<p><strong>ನಂಜನಗೂಡು:</strong> ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ₹ 2 ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಸ್ಥರು ಮಂಗಳವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮಹದೇವ್ ಮಾತನಾಡಿ, ‘ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಗೋಳೂರು, ದೇವರಸನಹಳ್ಳಿ, ಹೊಸೂರು, ಕೆಬ್ಬೇಪುರ, ಉಪ್ಪಿನಹಳ್ಳಿ ಹಾಗೂ ಕೋಡಿ ನರಸೀಪುರ ಗ್ರಾಮಗಳ ಅಭಿವೃದ್ಧಿಗೆ 2020ರಿಂದ 2025ನೇ ಸಾಲಿನವರೆಗೆ ಬಿಡುಗಡೆಯಾಗಿರುವ ಅನುದಾನ ದುರ್ಬಳಕೆಯಾಗಿದ್ದು, ಪಂಚಾಯಿತಿಯಲ್ಲಿ ₹ 2 ಕೋಟಿಗೂ ಅಧಿಕ ಅವ್ಯವಹಾರ ನಡೆದಿದೆ. ಈ ಬಗ್ಗೆ ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಲಾಗಿದೆ. ಆದರೂ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.</p>.<p>ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲಾಗಿ ಅಧಿಕಾರಿಗಳು ಅವರನ್ನು ರಕ್ಷಿಸುತ್ತಿದ್ದಾರೆ. 14 ಮತ್ತು 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಒಂದೇ ಕಾಮಗಾರಿಗೆ ಎರಡು ಬಿಲ್ ಮಂಜೂರು ಮಾಡಲಾಗಿದೆ. ರಸ್ತೆ ಕಾಮಗಾರಿ, ವಿದ್ಯುತ್ ಬಲ್ಬ್ ಖರೀದಿ, ಕಸದ ಬುಟ್ಟಿ ಖರೀದಿ ಹಾಗೂ ಕುಡಿಯುವ ನೀರು ಪೂರೈಕೆ ಸಾಮಗ್ರಿಗಳ ಖರೀದಿಯಲ್ಲಿ ನಕಲಿ ಬಿಲ್ ತಯಾರಿಸಿ ಹಣ ಮಂಜೂರು ಮಾಡಲಾಗಿದೆ. ಪಂಚಾಯಿತಿ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ಸ್ಮಶಾನದ ಅಭಿವೃದ್ಧಿ ಹೆಸರಿನಲ್ಲಿ ಬೋಗಸ್ ಬಿಲ್ ಮಾಡಲಾಗಿದೆ. ಖಾಸಗಿ ಸಂಸ್ಥೆಯವರು ಸಿಎಸ್ಆರ್ ಅನುದಾನದಲ್ಲಿ ಮಾಡಿರುವ ಕೆರೆ ಅಭಿವೃದ್ಧಿ ಹಾಗೂ ಶಾಲಾಭಿವೃದ್ಧಿಗೂ ನಕಲಿ ಬಿಲ್ ತಯಾರಿಸಿ ಹಣ ಮಂಜೂರು ಮಾಡಲಾಗಿದೆ ಎಂದು ದೂರಿದರು.</p>.<p>ದೇವರಸನಹಳ್ಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯೂ ಕಳಪೆಯಾಗಿದ್ದು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಗುಣಮಟ್ಟ ಪರಿಶೀಲನೆ ಮಾಡಬೇಕು. ಅವ್ಯವಹಾರ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮುದಿನ ದಿನಗಳಲ್ಲಿ ತೀವ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಮನವಿ ಸ್ವೀಕರಿಸಿದ ತಾಲ್ಲೂಕು ಪಂಚಾಯಿತಿ ಇಒ ಜೆರಾಲ್ಡ್ ರಾಜೇಶ್, ‘ಈ ಸಂಬಂಧ ಹಿರಿಯ ಅಧಿಕಾರಿಗಳ ಗಮನ ಸೆಳೆದು ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಬಳಿಕ ಪ್ರತಿಭಟನಕಾರರು ಧರಣಿ ಕೈ ಬಿಟ್ಟರು. ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಮಹದೇವ್, ನಿಧಿ ಸುರೇಶ್, ನಾಗಯ್ಯ, ರಾಜು, ಮಹದೇವಸ್ವಾಮಿ, ಕರಿಯಯ್ಯ, ಕಲ್ಲಯ್ಯ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-38-1155908050</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು:</strong> ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ₹ 2 ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಸ್ಥರು ಮಂಗಳವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮಹದೇವ್ ಮಾತನಾಡಿ, ‘ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಗೋಳೂರು, ದೇವರಸನಹಳ್ಳಿ, ಹೊಸೂರು, ಕೆಬ್ಬೇಪುರ, ಉಪ್ಪಿನಹಳ್ಳಿ ಹಾಗೂ ಕೋಡಿ ನರಸೀಪುರ ಗ್ರಾಮಗಳ ಅಭಿವೃದ್ಧಿಗೆ 2020ರಿಂದ 2025ನೇ ಸಾಲಿನವರೆಗೆ ಬಿಡುಗಡೆಯಾಗಿರುವ ಅನುದಾನ ದುರ್ಬಳಕೆಯಾಗಿದ್ದು, ಪಂಚಾಯಿತಿಯಲ್ಲಿ ₹ 2 ಕೋಟಿಗೂ ಅಧಿಕ ಅವ್ಯವಹಾರ ನಡೆದಿದೆ. ಈ ಬಗ್ಗೆ ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಲಾಗಿದೆ. ಆದರೂ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.</p>.<p>ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲಾಗಿ ಅಧಿಕಾರಿಗಳು ಅವರನ್ನು ರಕ್ಷಿಸುತ್ತಿದ್ದಾರೆ. 14 ಮತ್ತು 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಒಂದೇ ಕಾಮಗಾರಿಗೆ ಎರಡು ಬಿಲ್ ಮಂಜೂರು ಮಾಡಲಾಗಿದೆ. ರಸ್ತೆ ಕಾಮಗಾರಿ, ವಿದ್ಯುತ್ ಬಲ್ಬ್ ಖರೀದಿ, ಕಸದ ಬುಟ್ಟಿ ಖರೀದಿ ಹಾಗೂ ಕುಡಿಯುವ ನೀರು ಪೂರೈಕೆ ಸಾಮಗ್ರಿಗಳ ಖರೀದಿಯಲ್ಲಿ ನಕಲಿ ಬಿಲ್ ತಯಾರಿಸಿ ಹಣ ಮಂಜೂರು ಮಾಡಲಾಗಿದೆ. ಪಂಚಾಯಿತಿ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ಸ್ಮಶಾನದ ಅಭಿವೃದ್ಧಿ ಹೆಸರಿನಲ್ಲಿ ಬೋಗಸ್ ಬಿಲ್ ಮಾಡಲಾಗಿದೆ. ಖಾಸಗಿ ಸಂಸ್ಥೆಯವರು ಸಿಎಸ್ಆರ್ ಅನುದಾನದಲ್ಲಿ ಮಾಡಿರುವ ಕೆರೆ ಅಭಿವೃದ್ಧಿ ಹಾಗೂ ಶಾಲಾಭಿವೃದ್ಧಿಗೂ ನಕಲಿ ಬಿಲ್ ತಯಾರಿಸಿ ಹಣ ಮಂಜೂರು ಮಾಡಲಾಗಿದೆ ಎಂದು ದೂರಿದರು.</p>.<p>ದೇವರಸನಹಳ್ಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯೂ ಕಳಪೆಯಾಗಿದ್ದು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಗುಣಮಟ್ಟ ಪರಿಶೀಲನೆ ಮಾಡಬೇಕು. ಅವ್ಯವಹಾರ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮುದಿನ ದಿನಗಳಲ್ಲಿ ತೀವ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಮನವಿ ಸ್ವೀಕರಿಸಿದ ತಾಲ್ಲೂಕು ಪಂಚಾಯಿತಿ ಇಒ ಜೆರಾಲ್ಡ್ ರಾಜೇಶ್, ‘ಈ ಸಂಬಂಧ ಹಿರಿಯ ಅಧಿಕಾರಿಗಳ ಗಮನ ಸೆಳೆದು ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಬಳಿಕ ಪ್ರತಿಭಟನಕಾರರು ಧರಣಿ ಕೈ ಬಿಟ್ಟರು. ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಮಹದೇವ್, ನಿಧಿ ಸುರೇಶ್, ನಾಗಯ್ಯ, ರಾಜು, ಮಹದೇವಸ್ವಾಮಿ, ಕರಿಯಯ್ಯ, ಕಲ್ಲಯ್ಯ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-38-1155908050</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>