<p><strong>ಮೈಸೂರು:</strong> ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆದಾಗಲೆಲ್ಲ ಅರಮನೆ ವಿಚಾರದಲ್ಲಿ ಜನರಲ್ಲಿ ಗೊಂದಲ–ಅಪನಂಬಿಕೆ ಮೂಡಿಸುವ ಕೆಲಸ ಮಾಡಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ದೂರಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬೆಂಗಳೂರು ಅರಮನೆ ಆಸ್ತಿ ವಿಚಾರದಲ್ಲಿ ಸರ್ಕಾರ ಸುಗ್ರೀವಾಜ್ಞೆ ತರುವುದು ಸರಿಯಲ್ಲ. ನ್ಯಾಯಾಲಯದ ತೀರ್ಪಿನ ಬಗ್ಗೆ ಗೌರವವಿಲ್ಲವೇ? ಯದುವಂಶದವರನ್ನು ಕೂರಿಸಿ ಸೆಟ್ಲ್ಮೆಂಟ್ ಮಾಡಿಕೊಳ್ಳಬಹುದು’ ಎಂದು ಸಲಹೆ ನೀಡಿದರು.</p>.<p>‘ಮೈಸೂರು ರಾಜವಂಶಸ್ಥರ ಬಗ್ಗೆ ಚೇಷ್ಟೆ ಮಾಡುವುದು, ಕಿರುಕುಳ ಕೊಡುವುದನ್ನು ಸಿದ್ದರಾಮಯ್ಯ ಮಾಡುತ್ತಲೇ ಇರುತ್ತಾರೆ. ರಸ್ತೆ ಹೆಸರು ಬದಲಿಸಿ ತನ್ನ ಹೆಸರಿಡಲು ಹೊರಟಿದ್ದರು. ನಾನು ಡೆಮಾಕ್ರೆಟಿಕ್ ಎನ್ನುವುದು ಬರೀ ತೋರಿಕೆಯ ಮಾತು’ ಎಂದು ಟೀಕಿಸಿದರು.</p>.<p>‘ಮುಡಾ ನಿವೇಶನಗಳ ಹಂಚಿಕೆ ವಿಚಾರದಲ್ಲಿ ಲೋಕಾಯುಕ್ತ ತನಿಖೆ ಪಾರದರ್ಶಕವಾಗಿ ನಡೆದಿಲ್ಲ. ₹5 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಅಕ್ರಮ ನಡೆದಿದೆ. ಹೀಗಿರುವಾಗ ಕ್ಲೀನ್ಚಿಟ್ ನೀಡುವುದು ಎಂದರೆ ಏನು? ಲೋಕಾಯುಕ್ತ ಅಧಿಕಾರಿಗಳನ್ನು ಸರ್ಕಾರವೇ ನೇಮಿಸುವುದರಿಂದ ಅವರು ಅದರ ಕೈಗೊಂಬೆಯಾಗಿಯೇ ಕೆಲಸ ಮಾಡುತ್ತಾರೆ’ ಎಂದರು.</p>.<p>‘ಮುಡಾ ನಿವೇಶನ ಹಗರಣದಲ್ಲಿ ಶಾಸಕ ಜಿ.ಟಿ. ದೇವೇಗೌಡರ ಪಾಲೂ ಇದೆ. ಅದರಿಂದ ಬಚಾವಾಗಲು ಸಿದ್ದರಾಮಯ್ಯ ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಅವರು ಜೆಡಿಎಸ್ ಬಿಟ್ಟರೂ ನಷ್ಟವಾಗದು’ ಎಂದರು.</p>.<p>‘ದರೋಡೆಗಳು, ಮೈಕ್ರೋ ಫೈನಾನ್ಸ್ ಹಾವಳಿ ನೋಡಿದರೆ ರಾಜ್ಯದಲ್ಲಿ ಸರ್ಕಾರ ಇಲ್ಲ ಎನಿಸುತ್ತದೆ. ಪರಮೇಶ್ವರ್ಗೆ ಸಬ್ ಇನ್ಸ್ಪೆಕ್ಟರ್ ಅನ್ನು ವರ್ಗಾವಣೆ ಮಾಡುವ ಅಧಿಕಾರವಷ್ಟೇ ಇದೆ. ಉಳಿದ ಅಧಿಕಾರವನ್ನು ಮುಖ್ಯಮಂತ್ರಿಯೇ ನಿಭಾಯಿಸುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆದಾಗಲೆಲ್ಲ ಅರಮನೆ ವಿಚಾರದಲ್ಲಿ ಜನರಲ್ಲಿ ಗೊಂದಲ–ಅಪನಂಬಿಕೆ ಮೂಡಿಸುವ ಕೆಲಸ ಮಾಡಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ದೂರಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬೆಂಗಳೂರು ಅರಮನೆ ಆಸ್ತಿ ವಿಚಾರದಲ್ಲಿ ಸರ್ಕಾರ ಸುಗ್ರೀವಾಜ್ಞೆ ತರುವುದು ಸರಿಯಲ್ಲ. ನ್ಯಾಯಾಲಯದ ತೀರ್ಪಿನ ಬಗ್ಗೆ ಗೌರವವಿಲ್ಲವೇ? ಯದುವಂಶದವರನ್ನು ಕೂರಿಸಿ ಸೆಟ್ಲ್ಮೆಂಟ್ ಮಾಡಿಕೊಳ್ಳಬಹುದು’ ಎಂದು ಸಲಹೆ ನೀಡಿದರು.</p>.<p>‘ಮೈಸೂರು ರಾಜವಂಶಸ್ಥರ ಬಗ್ಗೆ ಚೇಷ್ಟೆ ಮಾಡುವುದು, ಕಿರುಕುಳ ಕೊಡುವುದನ್ನು ಸಿದ್ದರಾಮಯ್ಯ ಮಾಡುತ್ತಲೇ ಇರುತ್ತಾರೆ. ರಸ್ತೆ ಹೆಸರು ಬದಲಿಸಿ ತನ್ನ ಹೆಸರಿಡಲು ಹೊರಟಿದ್ದರು. ನಾನು ಡೆಮಾಕ್ರೆಟಿಕ್ ಎನ್ನುವುದು ಬರೀ ತೋರಿಕೆಯ ಮಾತು’ ಎಂದು ಟೀಕಿಸಿದರು.</p>.<p>‘ಮುಡಾ ನಿವೇಶನಗಳ ಹಂಚಿಕೆ ವಿಚಾರದಲ್ಲಿ ಲೋಕಾಯುಕ್ತ ತನಿಖೆ ಪಾರದರ್ಶಕವಾಗಿ ನಡೆದಿಲ್ಲ. ₹5 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಅಕ್ರಮ ನಡೆದಿದೆ. ಹೀಗಿರುವಾಗ ಕ್ಲೀನ್ಚಿಟ್ ನೀಡುವುದು ಎಂದರೆ ಏನು? ಲೋಕಾಯುಕ್ತ ಅಧಿಕಾರಿಗಳನ್ನು ಸರ್ಕಾರವೇ ನೇಮಿಸುವುದರಿಂದ ಅವರು ಅದರ ಕೈಗೊಂಬೆಯಾಗಿಯೇ ಕೆಲಸ ಮಾಡುತ್ತಾರೆ’ ಎಂದರು.</p>.<p>‘ಮುಡಾ ನಿವೇಶನ ಹಗರಣದಲ್ಲಿ ಶಾಸಕ ಜಿ.ಟಿ. ದೇವೇಗೌಡರ ಪಾಲೂ ಇದೆ. ಅದರಿಂದ ಬಚಾವಾಗಲು ಸಿದ್ದರಾಮಯ್ಯ ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಅವರು ಜೆಡಿಎಸ್ ಬಿಟ್ಟರೂ ನಷ್ಟವಾಗದು’ ಎಂದರು.</p>.<p>‘ದರೋಡೆಗಳು, ಮೈಕ್ರೋ ಫೈನಾನ್ಸ್ ಹಾವಳಿ ನೋಡಿದರೆ ರಾಜ್ಯದಲ್ಲಿ ಸರ್ಕಾರ ಇಲ್ಲ ಎನಿಸುತ್ತದೆ. ಪರಮೇಶ್ವರ್ಗೆ ಸಬ್ ಇನ್ಸ್ಪೆಕ್ಟರ್ ಅನ್ನು ವರ್ಗಾವಣೆ ಮಾಡುವ ಅಧಿಕಾರವಷ್ಟೇ ಇದೆ. ಉಳಿದ ಅಧಿಕಾರವನ್ನು ಮುಖ್ಯಮಂತ್ರಿಯೇ ನಿಭಾಯಿಸುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>