<p><strong>ಮೈಸೂರು</strong>: ‘ನೀಟ್–ಯುಜಿ’ ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಳು ಮಾಡುತ್ತಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಇಲ್ಲಿನ ಅಶೋಕಪುರಂ ರೈಲು ನಿಲ್ದಾಣದಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಿದರು.</p>.<p>ಕಾಂಗ್ರೆಸ್ ಮುಖಂಡ ಎಂ.ಕೆ.ಸೋಮಶೇಖರ್ ಮಾತನಾಡಿ, ‘ದೇಶದ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯವನ್ನು ಕೇಂದ್ರ ಸರ್ಕಾರ ಕಸಿದಿದೆ. ಹಲವು ವರ್ಷದಿಂದಲೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಿರಂತರವಾಗಿ ನಡೆದಿದೆ. ಈವರೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾ ಗೊಳಿಸಿಲ್ಲವೇಕೆ’ ಎಂದು ಪ್ರಶ್ನಿಸಿದರು.</p>.<p>‘2024ರಲ್ಲೂ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಅದು ಮರುಕಳಿಸಿದೆ. ಇದುವರೆಗೂ 89 ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳನ್ನು ಬಿಜೆಪಿ ಸರ್ಕಾರ ಸೋರಿಕೆ ಮಾಡಿದೆ. ಸದೃಢ ಭಾರತವನ್ನು ಅವನತಿಯತ್ತ ಕೊಂಡೊಯ್ಯುತ್ತಿದೆ. ಮಕ್ಕಳ ಜೀವನದೊಂದಿಗೆ ಆಟವಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ನಾಚಿಕೆಯಾಗಬೇಕು’ ಎಂದರು.</p>.<p>‘ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ರದ್ದುಪಡಿಸಬೇಕು. ಆಯಾ ರಾಜ್ಯಗಳೇ ಸಿಇಟಿ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು’ ಎಂದೂ ಆಗ್ರಹಿಸಿದರು.</p>.<p>ಮಾಜಿ ಮೇಯರ್ ಟಿ.ಬಿ.ಚಿಕ್ಕಣ್ಣ, ಮುಖಂಡರಾದ ಎಂ.ಸುನೀಲ್, ಶೋಭಾ ಸುನೀಲ್, ರವಿಶಂಕರ್, ಜೋಗಿ ಮಹೇಶ್, ಪಟಾಕಿ ಮಂಜುನಾಥ್, ಪೈಲ್ವಾನ್ ಕೃಷ್ಣ, ಡೇರಿ ವೆಂಕಟೇಶ್, ಮೋಹನ್, ರೂಪೇಶ್, ಗುಣಶೇಖರ್, ಮಹ್ಮದ್ ಫಾರೂಖ್, ಜಗನ್ನಾಥ್ ಭೋವಿ, ಪ್ರತಾಪ್ರಾವ್, ವೀಣಾ, ಲತಾ ಮೋಹನ್, ಇಂದಿರಾ, ನಾಗರತ್ನ ಮಂಜುನಾಥ್, ಫಿರ್ದೋಸ್, ಸರಸ್ವತಿ, ಆಟೊ ಪುಟ್ಟಣ್ಣ, ಸಂತೋಷ್, ಗಣೇಶ್, ಸುರೇಶ್, ನಾಗರಾಜು, ಬಸವರಾಜು, ಸಮೀರ್ ರೆಹಮ್ಮತುಲ್ಲಾ, ಕಲೀಂ ಷರೀಫ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-39-413919526</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ನೀಟ್–ಯುಜಿ’ ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಳು ಮಾಡುತ್ತಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಇಲ್ಲಿನ ಅಶೋಕಪುರಂ ರೈಲು ನಿಲ್ದಾಣದಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಿದರು.</p>.<p>ಕಾಂಗ್ರೆಸ್ ಮುಖಂಡ ಎಂ.ಕೆ.ಸೋಮಶೇಖರ್ ಮಾತನಾಡಿ, ‘ದೇಶದ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯವನ್ನು ಕೇಂದ್ರ ಸರ್ಕಾರ ಕಸಿದಿದೆ. ಹಲವು ವರ್ಷದಿಂದಲೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಿರಂತರವಾಗಿ ನಡೆದಿದೆ. ಈವರೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾ ಗೊಳಿಸಿಲ್ಲವೇಕೆ’ ಎಂದು ಪ್ರಶ್ನಿಸಿದರು.</p>.<p>‘2024ರಲ್ಲೂ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಅದು ಮರುಕಳಿಸಿದೆ. ಇದುವರೆಗೂ 89 ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳನ್ನು ಬಿಜೆಪಿ ಸರ್ಕಾರ ಸೋರಿಕೆ ಮಾಡಿದೆ. ಸದೃಢ ಭಾರತವನ್ನು ಅವನತಿಯತ್ತ ಕೊಂಡೊಯ್ಯುತ್ತಿದೆ. ಮಕ್ಕಳ ಜೀವನದೊಂದಿಗೆ ಆಟವಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ನಾಚಿಕೆಯಾಗಬೇಕು’ ಎಂದರು.</p>.<p>‘ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ರದ್ದುಪಡಿಸಬೇಕು. ಆಯಾ ರಾಜ್ಯಗಳೇ ಸಿಇಟಿ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು’ ಎಂದೂ ಆಗ್ರಹಿಸಿದರು.</p>.<p>ಮಾಜಿ ಮೇಯರ್ ಟಿ.ಬಿ.ಚಿಕ್ಕಣ್ಣ, ಮುಖಂಡರಾದ ಎಂ.ಸುನೀಲ್, ಶೋಭಾ ಸುನೀಲ್, ರವಿಶಂಕರ್, ಜೋಗಿ ಮಹೇಶ್, ಪಟಾಕಿ ಮಂಜುನಾಥ್, ಪೈಲ್ವಾನ್ ಕೃಷ್ಣ, ಡೇರಿ ವೆಂಕಟೇಶ್, ಮೋಹನ್, ರೂಪೇಶ್, ಗುಣಶೇಖರ್, ಮಹ್ಮದ್ ಫಾರೂಖ್, ಜಗನ್ನಾಥ್ ಭೋವಿ, ಪ್ರತಾಪ್ರಾವ್, ವೀಣಾ, ಲತಾ ಮೋಹನ್, ಇಂದಿರಾ, ನಾಗರತ್ನ ಮಂಜುನಾಥ್, ಫಿರ್ದೋಸ್, ಸರಸ್ವತಿ, ಆಟೊ ಪುಟ್ಟಣ್ಣ, ಸಂತೋಷ್, ಗಣೇಶ್, ಸುರೇಶ್, ನಾಗರಾಜು, ಬಸವರಾಜು, ಸಮೀರ್ ರೆಹಮ್ಮತುಲ್ಲಾ, ಕಲೀಂ ಷರೀಫ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-39-413919526</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>