<p><strong>ಮೈಸೂರು</strong>: ‘ಮೈಸೂರಿನಲ್ಲಿ ಎಂಡಿಎಂಎ ಮಾದಕ ವಸ್ತು ತಯಾರಿಸುತ್ತಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ವಿಷಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗುವುದು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.</p><p>ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮೈಸೂರಿನ ಈ ಘಟನೆಯು ಬಹಳ ಆಶ್ಚರ್ಯ ಉಂಟು ಮಾಡಿದೆ. ಇಂತಹ ಚಟುವಟಿಕೆಗಳು ದೇಶದ ಯಾವ ಭಾಗದಲ್ಲೂ ನಡೆಯಬಾರದು’ ಎಂದರು.</p><p>‘ನರಸಿಂಹರಾಜ ಕ್ಷೇತ್ರದಲ್ಲಿ ಹೆಚ್ಚು ಸೆಲ್ಯೂಷನ್ ಹಾಗೂ ಮಾದಕವಸ್ತು ಮಾರಾಟವಾಗುತ್ತಿದೆ. ಈ ಬಗ್ಗೆ ನಮಗೆ ಸಾಕಷ್ಟು ದೂರುಗಳೂ ಬಂದಿವೆ. ಕೆಲ ಉದ್ಯಾನಗಳನ್ನು ಡ್ರಗ್ಸ್ ಹೆಸರಿನಲ್ಲಿಯೇ ಸ್ಥಳೀಯರು ಕರೆಯುವುದೂ ಇದೆ. ಈ ನಿಟ್ಟಿನಲ್ಲಿ ಸೂಕ್ತವಾದ ಕ್ರಮವನ್ನು ಕೇಂದ್ರದಿಂದ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.</p><p>‘ನಗರದ ಬಹುತೇಕ ಕಾಲೇಜು ಹಾಗೂ ವಿಶ್ವವಿದ್ಯಾಯಗಳಲ್ಲಿ ಮಾದಕವಸ್ತು ಮಾರಾಟ ಆಗುತ್ತಿರುವ ಬಗ್ಗೆ ದೂರು ಬಂದಿದೆ’ ಎಂದು ತಿಳಿಸಿದರು.</p><p>‘ಮೈಸೂರು ತವರು ಎಂಬುದು ಸಿದ್ದರಾಮಯ್ಯ ಅವರಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ನೆನಪಾಗುತ್ತದೆ. ಈಗ ಅಧಿಕಾರದಲ್ಲಿರುವ ಅವರು, ಕಾನೂನು–ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮೈಸೂರಿನಲ್ಲಿ ಎಂಡಿಎಂಎ ಮಾದಕ ವಸ್ತು ತಯಾರಿಸುತ್ತಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ವಿಷಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗುವುದು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.</p><p>ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮೈಸೂರಿನ ಈ ಘಟನೆಯು ಬಹಳ ಆಶ್ಚರ್ಯ ಉಂಟು ಮಾಡಿದೆ. ಇಂತಹ ಚಟುವಟಿಕೆಗಳು ದೇಶದ ಯಾವ ಭಾಗದಲ್ಲೂ ನಡೆಯಬಾರದು’ ಎಂದರು.</p><p>‘ನರಸಿಂಹರಾಜ ಕ್ಷೇತ್ರದಲ್ಲಿ ಹೆಚ್ಚು ಸೆಲ್ಯೂಷನ್ ಹಾಗೂ ಮಾದಕವಸ್ತು ಮಾರಾಟವಾಗುತ್ತಿದೆ. ಈ ಬಗ್ಗೆ ನಮಗೆ ಸಾಕಷ್ಟು ದೂರುಗಳೂ ಬಂದಿವೆ. ಕೆಲ ಉದ್ಯಾನಗಳನ್ನು ಡ್ರಗ್ಸ್ ಹೆಸರಿನಲ್ಲಿಯೇ ಸ್ಥಳೀಯರು ಕರೆಯುವುದೂ ಇದೆ. ಈ ನಿಟ್ಟಿನಲ್ಲಿ ಸೂಕ್ತವಾದ ಕ್ರಮವನ್ನು ಕೇಂದ್ರದಿಂದ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.</p><p>‘ನಗರದ ಬಹುತೇಕ ಕಾಲೇಜು ಹಾಗೂ ವಿಶ್ವವಿದ್ಯಾಯಗಳಲ್ಲಿ ಮಾದಕವಸ್ತು ಮಾರಾಟ ಆಗುತ್ತಿರುವ ಬಗ್ಗೆ ದೂರು ಬಂದಿದೆ’ ಎಂದು ತಿಳಿಸಿದರು.</p><p>‘ಮೈಸೂರು ತವರು ಎಂಬುದು ಸಿದ್ದರಾಮಯ್ಯ ಅವರಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ನೆನಪಾಗುತ್ತದೆ. ಈಗ ಅಧಿಕಾರದಲ್ಲಿರುವ ಅವರು, ಕಾನೂನು–ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>