಕೋಟಿ ಮೌಲ್ಯದ 9 ಎಕರೆ ಒತ್ತುವರಿಯನ್ನು ತೆರವುಗೊಳಿಸಿದರು.</p>.<p>ಜೆಸಿಬಿ ಹಾಗೂ ಇಟಾಚಿ ಯಂತ್ರಗಳೊಂದಿಗೆ ಮುಂಜಾನೆ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳ ತಂಡವು ಮೈಸೂರು ತಾಲ್ಲೂಕಿನ ಕಸಬಾ ಹೋಬಳಿಯ ದೇವನೂರು ಗ್ರಾಮದ ಸರ್ವೆ ಸಂಖ್ಯೆ 155, 156, 153/2ರಲ್ಲಿನ 5 ಎಕರೆ 19 ಗುಂಟೆ ಹಾಗೂ ಸರ್ವೆ ಸಂಖ್ಯೆ 228/2, 229/1, 229/2 ರ ವ್ಯಾಪ್ತಿಯ 3 ಎಕರೆ 22 ಗುಂಟೆ ಜಾಗವನ್ನು ವಶಕ್ಕೆ ಪಡೆಯಿತು. ಇಲ್ಲಿ ನಿರ್ಮಿಸಲಾಗಿದ್ದ ಶೆಡ್ಗಳನ್ನು ತೆರವುಗೊಳಿಸಿತು.</p>.<p>ಈ ಜಾಗಗಳನ್ನು ಒತ್ತುವರಿ ಮಾಡಿಕೊಂಡು ಅಲ್ಲಿ ವಾಹನಗಳ ನಿಲುಗಡೆ ಮತ್ತಿತರ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿತ್ತು.</p>.<p>‘ತೆರವು ಸಂಬಂಧ ವಾರದ ಹಿಂದೆಯೇ ನೋಟಿಸ್ ನೀಡಲಾಗಿತ್ತು. ಆದರೂ ಒತ್ತುವರಿದಾರರು ತೆರವುಗೊಳಿಸುವ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದರು. ಕಾನೂನು ಪಾಲನೆ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಟ್ಟು ಒತ್ತುವರಿ ತೆರವುಗೊಳಿಸಿದ್ದೇವೆ’ ಎಂದು ಎಂಡಿಎ ಆಯುಕ್ತ ಕೆ.ಆರ್. ರಕ್ಷಿತ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-40-2066013205</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಂಗಳವಾರ ಕಾರ್ಯಾಚರಣೆ ಕೈಗೊಂಡು, ದೇವನೂರು ಗ್ರಾಮದ ಎರಡು ಕಡೆಗಳಲ್ಲಿನ ಸುಮಾರು ₹80 ಕೋಟಿ ಮೌಲ್ಯದ 9 ಎಕರೆ ಒತ್ತುವರಿಯನ್ನು ತೆರವುಗೊಳಿಸಿದರು.</p>.<p>ಜೆಸಿಬಿ ಹಾಗೂ ಇಟಾಚಿ ಯಂತ್ರಗಳೊಂದಿಗೆ ಮುಂಜಾನೆ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳ ತಂಡವು ಮೈಸೂರು ತಾಲ್ಲೂಕಿನ ಕಸಬಾ ಹೋಬಳಿಯ ದೇವನೂರು ಗ್ರಾಮದ ಸರ್ವೆ ಸಂಖ್ಯೆ 155, 156, 153/2ರಲ್ಲಿನ 5 ಎಕರೆ 19 ಗುಂಟೆ ಹಾಗೂ ಸರ್ವೆ ಸಂಖ್ಯೆ 228/2, 229/1, 229/2 ರ ವ್ಯಾಪ್ತಿಯ 3 ಎಕರೆ 22 ಗುಂಟೆ ಜಾಗವನ್ನು ವಶಕ್ಕೆ ಪಡೆಯಿತು. ಇಲ್ಲಿ ನಿರ್ಮಿಸಲಾಗಿದ್ದ ಶೆಡ್ಗಳನ್ನು ತೆರವುಗೊಳಿಸಿತು.</p>.<p>ಈ ಜಾಗಗಳನ್ನು ಒತ್ತುವರಿ ಮಾಡಿಕೊಂಡು ಅಲ್ಲಿ ವಾಹನಗಳ ನಿಲುಗಡೆ ಮತ್ತಿತರ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿತ್ತು.</p>.<p>‘ತೆರವು ಸಂಬಂಧ ವಾರದ ಹಿಂದೆಯೇ ನೋಟಿಸ್ ನೀಡಲಾಗಿತ್ತು. ಆದರೂ ಒತ್ತುವರಿದಾರರು ತೆರವುಗೊಳಿಸುವ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದರು. ಕಾನೂನು ಪಾಲನೆ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಟ್ಟು ಒತ್ತುವರಿ ತೆರವುಗೊಳಿಸಿದ್ದೇವೆ’ ಎಂದು ಎಂಡಿಎ ಆಯುಕ್ತ ಕೆ.ಆರ್. ರಕ್ಷಿತ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-40-2066013205</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>