<p>ಮೈಸೂರು: ಇಲ್ಲಿನ ಮಣಿಪಾಲ್ ಆಸ್ಪತ್ರೆಯು ‘ಮಣಿಪಾಲ್ ಆರೋಗ್ಯ ಶೃಂಗ’ ಕಾರ್ಯಕ್ರಮದಲ್ಲಿ ‘ವಿಶ್ವ ಲಿವರ್ ದಿನ’ದ ಅಂಗವಾಗಿ ಮಾರ್ಗದರ್ಶನ ಕಾರ್ಯಕ್ರಮವನ್ನು ಈಚೆಗೆ ನಡೆಸಿತು.</p>.<p>‘ನಿಮ್ಮ ವೈದ್ಯರ ಬಗ್ಗೆ ತಿಳಿಯಿರಿ’ ಕಾರ್ಯಕ್ರಮದಲ್ಲಿ ತಜ್ಞ ವೈದ್ಯರನ್ನು ನೇರವಾಗಿ ಭೇಟಿಯಾಗಿ ಸಂದೇಹ ಪರಿಹರಿಸಿಕೊಳ್ಳುವ ಅವಕಾಶವನ್ನು ಸಾರ್ವಜನಿಕರಿಗೆ ಕಲ್ಪಿಸಲಾಯಿತು. 25 ಮಂದಿ ಭಾಗವಹಿಸಿದ್ದರು.</p>.<p>‘ಪದೇ ಪದೇ ಎದೆಯುರಿ, ಹೊಟ್ಟೆಯ ಹುಣ್ಣು, ಕರುಳಿನ ತೊಂದರೆಗಳು ಮತ್ತು ಮೂಲವ್ಯಾಧಿ ಕಾಣಿಸಿಕೊಳ್ಳುತ್ತಿದ್ದರೆ, ಅದನ್ನು ಕಡೆಗಣಿಸದೆ ವೈದ್ಯರ ಬಳಿಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಇಂತಹ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವುದರಿಂದ ಕ್ಯಾನ್ಸರ್ನಂತಹ ಗಂಭೀರ ಸಮಸ್ಯೆಗಳನ್ನು ತಡೆಗಟ್ಟಲು ಸಾಧ್ಯ’ ಎಂದು ವೈದ್ಯರು ತಿಳಿಸಿದರು.</p>.<p>‘ಸಮಯಕ್ಕೆ ಸರಿಯಾಗಿ ಸಮತೋಲಿತ ಆಹಾರ ಸೇವಿಸುವುದು, ದೈಹಿಕ ವ್ಯಾಯಾಮ ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವುದು ಅಗತ್ಯವಿದೆ. ಆರೋಗ್ಯದ ಸಮಸ್ಯೆ ಎದು ರಾದಾಗ ನಿರ್ಲಕ್ಷಿಸದೇ ವೈದ್ಯರ ಸಲಹೆ ಪಡೆಯಬೇಕು’ ಎಂದು ಹೇಳಿದರು.</p>.<p>ಮೆಡಿಕಲ್ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಸೀನಿಯರ್ ಕನ್ಸಲ್ಟೆಂಟ್ ಡಾ.ಸತೀಶ್ ರಾವ್ ಎ.ಕೆ., ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಯ ಸೀನಿಯರ್ ಕನ್ಸಲ್ಟೆಂಟ್ ಡಾ.ವಾಸುದೇವ್ ಪೈ ಹೊಸದುರ್ಗ, ಡಾ.ನಿಶ್ಚಯ್ ಆರ್., ಆಸ್ಪತ್ರೆಯ ನಿರ್ದೇಶಕ ಸಂದೀಪ್ ಪಟೇಲ್ ಬಿ.ಜೆ. ಮಾರ್ಗದರ್ಶನ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-39-664429109</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಇಲ್ಲಿನ ಮಣಿಪಾಲ್ ಆಸ್ಪತ್ರೆಯು ‘ಮಣಿಪಾಲ್ ಆರೋಗ್ಯ ಶೃಂಗ’ ಕಾರ್ಯಕ್ರಮದಲ್ಲಿ ‘ವಿಶ್ವ ಲಿವರ್ ದಿನ’ದ ಅಂಗವಾಗಿ ಮಾರ್ಗದರ್ಶನ ಕಾರ್ಯಕ್ರಮವನ್ನು ಈಚೆಗೆ ನಡೆಸಿತು.</p>.<p>‘ನಿಮ್ಮ ವೈದ್ಯರ ಬಗ್ಗೆ ತಿಳಿಯಿರಿ’ ಕಾರ್ಯಕ್ರಮದಲ್ಲಿ ತಜ್ಞ ವೈದ್ಯರನ್ನು ನೇರವಾಗಿ ಭೇಟಿಯಾಗಿ ಸಂದೇಹ ಪರಿಹರಿಸಿಕೊಳ್ಳುವ ಅವಕಾಶವನ್ನು ಸಾರ್ವಜನಿಕರಿಗೆ ಕಲ್ಪಿಸಲಾಯಿತು. 25 ಮಂದಿ ಭಾಗವಹಿಸಿದ್ದರು.</p>.<p>‘ಪದೇ ಪದೇ ಎದೆಯುರಿ, ಹೊಟ್ಟೆಯ ಹುಣ್ಣು, ಕರುಳಿನ ತೊಂದರೆಗಳು ಮತ್ತು ಮೂಲವ್ಯಾಧಿ ಕಾಣಿಸಿಕೊಳ್ಳುತ್ತಿದ್ದರೆ, ಅದನ್ನು ಕಡೆಗಣಿಸದೆ ವೈದ್ಯರ ಬಳಿಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಇಂತಹ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವುದರಿಂದ ಕ್ಯಾನ್ಸರ್ನಂತಹ ಗಂಭೀರ ಸಮಸ್ಯೆಗಳನ್ನು ತಡೆಗಟ್ಟಲು ಸಾಧ್ಯ’ ಎಂದು ವೈದ್ಯರು ತಿಳಿಸಿದರು.</p>.<p>‘ಸಮಯಕ್ಕೆ ಸರಿಯಾಗಿ ಸಮತೋಲಿತ ಆಹಾರ ಸೇವಿಸುವುದು, ದೈಹಿಕ ವ್ಯಾಯಾಮ ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವುದು ಅಗತ್ಯವಿದೆ. ಆರೋಗ್ಯದ ಸಮಸ್ಯೆ ಎದು ರಾದಾಗ ನಿರ್ಲಕ್ಷಿಸದೇ ವೈದ್ಯರ ಸಲಹೆ ಪಡೆಯಬೇಕು’ ಎಂದು ಹೇಳಿದರು.</p>.<p>ಮೆಡಿಕಲ್ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಸೀನಿಯರ್ ಕನ್ಸಲ್ಟೆಂಟ್ ಡಾ.ಸತೀಶ್ ರಾವ್ ಎ.ಕೆ., ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಯ ಸೀನಿಯರ್ ಕನ್ಸಲ್ಟೆಂಟ್ ಡಾ.ವಾಸುದೇವ್ ಪೈ ಹೊಸದುರ್ಗ, ಡಾ.ನಿಶ್ಚಯ್ ಆರ್., ಆಸ್ಪತ್ರೆಯ ನಿರ್ದೇಶಕ ಸಂದೀಪ್ ಪಟೇಲ್ ಬಿ.ಜೆ. ಮಾರ್ಗದರ್ಶನ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-39-664429109</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>