<p><strong>ಮೈಸೂರು:</strong> ‘ಶುಶ್ರೂಷಕರು ಆರೋಗ್ಯ ಕ್ಷೇತ್ರದ ಬೆನ್ನೆಲುಬು ಇದ್ದಂತೆ’ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಹೇಳಿದರು.</p>.<p>ನಗರದ ಜೆಎಸ್ಎಸ್ ಆಸ್ಪತ್ರೆಯ ರಾಜೇಂದ್ರ ಶತಮಾನೋತ್ಸವ ಭವನದಲ್ಲಿ ಜೆಎಸ್ಎಸ್ ವಿದ್ಯಾಪೀಠ, ಜೆಎಸ್ಎಸ್ ಕಾಲೇಜ್ ಆಫ್ ನರ್ಸಿಂಗ್, ಜೆಎಸ್ಎಸ್ ಸ್ಕೂಲ್ ಆಫ್ ನರ್ಸಿಂಗ್ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ‘ವಿಶ್ವ ಶುಶ್ರೂಷಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಆರೋಗ್ಯ ಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುವ ಶುಶ್ರೂಷಕರು ಪ್ರಮುಖರಾಗಿದ್ದು, ಸಂಕಷ್ಟದಲ್ಲಿರುವ ರೋಗಿಗಳನ್ನು ಆರೈಕೆ ಮಾಡುವ ಕಾರ್ಯ ಮಹತ್ವದ್ದಾಗಿದೆ’ ಎಂದರು.</p>.<p>‘ಶುಶ್ರೂಷಕರು ಇಲ್ಲದೆ ಆರೋಗ್ಯ ಕ್ಷೇತ್ರ ಅಸಾಧ್ಯವಾಗಿದ್ದು, ಇದನ್ನು ಕೋವಿಡ್ ಸಂದರ್ಭದಲ್ಲಿ ನೋಡಿದ್ದೇವೆ. ಇಂದು ಸಮಾಜದಲ್ಲಿ ಅವರನ್ನು ಗುರುತಿಸುವ ಕೆಲಸವಾಗುತ್ತಿದೆ. ಇದು ಶ್ಲಾಘನೀಯ’ ಎಂದು ತಿಳಿಸಿದರು.</p>.<p>‘ರೋಗಿಗೆ ವೈದ್ಯರು ನೀಡುವ ಚಿಕಿತ್ಸೆ ಎಷ್ಟು ಮುಖ್ಯವೋ, ಚಿಕಿತ್ಸೆ ನಂತರದ ಆರೈಕೆಯೂ ಅಷ್ಟೆ ಮುಖ್ಯ. ರೋಗಿಗಳ ಆರೈಕೆಯಲ್ಲಿ ವೈದ್ಯರಿಗಿಂತ ಹೆಚ್ಚಿನ ಪಾತ್ರವನ್ನು ಶುಶ್ರೂಷಕರು ವಹಿಸುವವರು. ಕೇವಲ ಆರೋಗ್ಯ ಸೇವೆ ನೀಡುವವರು ಮಾತ್ರವಲ್ಲ, ಮಾನವೀಯತೆಯ ರಕ್ಷಕರು’ ಎಂದು ಅಭಿಪ್ರಾಯಪಟ್ಟರು.</p>.<p>‘ನರ್ಸ್ಗಳ ಸೇವೆ ತಾಯಿ ಆರೈಕೆಯಂತಿರುತ್ತದೆ. ವೈದ್ಯಕೀಯ ಸೇವೆಯಲ್ಲಿ ನರ್ಸಿಂಗ್ ಕ್ಷೇತ್ರದಲ್ಲಿ ಪ್ರಗತಿ ಕಾಣುವ ಮೂಲಕ ಎಲ್ಲರೂ ಆರೋಗ್ಯ ಸೇವೆಯಲ್ಲಿ ತೊಡಗುವುದು ಮುಖ್ಯವಾಗಬೇಕು’ ಎಂದು ಸಲಹೆ ನೀಡಿದರು.</p>.<p>‘ನರ್ಸಿಂಗ್ ವೃತ್ತಿಯು ಪ್ರಸ್ತುತ ಮತ್ತು ಭವಿಷ್ಯದಲ್ಲಿ ಅತ್ಯಂತ ಹೆಚ್ಚಿನ ಬೇಡಿಕೆ ಹೊಂದಿರುವ ಉದ್ಯೋಗಗಳಲ್ಲಿ ಒಂದಾಗಿದೆ. ಹೆಚ್ಚುತ್ತಿರುವ ಜನಸಂಖ್ಯೆ, ವಯಸ್ಸಾದವರ ಆರೈಕೆ ಮತ್ತು ಆರೋಗ್ಯ ರಕ್ಷಣಾ ಮೂಲಸೌಕರ್ಯಗಳ ವಿಸ್ತರಣೆಯಿಂದಾಗಿ ಈ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ನಿರಂತರವಾಗಿ ಹೆಚ್ಚುತ್ತಿವೆ’ ಎಂದು ತಿಳಿಸಿದರು.</p>.<p>ಮೃತ್ಯುಂಜಯಪ್ಪ ಮ್ಯಾನೇಜಿಂಗ್ ಟ್ರಸ್ಟಿ ಸುಧಾ ಮೃತ್ಯುಂಜಯಪ್ಪ ಮಾತನಾಡಿ, ‘ಫ್ಲಾರೆನ್ಸ್ ನೈಟಿಂಗೇಲ್ ಅವರು ಮಾಡಿದ ಸೇವೆ ವಿಶ್ವಕ್ಕೆ ಮಾದರಿಯಾಗಿದೆ. ನರ್ಸಿಂಗ್ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಶುಶ್ರೂಷಕರು ಅವರನ್ನು ಮಾದರಿಯಾಗಿಸಿಕೊಳ್ಳಬೇಕು’ ಎಂದರು.</p>.<p>ಸಮಾರಂಭದಲ್ಲಿ ನರ್ಸಿಂಗ್ ಕ್ಷೇತ್ರದಲ್ಲಿ ಉತ್ತಮ ಸೇವೆ ನೀಡಿದವರನ್ನು ಸನ್ಮಾನಿಸಲಾಯಿತು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಸಿ.ಜಿ.ಬೆಟಸೂರಮಠ ವಹಿಸಿದ್ದರು. ಜೆಎಸ್ಎಸ್ ಆಸ್ಪತ್ರೆ ನಿರ್ದೇಶಕ ಸಿ.ಪಿ.ಮಧು, ವೈದ್ಯಕೀಯ ಶಿಕ್ಷಣ ವಿಭಾಗ ನಿರ್ದೇಶಕ ಆರ್.ಮಹೇಶ್, ಜೆಎಸ್ಎಸ್ ಆಸ್ಪತ್ರೆ ನರ್ಸಿಂಗ್ ಸೇವೆಗಳ ಮುಖ್ಯಸ್ಥರಾದ ಜಾನೆಟ್ ಮಥಿಯಾಸ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-39-1095022429</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಶುಶ್ರೂಷಕರು ಆರೋಗ್ಯ ಕ್ಷೇತ್ರದ ಬೆನ್ನೆಲುಬು ಇದ್ದಂತೆ’ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಹೇಳಿದರು.</p>.<p>ನಗರದ ಜೆಎಸ್ಎಸ್ ಆಸ್ಪತ್ರೆಯ ರಾಜೇಂದ್ರ ಶತಮಾನೋತ್ಸವ ಭವನದಲ್ಲಿ ಜೆಎಸ್ಎಸ್ ವಿದ್ಯಾಪೀಠ, ಜೆಎಸ್ಎಸ್ ಕಾಲೇಜ್ ಆಫ್ ನರ್ಸಿಂಗ್, ಜೆಎಸ್ಎಸ್ ಸ್ಕೂಲ್ ಆಫ್ ನರ್ಸಿಂಗ್ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ‘ವಿಶ್ವ ಶುಶ್ರೂಷಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಆರೋಗ್ಯ ಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುವ ಶುಶ್ರೂಷಕರು ಪ್ರಮುಖರಾಗಿದ್ದು, ಸಂಕಷ್ಟದಲ್ಲಿರುವ ರೋಗಿಗಳನ್ನು ಆರೈಕೆ ಮಾಡುವ ಕಾರ್ಯ ಮಹತ್ವದ್ದಾಗಿದೆ’ ಎಂದರು.</p>.<p>‘ಶುಶ್ರೂಷಕರು ಇಲ್ಲದೆ ಆರೋಗ್ಯ ಕ್ಷೇತ್ರ ಅಸಾಧ್ಯವಾಗಿದ್ದು, ಇದನ್ನು ಕೋವಿಡ್ ಸಂದರ್ಭದಲ್ಲಿ ನೋಡಿದ್ದೇವೆ. ಇಂದು ಸಮಾಜದಲ್ಲಿ ಅವರನ್ನು ಗುರುತಿಸುವ ಕೆಲಸವಾಗುತ್ತಿದೆ. ಇದು ಶ್ಲಾಘನೀಯ’ ಎಂದು ತಿಳಿಸಿದರು.</p>.<p>‘ರೋಗಿಗೆ ವೈದ್ಯರು ನೀಡುವ ಚಿಕಿತ್ಸೆ ಎಷ್ಟು ಮುಖ್ಯವೋ, ಚಿಕಿತ್ಸೆ ನಂತರದ ಆರೈಕೆಯೂ ಅಷ್ಟೆ ಮುಖ್ಯ. ರೋಗಿಗಳ ಆರೈಕೆಯಲ್ಲಿ ವೈದ್ಯರಿಗಿಂತ ಹೆಚ್ಚಿನ ಪಾತ್ರವನ್ನು ಶುಶ್ರೂಷಕರು ವಹಿಸುವವರು. ಕೇವಲ ಆರೋಗ್ಯ ಸೇವೆ ನೀಡುವವರು ಮಾತ್ರವಲ್ಲ, ಮಾನವೀಯತೆಯ ರಕ್ಷಕರು’ ಎಂದು ಅಭಿಪ್ರಾಯಪಟ್ಟರು.</p>.<p>‘ನರ್ಸ್ಗಳ ಸೇವೆ ತಾಯಿ ಆರೈಕೆಯಂತಿರುತ್ತದೆ. ವೈದ್ಯಕೀಯ ಸೇವೆಯಲ್ಲಿ ನರ್ಸಿಂಗ್ ಕ್ಷೇತ್ರದಲ್ಲಿ ಪ್ರಗತಿ ಕಾಣುವ ಮೂಲಕ ಎಲ್ಲರೂ ಆರೋಗ್ಯ ಸೇವೆಯಲ್ಲಿ ತೊಡಗುವುದು ಮುಖ್ಯವಾಗಬೇಕು’ ಎಂದು ಸಲಹೆ ನೀಡಿದರು.</p>.<p>‘ನರ್ಸಿಂಗ್ ವೃತ್ತಿಯು ಪ್ರಸ್ತುತ ಮತ್ತು ಭವಿಷ್ಯದಲ್ಲಿ ಅತ್ಯಂತ ಹೆಚ್ಚಿನ ಬೇಡಿಕೆ ಹೊಂದಿರುವ ಉದ್ಯೋಗಗಳಲ್ಲಿ ಒಂದಾಗಿದೆ. ಹೆಚ್ಚುತ್ತಿರುವ ಜನಸಂಖ್ಯೆ, ವಯಸ್ಸಾದವರ ಆರೈಕೆ ಮತ್ತು ಆರೋಗ್ಯ ರಕ್ಷಣಾ ಮೂಲಸೌಕರ್ಯಗಳ ವಿಸ್ತರಣೆಯಿಂದಾಗಿ ಈ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ನಿರಂತರವಾಗಿ ಹೆಚ್ಚುತ್ತಿವೆ’ ಎಂದು ತಿಳಿಸಿದರು.</p>.<p>ಮೃತ್ಯುಂಜಯಪ್ಪ ಮ್ಯಾನೇಜಿಂಗ್ ಟ್ರಸ್ಟಿ ಸುಧಾ ಮೃತ್ಯುಂಜಯಪ್ಪ ಮಾತನಾಡಿ, ‘ಫ್ಲಾರೆನ್ಸ್ ನೈಟಿಂಗೇಲ್ ಅವರು ಮಾಡಿದ ಸೇವೆ ವಿಶ್ವಕ್ಕೆ ಮಾದರಿಯಾಗಿದೆ. ನರ್ಸಿಂಗ್ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಶುಶ್ರೂಷಕರು ಅವರನ್ನು ಮಾದರಿಯಾಗಿಸಿಕೊಳ್ಳಬೇಕು’ ಎಂದರು.</p>.<p>ಸಮಾರಂಭದಲ್ಲಿ ನರ್ಸಿಂಗ್ ಕ್ಷೇತ್ರದಲ್ಲಿ ಉತ್ತಮ ಸೇವೆ ನೀಡಿದವರನ್ನು ಸನ್ಮಾನಿಸಲಾಯಿತು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಸಿ.ಜಿ.ಬೆಟಸೂರಮಠ ವಹಿಸಿದ್ದರು. ಜೆಎಸ್ಎಸ್ ಆಸ್ಪತ್ರೆ ನಿರ್ದೇಶಕ ಸಿ.ಪಿ.ಮಧು, ವೈದ್ಯಕೀಯ ಶಿಕ್ಷಣ ವಿಭಾಗ ನಿರ್ದೇಶಕ ಆರ್.ಮಹೇಶ್, ಜೆಎಸ್ಎಸ್ ಆಸ್ಪತ್ರೆ ನರ್ಸಿಂಗ್ ಸೇವೆಗಳ ಮುಖ್ಯಸ್ಥರಾದ ಜಾನೆಟ್ ಮಥಿಯಾಸ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-39-1095022429</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>