<p><strong>ಮೈಸೂರು:</strong> ಜಯಲಕ್ಷ್ಮೀಪುರಂನ ಬಿ.ಎಂ ಹ್ಯಾಬಿಟ್ಯೂಟ್ ಮಾಲ್ನಲ್ಲಿ ಸೋಮವಾರ ಸಂಜೆ ಬ್ಯಾನರ್ ತೆರವುಗೊಳಿಸುವ ವೇಳೆ ಮಾಲ್ನ ಕಟ್ಟಡದಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಟೆಕ್ನಿಷಿಯನ್ ಮೃತಪಟ್ಟಿದ್ದು, ರಕ್ಷಿಸಲು ಹೋದ ಯುವಕನಿಗೆ ಗಂಭೀರ ಗಾಯಗಳಾಗಿವೆ.</p>.<p>ಹುಣಸೂರು ತಾಲ್ಲೂಕಿನ ನೇರಳಕುಪ್ಪೆ ಗ್ರಾಮದ ಸುನೀಲ್ (35) ಮೃತಪಟ್ಟವರು. ಅವರನ್ನು ರಕ್ಷಿಸಲು ಮುಂದಾದ ಗೋಕುಲಂನ ನಿವಾಸಿ ಚಂದ್ರು (22) ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>‘ಮಾಲ್ನಲ್ಲಿ ಟೆಕ್ನಿಶಿಯನ್ ಆಗಿದ್ದ ಸುನೀಲ್ ಸಂಜೆ 5 ಗಂಟೆ ಸಮಯದಲ್ಲಿ ಮಾಲ್ನ ಒಳ ಆವರಣದಲ್ಲಿ 60 ಅಡಿ ಎತ್ತರದಲ್ಲಿ ಅಳವಡಿಕೆಯಾಗಿದ್ದ ಬ್ಯಾನರ್ ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಪಿಒಪಿ ಬಾರ್ ಮೇಲೆ ಕಾಲಿಟ್ಟಿದ್ದಾರೆ. ತಕ್ಷಣವೇ ಬಾರ್ ಕುಸಿದು ಸುನೀಲ್ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಚಲನಚಿತ್ರ ವೀಕ್ಷಣೆಗೆ ಆಗಮಿಸಿದ್ದ ಚಂದ್ರು ಕೂಡ ಸ್ಥಳದಲ್ಲಿಯೇ ಇದ್ದು, ರಕ್ಷಣೆಗೆ ಮುಂದಾಗಿ ಕೆಳಗೆ ಬಿದ್ದಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆಗೆ ಕಟ್ಟಡದ ಮಾಲೀಕರಾದ ದೀಪಕ್ ಅವರ ನಿರ್ಲಕ್ಷ್ಯವೇ ಕಾರಣ ಎಂದು ಮೃತನ ತಂದೆ ದೂರು ನೀಡಿದ್ದು, ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಯಲಕ್ಷ್ಮೀಪುರಂನ ಬಿ.ಎಂ ಹ್ಯಾಬಿಟ್ಯೂಟ್ ಮಾಲ್ನಲ್ಲಿ ಸೋಮವಾರ ಸಂಜೆ ಬ್ಯಾನರ್ ತೆರವುಗೊಳಿಸುವ ವೇಳೆ ಮಾಲ್ನ ಕಟ್ಟಡದಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಟೆಕ್ನಿಷಿಯನ್ ಮೃತಪಟ್ಟಿದ್ದು, ರಕ್ಷಿಸಲು ಹೋದ ಯುವಕನಿಗೆ ಗಂಭೀರ ಗಾಯಗಳಾಗಿವೆ.</p>.<p>ಹುಣಸೂರು ತಾಲ್ಲೂಕಿನ ನೇರಳಕುಪ್ಪೆ ಗ್ರಾಮದ ಸುನೀಲ್ (35) ಮೃತಪಟ್ಟವರು. ಅವರನ್ನು ರಕ್ಷಿಸಲು ಮುಂದಾದ ಗೋಕುಲಂನ ನಿವಾಸಿ ಚಂದ್ರು (22) ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>‘ಮಾಲ್ನಲ್ಲಿ ಟೆಕ್ನಿಶಿಯನ್ ಆಗಿದ್ದ ಸುನೀಲ್ ಸಂಜೆ 5 ಗಂಟೆ ಸಮಯದಲ್ಲಿ ಮಾಲ್ನ ಒಳ ಆವರಣದಲ್ಲಿ 60 ಅಡಿ ಎತ್ತರದಲ್ಲಿ ಅಳವಡಿಕೆಯಾಗಿದ್ದ ಬ್ಯಾನರ್ ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಪಿಒಪಿ ಬಾರ್ ಮೇಲೆ ಕಾಲಿಟ್ಟಿದ್ದಾರೆ. ತಕ್ಷಣವೇ ಬಾರ್ ಕುಸಿದು ಸುನೀಲ್ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಚಲನಚಿತ್ರ ವೀಕ್ಷಣೆಗೆ ಆಗಮಿಸಿದ್ದ ಚಂದ್ರು ಕೂಡ ಸ್ಥಳದಲ್ಲಿಯೇ ಇದ್ದು, ರಕ್ಷಣೆಗೆ ಮುಂದಾಗಿ ಕೆಳಗೆ ಬಿದ್ದಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆಗೆ ಕಟ್ಟಡದ ಮಾಲೀಕರಾದ ದೀಪಕ್ ಅವರ ನಿರ್ಲಕ್ಷ್ಯವೇ ಕಾರಣ ಎಂದು ಮೃತನ ತಂದೆ ದೂರು ನೀಡಿದ್ದು, ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>