<p><strong>ಕೆ.ಆರ್.ನಗರ:</strong> ತಾಲ್ಲೂಕಿನ ಮೂಡಲುಕೊಪ್ಪಲು ಗ್ರಾಮ ಸಮಗ್ರ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಭರವಸೆ ನೀಡಿದರು.</p>.<p>ಗ್ರಾಮದಲ್ಲಿ ಶುಕ್ರವಾರ ನಡೆದ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ಕಾಂಕ್ರೀಟ್ ರಸ್ತೆ, ಬಾಕ್ಸ್ ಚರಂಡಿ ನಿರ್ಮಿಸಲು ಅಗತ್ಯ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.</p>.<p>ಕೆ.ಆರ್. ನಗರದಿಂದ ಮೂಡಲಕೊಪ್ಪಲು ಗ್ರಾಮಕ್ಕೆ ಸಂಪರ್ಕ ರಸ್ತೆ ಅಭಿವೃದ್ಧಿಗೊಳಿಸಲು ₹3 ಕೋಟಿ ಅನುದಾನ ಮಂಜೂರು ಆಗಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ಗ್ರಾಮದ ವಿಸ್ತೀರ್ಣ ಸರ್ವೆ ಮಾಡಿ ಚೆಕ್ಬಂದಿ ನಮೂದಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ತಹಶೀಲ್ದಾರ್ ಜಿ.ಸುರೇಂದ್ರ ಮೂರ್ತಿ, ತಾಲ್ಲೂಕು ಪಂಚಾಯಿತಿ ಇಒ ಕುಲದೀಪ್, ಗ್ಯಾರಂಟಿ ಯೋಜನೆಗಳ ಅನುಷ್ಠನಾ ಸಮಿತಿ ಅಧ್ಯಕ್ಷ ಎಂ.ಎಸ್.ಮಹದೇವ್, ಕಾಂಗ್ರೆಸ್ ವಕ್ತಾರ ಸಯ್ಯದ್ ಜಾಬೀರ್, ಮುಖಂಡರಾದ ಕಲ್ಲಹಳ್ಳಿ ಶ್ರೀನಿವಾಸ್, ಜಯಕುಮಾರ್, ಕೃಷ್ಣೇಗೌಡ, ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-38-531722578</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ನಗರ:</strong> ತಾಲ್ಲೂಕಿನ ಮೂಡಲುಕೊಪ್ಪಲು ಗ್ರಾಮ ಸಮಗ್ರ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಭರವಸೆ ನೀಡಿದರು.</p>.<p>ಗ್ರಾಮದಲ್ಲಿ ಶುಕ್ರವಾರ ನಡೆದ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ಕಾಂಕ್ರೀಟ್ ರಸ್ತೆ, ಬಾಕ್ಸ್ ಚರಂಡಿ ನಿರ್ಮಿಸಲು ಅಗತ್ಯ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.</p>.<p>ಕೆ.ಆರ್. ನಗರದಿಂದ ಮೂಡಲಕೊಪ್ಪಲು ಗ್ರಾಮಕ್ಕೆ ಸಂಪರ್ಕ ರಸ್ತೆ ಅಭಿವೃದ್ಧಿಗೊಳಿಸಲು ₹3 ಕೋಟಿ ಅನುದಾನ ಮಂಜೂರು ಆಗಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ಗ್ರಾಮದ ವಿಸ್ತೀರ್ಣ ಸರ್ವೆ ಮಾಡಿ ಚೆಕ್ಬಂದಿ ನಮೂದಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ತಹಶೀಲ್ದಾರ್ ಜಿ.ಸುರೇಂದ್ರ ಮೂರ್ತಿ, ತಾಲ್ಲೂಕು ಪಂಚಾಯಿತಿ ಇಒ ಕುಲದೀಪ್, ಗ್ಯಾರಂಟಿ ಯೋಜನೆಗಳ ಅನುಷ್ಠನಾ ಸಮಿತಿ ಅಧ್ಯಕ್ಷ ಎಂ.ಎಸ್.ಮಹದೇವ್, ಕಾಂಗ್ರೆಸ್ ವಕ್ತಾರ ಸಯ್ಯದ್ ಜಾಬೀರ್, ಮುಖಂಡರಾದ ಕಲ್ಲಹಳ್ಳಿ ಶ್ರೀನಿವಾಸ್, ಜಯಕುಮಾರ್, ಕೃಷ್ಣೇಗೌಡ, ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-38-531722578</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>