<p><strong>ಮೈಸೂರು:</strong> ಇಲ್ಲಿನ ಶ್ರೀರಾಂಪುರದ 59 ವರ್ಷದ ವ್ಯಕ್ತಿ ಆನ್ಲೈನ್ ವಂಚನೆಯಿಂದ ₹4 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಅಪರಿಚಿತ ವ್ಯಕ್ತಿ ವಾಟ್ಸ್ಆ್ಯಪ್ಗೆ ಮಾಡಿದ ಸಂದೇಶದಿಂದ ಪ್ರೇರಿತರಾಗಿ ಹೆಚ್ಚಿನ ಲಾಭದ ಉದ್ದೇಶದಿಂದ ಆನ್ಲೈನ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಬಂಡವಾಳ ಹೂಡಲು ಆತ ಹೇಳಿದ ಬ್ಯಾಂಕ್ ಖಾತೆಗೆ ₹4 ಲಕ್ಷ ಹಣ ವರ್ಗಾವಣೆ ಮಾಡಿದ್ದರು. ಬಳಿಕ ಹಣವನ್ನು ವಾಪಸ್ ಡ್ರಾ ಮಾಡಲು ಹೋದಾಗ ಹಣ ಬರದೇ ವಂಚನೆಯಾಗಿದೆ ಎಂದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<h2>ಟ್ರೇಡಿಂಗ್: ₹30 ಲಕ್ಷ ವಂಚನೆ</h2>.<p>ಮೈಸೂರು: ಟ್ರೇಡಿಂಗ್ ಹೆಸರಿನಲ್ಲಿ ಯುವತಿಯು ₹30 ಲಕ್ಷ ವಂಚಿಸಿದ್ದಾಳೆ ಎಂದು ಯಾದವಗಿರಿ ನಿವಾಸಿ ರಾಜ್ ಕುಮಾರ್ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<p>ಇಲವಾಲ ನಿವಾಸಿ ಲಾವಣ್ಯ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>'ಬೋಗಾದಿಯಲ್ಲಿ ವಾಸವಿದ್ದ ಲಾವಣ್ಯ ಅವರು ಟ್ರೇಡಿಂಗ್ ನಡೆಸುವುದಾಗಿ ಹೇಳಿ ನನ್ನಿಂದ ಹಣ ಪಡೆದಿದ್ದು, ಹಣವನ್ನು ನಗದು ರೂಪದಲ್ಲಿ ಹಾಗೂ ಬ್ಯಾಂಕ್ ಖಾತೆಗೂ ವರ್ಗಾವಣೆ ಮಾಡಿದ್ದೇನೆ. ಈಗ ಹಣ ಕೇಳಿದರೆ ವಾಪಸ್ ನೀಡದೇ ವಂಚನೆ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<h2>ಚಿನ್ನದ ನೆಕ್ಲೇಸ್ ಕಳವು</h2>.<p>ಮೈಸೂರು: ನಗರದ ಕೆಎಸ್ಆರ್ಟಿಸಿ ಗ್ರಾಮಾಂತರ ಬಸ್ ನಿಲ್ದಾಣ ಬಳಿಯ ಮಲ್ಬಾರ್ ಗೋಲ್ಡ್ ಅಂಡ್ ಡೈಮಂಡ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯು ₹2.64 ಲಕ್ಷ ಮೌಲ್ಯದ 23 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಕದ್ದು ಪರಾರಿಯಾಗಿದ್ದಾರೆ.</p>.<p>ಜುಲೈ 27ರಂದು ಅಂಗಡಿಗೆ ಆಗಮಿಸಿದ್ದ ಕಳ್ಳನು ಸಿಬ್ಬಂದಿಯ ಗಮನ ಬೇರೆಡೆ ಸೆಳೆದು ಕೌಂಟರ್ನಲ್ಲಿದ್ದ ಚಿನ್ನದ ನೆಕ್ಲೇಸ್ ಕಳವು ಮಾಡಿದ್ದಾನೆ ಎಂದು ಅಂಗಡಿ ಮ್ಯಾನೇಜರ್ ದೂರು ನೀಡಿದ್ದು, ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಶ್ರೀರಾಂಪುರದ 59 ವರ್ಷದ ವ್ಯಕ್ತಿ ಆನ್ಲೈನ್ ವಂಚನೆಯಿಂದ ₹4 ಲಕ್ಷ ಕಳೆದುಕೊಂಡಿದ್ದಾರೆ.</p>.<p>ಅಪರಿಚಿತ ವ್ಯಕ್ತಿ ವಾಟ್ಸ್ಆ್ಯಪ್ಗೆ ಮಾಡಿದ ಸಂದೇಶದಿಂದ ಪ್ರೇರಿತರಾಗಿ ಹೆಚ್ಚಿನ ಲಾಭದ ಉದ್ದೇಶದಿಂದ ಆನ್ಲೈನ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಬಂಡವಾಳ ಹೂಡಲು ಆತ ಹೇಳಿದ ಬ್ಯಾಂಕ್ ಖಾತೆಗೆ ₹4 ಲಕ್ಷ ಹಣ ವರ್ಗಾವಣೆ ಮಾಡಿದ್ದರು. ಬಳಿಕ ಹಣವನ್ನು ವಾಪಸ್ ಡ್ರಾ ಮಾಡಲು ಹೋದಾಗ ಹಣ ಬರದೇ ವಂಚನೆಯಾಗಿದೆ ಎಂದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<h2>ಟ್ರೇಡಿಂಗ್: ₹30 ಲಕ್ಷ ವಂಚನೆ</h2>.<p>ಮೈಸೂರು: ಟ್ರೇಡಿಂಗ್ ಹೆಸರಿನಲ್ಲಿ ಯುವತಿಯು ₹30 ಲಕ್ಷ ವಂಚಿಸಿದ್ದಾಳೆ ಎಂದು ಯಾದವಗಿರಿ ನಿವಾಸಿ ರಾಜ್ ಕುಮಾರ್ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<p>ಇಲವಾಲ ನಿವಾಸಿ ಲಾವಣ್ಯ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>'ಬೋಗಾದಿಯಲ್ಲಿ ವಾಸವಿದ್ದ ಲಾವಣ್ಯ ಅವರು ಟ್ರೇಡಿಂಗ್ ನಡೆಸುವುದಾಗಿ ಹೇಳಿ ನನ್ನಿಂದ ಹಣ ಪಡೆದಿದ್ದು, ಹಣವನ್ನು ನಗದು ರೂಪದಲ್ಲಿ ಹಾಗೂ ಬ್ಯಾಂಕ್ ಖಾತೆಗೂ ವರ್ಗಾವಣೆ ಮಾಡಿದ್ದೇನೆ. ಈಗ ಹಣ ಕೇಳಿದರೆ ವಾಪಸ್ ನೀಡದೇ ವಂಚನೆ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<h2>ಚಿನ್ನದ ನೆಕ್ಲೇಸ್ ಕಳವು</h2>.<p>ಮೈಸೂರು: ನಗರದ ಕೆಎಸ್ಆರ್ಟಿಸಿ ಗ್ರಾಮಾಂತರ ಬಸ್ ನಿಲ್ದಾಣ ಬಳಿಯ ಮಲ್ಬಾರ್ ಗೋಲ್ಡ್ ಅಂಡ್ ಡೈಮಂಡ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯು ₹2.64 ಲಕ್ಷ ಮೌಲ್ಯದ 23 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಕದ್ದು ಪರಾರಿಯಾಗಿದ್ದಾರೆ.</p>.<p>ಜುಲೈ 27ರಂದು ಅಂಗಡಿಗೆ ಆಗಮಿಸಿದ್ದ ಕಳ್ಳನು ಸಿಬ್ಬಂದಿಯ ಗಮನ ಬೇರೆಡೆ ಸೆಳೆದು ಕೌಂಟರ್ನಲ್ಲಿದ್ದ ಚಿನ್ನದ ನೆಕ್ಲೇಸ್ ಕಳವು ಮಾಡಿದ್ದಾನೆ ಎಂದು ಅಂಗಡಿ ಮ್ಯಾನೇಜರ್ ದೂರು ನೀಡಿದ್ದು, ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>