<p><strong>ಮೈಸೂರು:</strong> ‘ತಾಲ್ಲೂಕಿನ ಗುಡುಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಗುರುತಿಸಿರುವ ಭೂಮಿ ಫಲವತ್ತತೆಯಿಂದ ಕೂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿ ದಿಕ್ಕು ತಪ್ಪಿಸಿದ್ದಾರೆ. ಯೋಜನೆಗೆ ಬೇರೆಡೆ ಭೂಮಿ ನೀಡಬೇಕು’ ಎಂದು ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸೂಕ್ತ ಜಾಗವಲ್ಲವೆಂದು ತಿಳಿದಿದ್ದರೂ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹಟಕ್ಕೆ ಬಿದ್ದು, ರೈತರನ್ನು ಬೀದಿಪಾಲು ಮಾಡುತ್ತಿದ್ದಾರೆ’ ಎಂದು ದೂರಿದರು.</p>.<p>ದಲಿತ ಮುಖಂಡ ಶಂಭುಲಿಂಗಸ್ವಾಮಿ ಮಾತನಾಡಿ, ‘ಗುಡುಮಾದನಹಳ್ಳಿಯಲ್ಲಿ ನೀರಾವರಿ ಇದ್ದು, ಗೋಮಾಳದ ಭೂಮಿ ಕೊಡಲಾಗಿದೆ ಎಂದು ವಾದಿಸುವುದು ಸರಿಯಲ್ಲ. ಇಡೀ ಪರಿಸರ ನಾಶ ಆಗುತ್ತದೆ. ಪರಿಸರಕ್ಕೆ ಹಾನಿ ಮಾಡಬಾರದು. ಜಮೀನನ್ನು ರೈತರಿಗೆ ಮಂಜೂರು ಮಾಡಿ ಅಥವಾ ಗೋಮಾಳವಾಗಿ ಬಿಡಿ’ ಎಂದು ಒತ್ತಾಯಿಸಿದರು.</p>.<p>ಪರಿಸರವಾದಿ ಭಾನು ಪ್ರಕಾಶ್, ಸರ್ವೋದಯ ಕರ್ನಾಟಕ ಮುಖಂಡ ಉಗ್ರನರಸಿಂಹೇಗೌಡ, ಪಿ.ಮರಂಕಯ್ಯ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ತಾಲ್ಲೂಕಿನ ಗುಡುಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಗುರುತಿಸಿರುವ ಭೂಮಿ ಫಲವತ್ತತೆಯಿಂದ ಕೂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿ ದಿಕ್ಕು ತಪ್ಪಿಸಿದ್ದಾರೆ. ಯೋಜನೆಗೆ ಬೇರೆಡೆ ಭೂಮಿ ನೀಡಬೇಕು’ ಎಂದು ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸೂಕ್ತ ಜಾಗವಲ್ಲವೆಂದು ತಿಳಿದಿದ್ದರೂ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹಟಕ್ಕೆ ಬಿದ್ದು, ರೈತರನ್ನು ಬೀದಿಪಾಲು ಮಾಡುತ್ತಿದ್ದಾರೆ’ ಎಂದು ದೂರಿದರು.</p>.<p>ದಲಿತ ಮುಖಂಡ ಶಂಭುಲಿಂಗಸ್ವಾಮಿ ಮಾತನಾಡಿ, ‘ಗುಡುಮಾದನಹಳ್ಳಿಯಲ್ಲಿ ನೀರಾವರಿ ಇದ್ದು, ಗೋಮಾಳದ ಭೂಮಿ ಕೊಡಲಾಗಿದೆ ಎಂದು ವಾದಿಸುವುದು ಸರಿಯಲ್ಲ. ಇಡೀ ಪರಿಸರ ನಾಶ ಆಗುತ್ತದೆ. ಪರಿಸರಕ್ಕೆ ಹಾನಿ ಮಾಡಬಾರದು. ಜಮೀನನ್ನು ರೈತರಿಗೆ ಮಂಜೂರು ಮಾಡಿ ಅಥವಾ ಗೋಮಾಳವಾಗಿ ಬಿಡಿ’ ಎಂದು ಒತ್ತಾಯಿಸಿದರು.</p>.<p>ಪರಿಸರವಾದಿ ಭಾನು ಪ್ರಕಾಶ್, ಸರ್ವೋದಯ ಕರ್ನಾಟಕ ಮುಖಂಡ ಉಗ್ರನರಸಿಂಹೇಗೌಡ, ಪಿ.ಮರಂಕಯ್ಯ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>