<p><strong>ಮೈಸೂರು</strong>: ಪಿರಿಯಾಪಟ್ಟಣ ತಾಲ್ಲೂಕು ಬ್ಯಾಡರ ಬಿಳಗೂಲಿ ಗ್ರಾಮದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆದರೂ ಫಲಿತಾಂಶ ಘೋಷಿಸುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಾಸುದೇವ ಮೇಟಿ ಬಣದ ಸದಸ್ಯರು ಕಾಡಾ ಕಚೇರಿ ಎದುರುಸೋಮವಾರ ಪ್ರತಿಭಟಿಸಿದರು.</p>.<p>ಸಂಘಟನೆಯ ರಾಜ್ಯಾಧ್ಯಕ್ಷ ಲೋಕೇಶ್ ಜಿ. ಮಾತನಾಡಿ, ‘ಬ್ಯಾಡರ ಬಿಳಗುಲಿ ಹಾಲು ಉತ್ಪಾದಕರ ಸಂಘದ ನಿರ್ದೇಶಕರ ಚುನಾವಣೆ ನಾಲ್ಕು ತಿಂಗಳ ಹಿಂದೆ ನಡೆದಿದೆ. ಎರಡು ತಿಂಗಳ ಹಿಂದೆ ನಡೆದ ಅಧ್ಯಕ್ಷ– ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ 10 ನಿರ್ದೇಶಕರಲ್ಲಿ 6 ನಿರ್ದೇಶಕರು ಒಬ್ಬರನ್ನು ಆಯ್ಕೆ ಮಾಡಿದ್ದಾರೆ. ಆದರೆ ಚುನಾವಣಾಧಿಕಾರಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಡಿಸುತ್ತಿಲ್ಲ. ಈಗ ಮಂಡಳಿಯನ್ನು ವಜಾ ಮಾಡಿದ್ದೇವೆ ಎನ್ನುತ್ತಾರೆ’ ಎಂದು ಆರೋಪಿಸಿದರು.</p>.<p>‘ಸಂಘದಲ್ಲಿ ಆಡಳಿತ ಮಂಡಳಿ ಅಸ್ತಿತ್ವದಲ್ಲಿ ಇಲ್ಲದಿರುವುದರಿಂದ ಹಾಲು ಉತ್ಪಾದಕರಿಗೆ ತೊಂದರೆಗಳಾಗುತ್ತಿವೆ. ನಮ್ಮ ಸಂಕಷ್ಟಗಳನ್ನು ಕೇಳುವವರು ಇಲ್ಲದಾಗಿದೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ವಿಚಾರಣೆನಡೆಸಿ, ಫಲಿತಾಂಶ ಘೋಷಿಸಬೇಕು’ ಎಂದು ಆಗ್ರಹಿಸಿದರು.</p>.<p>ಸಂಘಟನೆಯ ಜಿಲ್ಲಾಧ್ಯಕ್ಷ ಲೋಕೇಶ್ ಗೌಡ ಜಿ., ರಾಜ್ಯ ಮಾಧ್ಯಮ ಕಾರ್ಯದರ್ಶಿ ಮೋಹನ್ ರಾಜ್, ತಾಲ್ಲೂಕು ಅಧ್ಯಕ್ಷರಾದ ನಟರಾಜ್, ಜಯಣ್ಣ, ಮನು, ಜಗದೀಶ್, ರಾಮಸ್ವಾಮಿ, ಶೈಲಾ, ಬಸವರಾಜ್, ರುದ್ರೇಗೌಡ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-38-1004028240</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಪಿರಿಯಾಪಟ್ಟಣ ತಾಲ್ಲೂಕು ಬ್ಯಾಡರ ಬಿಳಗೂಲಿ ಗ್ರಾಮದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆದರೂ ಫಲಿತಾಂಶ ಘೋಷಿಸುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಾಸುದೇವ ಮೇಟಿ ಬಣದ ಸದಸ್ಯರು ಕಾಡಾ ಕಚೇರಿ ಎದುರುಸೋಮವಾರ ಪ್ರತಿಭಟಿಸಿದರು.</p>.<p>ಸಂಘಟನೆಯ ರಾಜ್ಯಾಧ್ಯಕ್ಷ ಲೋಕೇಶ್ ಜಿ. ಮಾತನಾಡಿ, ‘ಬ್ಯಾಡರ ಬಿಳಗುಲಿ ಹಾಲು ಉತ್ಪಾದಕರ ಸಂಘದ ನಿರ್ದೇಶಕರ ಚುನಾವಣೆ ನಾಲ್ಕು ತಿಂಗಳ ಹಿಂದೆ ನಡೆದಿದೆ. ಎರಡು ತಿಂಗಳ ಹಿಂದೆ ನಡೆದ ಅಧ್ಯಕ್ಷ– ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ 10 ನಿರ್ದೇಶಕರಲ್ಲಿ 6 ನಿರ್ದೇಶಕರು ಒಬ್ಬರನ್ನು ಆಯ್ಕೆ ಮಾಡಿದ್ದಾರೆ. ಆದರೆ ಚುನಾವಣಾಧಿಕಾರಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಡಿಸುತ್ತಿಲ್ಲ. ಈಗ ಮಂಡಳಿಯನ್ನು ವಜಾ ಮಾಡಿದ್ದೇವೆ ಎನ್ನುತ್ತಾರೆ’ ಎಂದು ಆರೋಪಿಸಿದರು.</p>.<p>‘ಸಂಘದಲ್ಲಿ ಆಡಳಿತ ಮಂಡಳಿ ಅಸ್ತಿತ್ವದಲ್ಲಿ ಇಲ್ಲದಿರುವುದರಿಂದ ಹಾಲು ಉತ್ಪಾದಕರಿಗೆ ತೊಂದರೆಗಳಾಗುತ್ತಿವೆ. ನಮ್ಮ ಸಂಕಷ್ಟಗಳನ್ನು ಕೇಳುವವರು ಇಲ್ಲದಾಗಿದೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ವಿಚಾರಣೆನಡೆಸಿ, ಫಲಿತಾಂಶ ಘೋಷಿಸಬೇಕು’ ಎಂದು ಆಗ್ರಹಿಸಿದರು.</p>.<p>ಸಂಘಟನೆಯ ಜಿಲ್ಲಾಧ್ಯಕ್ಷ ಲೋಕೇಶ್ ಗೌಡ ಜಿ., ರಾಜ್ಯ ಮಾಧ್ಯಮ ಕಾರ್ಯದರ್ಶಿ ಮೋಹನ್ ರಾಜ್, ತಾಲ್ಲೂಕು ಅಧ್ಯಕ್ಷರಾದ ನಟರಾಜ್, ಜಯಣ್ಣ, ಮನು, ಜಗದೀಶ್, ರಾಮಸ್ವಾಮಿ, ಶೈಲಾ, ಬಸವರಾಜ್, ರುದ್ರೇಗೌಡ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-38-1004028240</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>