<p><strong>ಮೈಸೂರು:</strong> ‘ಸಾರ್ವಜನಿಕರು ಸಮಸ್ಯೆಗಳನ್ನು ತಂದಾಗ ಅವುಗಳನ್ನು ಆಲಿಸಿ ತ್ವರಿತವಾಗಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಮುಖವಾಗಿ ಗ್ರಾಮೀಣ ಜನರನ್ನು ಪದೇಪದೆ ಅಲೆದಾಡಿಸುವ ಕೆಲಸ ಮಾಡಬಾರದು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಧಿಕಾರಿಗಳಿಗೆ ತಾಕೀತು ಮಾಡಿದರು.</p><p>ನಗರದ ನಜರ್ಬಾದ್ನ ಮಿನಿ ವಿಧಾನಸೌಧದಲ್ಲಿರುವ ತಾಲ್ಲೂಕು ಕಚೇರಿಗೆ ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p><p>‘ತಾಲ್ಲೂಕು ಕಚೇರಿಯಲ್ಲಿನ ಕೆಲವು ಲೋಪದೋಷಗಳ ಕುರಿತು ಜನರು ನನ್ನ ಕಚೇರಿಗೆ ದೂರುಗಳನ್ನು ಸಲ್ಲಿಸಿದ್ದರು. ಹೀಗಾಗಿ, ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಜನರ ಕೆಲಸ ಮಾಡಿಕೊಡಲು ನಿರ್ಲಕ್ಷ್ಯ ವಹಿಸಿದರೆ ಕ್ರಮ ವಹಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p><p>‘ತಾಲ್ಲೂಕು ಕಚೇರಿಗಳಿಗೆ ಬರುವ ಹೆಚ್ಚಿನ ಜನರು ಗ್ರಾಮೀಣ ಭಾಗದವರಾಗಿರುತ್ತಾರೆ. ಅವರ ಅಹವಾಲುಗಳನ್ನು ತ್ವರಿತವಾಗಿ ಪರಿಹರಿಸಲು ಎಲ್ಲ ಅಧಿಕಾರಿಗಳು ಮುಂದಾಗಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಮುಂದೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ’ ಎಂದರು.</p><p>ಕಚೇರಿಗೆ ತಡವಾಗಿ ಬಂದ ಕೆಲವು ಸಿಬ್ಬಂದಿಯನ್ನು ಸಂಸದರು ಪ್ರಶ್ನಿಸಿದರು. ತಹಶೀಲ್ದಾರ್ ಮಹೇಶ್ ಕುಮಾರ್ ಅವರೊಂದಿಗೆ ಕಚೇರಿಯಲ್ಲಿ ಪರಿಶೀಲನೆ ನಡೆಸಿದರು.</p><p>‘ಕಚೇರಿಗೆ ಸಿಬ್ಬಂದಿ ತಡವಾಗಿ ಬರುವ ಹಾಗೂ ಕಚೇರಿಯಲ್ಲಿ ಇಲ್ಲದಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಸಮಸ್ಯೆ ಬಗೆಹರಿಸಲು ತಹಶೀಲ್ದಾರ್ಗೆ ಸೂಚನೆ ನೀಡಿದ್ದೇನೆ’ ಎಂದು ಸಂಸದರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p><p>‘ಕಚೇರಿಯ ಲಿಫ್ಟ್ ಕೆಟ್ಟಿತ್ತು. ಹಿರಿಯ ನಾಗರಿಕರಿಗೆ ಅನುಕೂಲ ಆಗಲೆಂದು ಅದನ್ನು ದುರಸ್ತಿ ಮಾಡಿಸಲಾಗಿದೆ. ಇದಲ್ಲದೇ ಜನರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಜವಾಬ್ದಾರಿ ವಹಿಸಿ ಕ್ರಮ ಕೈಗೊಳ್ಳಬೇಕು’ ಎಂದರು.</p><p>‘ತಾಲ್ಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಆಗುತ್ತಿರುವುದರಿಂದ ಜನರಿಗೆ ಬಹಳ ತೊಂದರೆಗಳಾಗುತ್ತಿವೆ. ಈ ನಿಟ್ಟಿನಲ್ಲಿ ಚುನಾವಣೆಯನ್ನು ಸಾಧ್ಯವಾದಷ್ಟು ಬೇಗ ನಡೆಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p><p>‘ತಾಲ್ಲೂಕು ಕಚೇರಿ ಜನಸ್ನೇಹಿಯಾಗಿ ರೂಪುಗೊಳ್ಳಬೇಕು. ಈ ನಿಟ್ಟನಲ್ಲಿ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಹಶೀಲ್ದಾರ್, ಅಧಿಕಾರಿಗೆ, ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ’ ಎಂದು ಸಂಸದರು ತಿಳಿಸಿದರು.</p><p><strong>ದಾಖಲೀಕರಣ ಪರಿಶೀಲನೆ:</strong> </p><p>ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ರಕ್ಷಣಾ ದಾಖಲೀಕರಣ ಯೋಜನೆ ಕುರಿತು ಸಂಸದರು ಪರಿಶೀಲನೆ ನಡೆಸಿದರು. ‘ಯೋಜನೆಗೆ ಮೈಸೂರನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ತಾಲ್ಲೂಕು ಕಚೇರಿಯಲ್ಲಿರುವ ಆಧುನಿಕ ಅಭಿಲೇಖಾಲಯ ಕಚೇರಿಗೆ ಭೇಟಿ ನೀಡಿ ದಾಖಲೆಗಳ ಡಿಜಿಟಲೀಕರಣ ಕುರಿತು ಮಾಹಿತಿ ಪಡೆದುಕೊಂಡೆ’ ಎಂದು ಹೇಳಿದರು.</p><p>‘ಹಲವು ದಶಕಗಳ ದಾಖಲೆಯ ಸಂರಕ್ಷಣೆ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರದ ಈ ಯೋಜನೆ ನಿಜಕ್ಕೂ ಜನಪರವಾಗಿದೆ’ ಎಂದರು.</p><p><strong>‘ಬೀದಿಬದಿ ವ್ಯಾಪಾರಿಗಳ ವಲಯ ಸ್ಥಾಪನೆಗೆ ಆದ್ಯತೆ’:</strong> </p><p>‘ನಗರದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು’ ಎಂದು ಯದುವೀರ್ ತಿಳಿಸಿದರು.</p><p>ಗುರುವಾರ ನಗರ ಪ್ರದಕ್ಷಿಣೆ ನಡೆಸಿ, ಬೀದಿಬದಿ ವ್ಯಾಪಾರಿಗಳೊಂದಿಗೆ ಸಂವಾದ ನಡೆಸಿದ ನಂತರ ಈ ಮಾಹಿತಿ ನೀಡಿದರು.</p><p>‘ಬೀದಿಬದಿ ವ್ಯಾಪಾರಿಗಳ ವಲಯಗಳು ಮುಖ್ಯವಾಗಿದ್ದು, ಇದನ್ನು ನಿರ್ಮಿಸಲು ನಾನು ಒತ್ತು ನೀಡುತ್ತೇನೆ. ಶೀಘ್ರದಲ್ಲೇ ಇತರ ಪ್ರದೇಶಗಳಿಗೂ ಭೇಟಿ ನೀಡಿ ಪರಿಶೀಲಿಸಲಾಗುವುದು’ ಎಂದರು.</p>
<p><strong>ಮೈಸೂರು:</strong> ‘ಸಾರ್ವಜನಿಕರು ಸಮಸ್ಯೆಗಳನ್ನು ತಂದಾಗ ಅವುಗಳನ್ನು ಆಲಿಸಿ ತ್ವರಿತವಾಗಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಮುಖವಾಗಿ ಗ್ರಾಮೀಣ ಜನರನ್ನು ಪದೇಪದೆ ಅಲೆದಾಡಿಸುವ ಕೆಲಸ ಮಾಡಬಾರದು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಧಿಕಾರಿಗಳಿಗೆ ತಾಕೀತು ಮಾಡಿದರು.</p><p>ನಗರದ ನಜರ್ಬಾದ್ನ ಮಿನಿ ವಿಧಾನಸೌಧದಲ್ಲಿರುವ ತಾಲ್ಲೂಕು ಕಚೇರಿಗೆ ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p><p>‘ತಾಲ್ಲೂಕು ಕಚೇರಿಯಲ್ಲಿನ ಕೆಲವು ಲೋಪದೋಷಗಳ ಕುರಿತು ಜನರು ನನ್ನ ಕಚೇರಿಗೆ ದೂರುಗಳನ್ನು ಸಲ್ಲಿಸಿದ್ದರು. ಹೀಗಾಗಿ, ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಜನರ ಕೆಲಸ ಮಾಡಿಕೊಡಲು ನಿರ್ಲಕ್ಷ್ಯ ವಹಿಸಿದರೆ ಕ್ರಮ ವಹಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p><p>‘ತಾಲ್ಲೂಕು ಕಚೇರಿಗಳಿಗೆ ಬರುವ ಹೆಚ್ಚಿನ ಜನರು ಗ್ರಾಮೀಣ ಭಾಗದವರಾಗಿರುತ್ತಾರೆ. ಅವರ ಅಹವಾಲುಗಳನ್ನು ತ್ವರಿತವಾಗಿ ಪರಿಹರಿಸಲು ಎಲ್ಲ ಅಧಿಕಾರಿಗಳು ಮುಂದಾಗಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಮುಂದೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ’ ಎಂದರು.</p><p>ಕಚೇರಿಗೆ ತಡವಾಗಿ ಬಂದ ಕೆಲವು ಸಿಬ್ಬಂದಿಯನ್ನು ಸಂಸದರು ಪ್ರಶ್ನಿಸಿದರು. ತಹಶೀಲ್ದಾರ್ ಮಹೇಶ್ ಕುಮಾರ್ ಅವರೊಂದಿಗೆ ಕಚೇರಿಯಲ್ಲಿ ಪರಿಶೀಲನೆ ನಡೆಸಿದರು.</p><p>‘ಕಚೇರಿಗೆ ಸಿಬ್ಬಂದಿ ತಡವಾಗಿ ಬರುವ ಹಾಗೂ ಕಚೇರಿಯಲ್ಲಿ ಇಲ್ಲದಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಸಮಸ್ಯೆ ಬಗೆಹರಿಸಲು ತಹಶೀಲ್ದಾರ್ಗೆ ಸೂಚನೆ ನೀಡಿದ್ದೇನೆ’ ಎಂದು ಸಂಸದರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p><p>‘ಕಚೇರಿಯ ಲಿಫ್ಟ್ ಕೆಟ್ಟಿತ್ತು. ಹಿರಿಯ ನಾಗರಿಕರಿಗೆ ಅನುಕೂಲ ಆಗಲೆಂದು ಅದನ್ನು ದುರಸ್ತಿ ಮಾಡಿಸಲಾಗಿದೆ. ಇದಲ್ಲದೇ ಜನರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಜವಾಬ್ದಾರಿ ವಹಿಸಿ ಕ್ರಮ ಕೈಗೊಳ್ಳಬೇಕು’ ಎಂದರು.</p><p>‘ತಾಲ್ಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಆಗುತ್ತಿರುವುದರಿಂದ ಜನರಿಗೆ ಬಹಳ ತೊಂದರೆಗಳಾಗುತ್ತಿವೆ. ಈ ನಿಟ್ಟಿನಲ್ಲಿ ಚುನಾವಣೆಯನ್ನು ಸಾಧ್ಯವಾದಷ್ಟು ಬೇಗ ನಡೆಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p><p>‘ತಾಲ್ಲೂಕು ಕಚೇರಿ ಜನಸ್ನೇಹಿಯಾಗಿ ರೂಪುಗೊಳ್ಳಬೇಕು. ಈ ನಿಟ್ಟನಲ್ಲಿ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಹಶೀಲ್ದಾರ್, ಅಧಿಕಾರಿಗೆ, ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ’ ಎಂದು ಸಂಸದರು ತಿಳಿಸಿದರು.</p><p><strong>ದಾಖಲೀಕರಣ ಪರಿಶೀಲನೆ:</strong> </p><p>ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ರಕ್ಷಣಾ ದಾಖಲೀಕರಣ ಯೋಜನೆ ಕುರಿತು ಸಂಸದರು ಪರಿಶೀಲನೆ ನಡೆಸಿದರು. ‘ಯೋಜನೆಗೆ ಮೈಸೂರನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ತಾಲ್ಲೂಕು ಕಚೇರಿಯಲ್ಲಿರುವ ಆಧುನಿಕ ಅಭಿಲೇಖಾಲಯ ಕಚೇರಿಗೆ ಭೇಟಿ ನೀಡಿ ದಾಖಲೆಗಳ ಡಿಜಿಟಲೀಕರಣ ಕುರಿತು ಮಾಹಿತಿ ಪಡೆದುಕೊಂಡೆ’ ಎಂದು ಹೇಳಿದರು.</p><p>‘ಹಲವು ದಶಕಗಳ ದಾಖಲೆಯ ಸಂರಕ್ಷಣೆ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರದ ಈ ಯೋಜನೆ ನಿಜಕ್ಕೂ ಜನಪರವಾಗಿದೆ’ ಎಂದರು.</p><p><strong>‘ಬೀದಿಬದಿ ವ್ಯಾಪಾರಿಗಳ ವಲಯ ಸ್ಥಾಪನೆಗೆ ಆದ್ಯತೆ’:</strong> </p><p>‘ನಗರದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು’ ಎಂದು ಯದುವೀರ್ ತಿಳಿಸಿದರು.</p><p>ಗುರುವಾರ ನಗರ ಪ್ರದಕ್ಷಿಣೆ ನಡೆಸಿ, ಬೀದಿಬದಿ ವ್ಯಾಪಾರಿಗಳೊಂದಿಗೆ ಸಂವಾದ ನಡೆಸಿದ ನಂತರ ಈ ಮಾಹಿತಿ ನೀಡಿದರು.</p><p>‘ಬೀದಿಬದಿ ವ್ಯಾಪಾರಿಗಳ ವಲಯಗಳು ಮುಖ್ಯವಾಗಿದ್ದು, ಇದನ್ನು ನಿರ್ಮಿಸಲು ನಾನು ಒತ್ತು ನೀಡುತ್ತೇನೆ. ಶೀಘ್ರದಲ್ಲೇ ಇತರ ಪ್ರದೇಶಗಳಿಗೂ ಭೇಟಿ ನೀಡಿ ಪರಿಶೀಲಿಸಲಾಗುವುದು’ ಎಂದರು.</p>