<p>ಮೈಸೂರು: ‘ಸಂಗೀತ ಕ್ಷೇತ್ರದಲ್ಲಿ ಮೈಸೂರು ತನ್ನದೇ ಛಾಪು ಮೂಡಿಸಿದ್ದು, ಈ ಪರಂಪರೆಯನ್ನು ಸಂರಕ್ಷಿಸಬೇಕಿದೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.</p>.<p>ನಗರದ ಬಿಡಾರಂ ಕೃಷ್ಣಪ್ಪನವರ ಪ್ರಸನ್ನ ಸೀತಾರಾಮ ಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಸಂಗೀತ ಕಲಾನಿಧಿ ಮೈಸೂರು ವಾಸುದೇವಾಚಾರ್ಯರ 192ನೇ ಜನ್ಮದಿನೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮೈಸೂರಿನ ಪರಂಪರೆಯೊಂದಿಗೆ ಇಲ್ಲಿನ ಇತಿಹಾಸ, ಸಂಸ್ಕೃತಿಯನ್ನು ಬಿಂಬಿಸುವ ಪಾರಂಪರಿಕತೆಯ ಪ್ರತೀಕವಾದ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಣೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾಗರಿಕರು ಕೈಜೋಡಿಸಬೇಕು’ ಎಂದು ಕೋರಿದರು.</p>.<p>‘ಮೈಸೂರು ಅರಮನೆಯೊಂದಿಗೆ ವಾಸುದೇವಾಚಾರ್ಯರು ಅವಿನಾಭಾವ ಸಂಬಂಧ ಹೊಂದಿದ್ದರು’ ಎಂದು ನೆನೆದರು. ಶಾಸಕ ಟಿ.ಎಸ್.ಶ್ರೀವತ್ಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್, ಟಿ.ಎಸ್.ಸತ್ಯವತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-37-1222863837</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಸಂಗೀತ ಕ್ಷೇತ್ರದಲ್ಲಿ ಮೈಸೂರು ತನ್ನದೇ ಛಾಪು ಮೂಡಿಸಿದ್ದು, ಈ ಪರಂಪರೆಯನ್ನು ಸಂರಕ್ಷಿಸಬೇಕಿದೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.</p>.<p>ನಗರದ ಬಿಡಾರಂ ಕೃಷ್ಣಪ್ಪನವರ ಪ್ರಸನ್ನ ಸೀತಾರಾಮ ಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಸಂಗೀತ ಕಲಾನಿಧಿ ಮೈಸೂರು ವಾಸುದೇವಾಚಾರ್ಯರ 192ನೇ ಜನ್ಮದಿನೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮೈಸೂರಿನ ಪರಂಪರೆಯೊಂದಿಗೆ ಇಲ್ಲಿನ ಇತಿಹಾಸ, ಸಂಸ್ಕೃತಿಯನ್ನು ಬಿಂಬಿಸುವ ಪಾರಂಪರಿಕತೆಯ ಪ್ರತೀಕವಾದ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಣೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾಗರಿಕರು ಕೈಜೋಡಿಸಬೇಕು’ ಎಂದು ಕೋರಿದರು.</p>.<p>‘ಮೈಸೂರು ಅರಮನೆಯೊಂದಿಗೆ ವಾಸುದೇವಾಚಾರ್ಯರು ಅವಿನಾಭಾವ ಸಂಬಂಧ ಹೊಂದಿದ್ದರು’ ಎಂದು ನೆನೆದರು. ಶಾಸಕ ಟಿ.ಎಸ್.ಶ್ರೀವತ್ಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್, ಟಿ.ಎಸ್.ಸತ್ಯವತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-37-1222863837</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>