<p>ಮೈಸೂರು: ಮಹದೇಶ್ವರ ಬೆಟ್ಟದ ನಾಗಮಲೆಗೆ ಭೇಟಿ ನೀಡುವ ಭಕ್ತರ ಮೇಲೆ ಚಿರತೆ ದಾಳಿ ನಡೆಯುತ್ತಿದ್ದು, ಭಕ್ತರಿಗೆ ಅರಣ್ಯ ಇಲಾಖೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಮೈಸೂರು ಕನ್ನಡ ವೇದಿಕೆ ಸದಸ್ಯರು ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟಿಸಿದರು.</p>.<p>ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ ಮಾತನಾಡಿ, ‘ಭಕ್ತರ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆಯಲು ಅರಣ್ಯ ಇಲಾಖೆಯ ಬೇಜವಾಬ್ದಾರಿಯೇ ಕಾರಣ. ಭಕ್ತರ ಮುಕ್ತ ಪ್ರವೇಶಕ್ಕೆ ಕಡಿವಾಣ ಹಾಕಿ, ನಾಗಮಲೆ ದರ್ಶನಕ್ಕೆ ಆನ್ಲೈನ್ ಮೂಲಕ ₹ 200 ಪ್ರವೇಶ ಶುಲ್ಕ ವಿಧಿಸಿ ಸುತ್ತೋಲೆ ಹೊರಡಿಸಿರುವುದು ವಿಷಾದನೀಯ. ಈ ಬಗ್ಗೆ ಕೂಡಲೇ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಭಕ್ತರಿಗೆ ಸೂಕ್ತ ರಕ್ಷಣೆ ನೀಡಬೇಕು. ಮಾರ್ಗದ ಉದ್ದಕ್ಕೂ ಅಲ್ಲಲ್ಲಿ ಗಾರ್ಡ್ ನೇಮಕ ಮಾಡಬೇಕು. ಇಲ್ಲದಿದ್ದರೆ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ನಾಲಾಬೀದಿ ರವಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಸಿದ್ದಪ್ಪ ಎಲ್ಐಸಿ, ಹೊನಕೆರೆ ಸ್ವಾಮಿ, ಗೋವಿಂದರಾಜು, ಗೋಪಿ, ಬೀಡಾಬಾಬು, ಮಾದಪ್ಪ, ರಮೇಶ್, ಸುನಿಲ್, ಸ್ವಾಮಿ ಗೈಡ್, ಸಾಯಿ ಚಾಮರಾಜು, ಶಿವಗೌಡ, ಚಿನ್ನಪ್ಪ, ಕಾವೇರಮ್ಮ, ಮಾಲಿನಿ, ಲಕ್ಷ್ಮೀಪತಿ, ನಾಗರಾಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-39-1851616042</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಮಹದೇಶ್ವರ ಬೆಟ್ಟದ ನಾಗಮಲೆಗೆ ಭೇಟಿ ನೀಡುವ ಭಕ್ತರ ಮೇಲೆ ಚಿರತೆ ದಾಳಿ ನಡೆಯುತ್ತಿದ್ದು, ಭಕ್ತರಿಗೆ ಅರಣ್ಯ ಇಲಾಖೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಮೈಸೂರು ಕನ್ನಡ ವೇದಿಕೆ ಸದಸ್ಯರು ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟಿಸಿದರು.</p>.<p>ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ ಮಾತನಾಡಿ, ‘ಭಕ್ತರ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆಯಲು ಅರಣ್ಯ ಇಲಾಖೆಯ ಬೇಜವಾಬ್ದಾರಿಯೇ ಕಾರಣ. ಭಕ್ತರ ಮುಕ್ತ ಪ್ರವೇಶಕ್ಕೆ ಕಡಿವಾಣ ಹಾಕಿ, ನಾಗಮಲೆ ದರ್ಶನಕ್ಕೆ ಆನ್ಲೈನ್ ಮೂಲಕ ₹ 200 ಪ್ರವೇಶ ಶುಲ್ಕ ವಿಧಿಸಿ ಸುತ್ತೋಲೆ ಹೊರಡಿಸಿರುವುದು ವಿಷಾದನೀಯ. ಈ ಬಗ್ಗೆ ಕೂಡಲೇ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಭಕ್ತರಿಗೆ ಸೂಕ್ತ ರಕ್ಷಣೆ ನೀಡಬೇಕು. ಮಾರ್ಗದ ಉದ್ದಕ್ಕೂ ಅಲ್ಲಲ್ಲಿ ಗಾರ್ಡ್ ನೇಮಕ ಮಾಡಬೇಕು. ಇಲ್ಲದಿದ್ದರೆ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ನಾಲಾಬೀದಿ ರವಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಸಿದ್ದಪ್ಪ ಎಲ್ಐಸಿ, ಹೊನಕೆರೆ ಸ್ವಾಮಿ, ಗೋವಿಂದರಾಜು, ಗೋಪಿ, ಬೀಡಾಬಾಬು, ಮಾದಪ್ಪ, ರಮೇಶ್, ಸುನಿಲ್, ಸ್ವಾಮಿ ಗೈಡ್, ಸಾಯಿ ಚಾಮರಾಜು, ಶಿವಗೌಡ, ಚಿನ್ನಪ್ಪ, ಕಾವೇರಮ್ಮ, ಮಾಲಿನಿ, ಲಕ್ಷ್ಮೀಪತಿ, ನಾಗರಾಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-39-1851616042</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>