<p><strong>ಮೈಸೂರು:</strong> ಇಲ್ಲಿನ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ, ಬಲೂನ್ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಫೋಟಗೊಂಡು ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರಿಗೆ ಗಾಯಗಳಾಗಿವೆ.</p>.<p>ಬಲೂನು ಮಾರುತ್ತಿದ್ದ ಉತ್ತರ ಪ್ರದೇಶದ ಕನೋಜ್ ಜಿಲ್ಲೆ ತೊಫಿಯ ಗ್ರಾಮದ ಸಲೀಂ (40) ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ, ನಂಜನಗೂಡಿನ ಮಂಜುಳಾ, ಕೋಲ್ಕತ್ತದ ಶಮಿನಾ ಶಬಿಲ್, ರಾಣೆಬೆನ್ನೂರಿನ ಕೊಟ್ರೇಶ್ ಅವರಿಗೆ ಗಾಯವಾಗಿದ್ದು, ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಲಕ್ಷ್ಮಿ ಪರಿಸ್ಥಿತಿ ಗಂಭೀರವಾಗಿದ್ದು, ಐಸಿಯು ವಾರ್ಡ್ಗೆ ವರ್ಗಾಯಿಸಲಾಗಿದೆ. ಮತ್ತೊಬ್ಬ ಗಾಯಾಳು ರಂಜಿತಾ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. </p>.<p>‘ವ್ಯಕ್ತಿಯೊಬ್ಬರು ಸೈಕಲ್ನಲ್ಲಿ ಬಲೂನ್ ಮಾರುತ್ತಿದ್ದಾಗ ರಾತ್ರಿ 8.30ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡು, ಅವರು ಸ್ಥಳದಲ್ಲೇ ಮೃತಪಟ್ಟರು’ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದರು. </p>.<p>‘ಸಿಲಿಂಡರ್ ಸ್ಫೋಟಗೊಂಡಾಗ ಸ್ಥಳದಲ್ಲಿ ಮೂವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಇಬ್ಬರ ದೇಹಗಳು ಛಿದ್ರಗೊಂಡಿದ್ದವು’ ಎಂದು ಪೊಲೀಸರು ತಿಳಿಸಿದರು.</p>.<p>‘ಮೂವರು ಯುವಕರು ಹೊರ ರಾಜ್ಯದಿಂದ ನಗರಕ್ಕೆ ಬಂದು ಮಂಡಿ ಮೊಹಲ್ಲಾದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅರಮನೆ ಸುತ್ತಮುತ್ತ ಬಲೂನ್ ವ್ಯಾಪಾರ ನಡೆಸುತ್ತಿದ್ದರು. ಸಲೀಂ ಎಂದಿನಂತೆ ಜಯಮಾರ್ತಾಂಡ ದ್ವಾರದ ಬಳಿ ವ್ಯಾಪಾರ ನಡೆಸುತ್ತಿದ್ದಾಗ ಘಟನೆ ನಡೆದಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿ ಆರ್.ಎನ್.ಬಿಂದುಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ, ಅಗ್ನಿಶಾಮಕ ದಳ ಸಿಬ್ಬಂದಿ ಪರಿಶೀಲನೆ ನಡೆಸಿದರು. </p>.<p><strong>ತಡವಾಗಿ ಬಂದ ಆಂಬುಲೆನ್ಸ್:</strong> ‘ಗಾಯಾಳುಗಳನ್ನು ಘಟನಾ ಸ್ಥಳದಿಂದ ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಸಿಗಲಿಲ್ಲ. ಅವು ತಡವಾಗಿ ಬಂದವು. ಪೊಲೀಸರು ಆಟೊ, 112 ಹಾಗೂ ಸಂಜೀವಿನಿ ವಾಹನದಲ್ಲಿ ಗಾಯಾಳುಗಳನ್ನು ಕರೆದೊಯ್ದರು’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.</p>.<div><blockquote>ಕ್ರಿಸ್ಮಸ್ ರಜೆಯ ಕಾರಣ ಲಕ್ಷ್ಮಿ ಅವರು ಇಬ್ಬರು ಮಕ್ಕಳು ಹಾಗೂ ಸಂಬಂಧಿಕರಾದ ರಂಜಿತಾ ಅವರೊಂದಿಗೆ ನಗರಕ್ಕೆ ಬಂದಿದ್ದರು. ಮಕ್ಕಳಿಗೆ ಯಾವುದೇ ಗಾಯವಾಗಿಲ್ಲ</blockquote><span class="attribution">ಸುಹಾಸ್ ಲಕ್ಷ್ಮಿ ಪರಿಚಯಸ್ಥರು</span></div>.<div><blockquote>ಅರಮನೆಯಲ್ಲಿ ಮಾಗಿ ಉತ್ಸವ ನಡೆಯುತ್ತಿರುವುದರಿಂದ ಜಯಮಾರ್ತಾಂಡ ದ್ವಾರದಲ್ಲಿ ಜನ ಕಡಿಮೆ ಇತ್ತು ಹೀಗಾಗಿ ದೊಡ್ಡ ಅಪಾಯ ತಪ್ಪಿದೆ </blockquote><span class="attribution">ಯೋಗೇಶ್ ವ್ಯಾಪಾರಿ</span></div>.<div><blockquote>ತಿ ಹಾವೇರಿ ಕೆಎಸ್ಆರ್ಟಿಸಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು ಗುರುವಾರ ಬೆಳಿಗ್ಗೆ ಕುಟುಂಬ ಸಮೇತರಾಗಿ ಮೈಸೂರಿಗೆ ಪ್ರವಾಸಕ್ಕಾಗಿ ಬಂದಿದ್ದೆವು </blockquote><span class="attribution">ಪ್ರಿಯಾಂಕ ಕೊಟ್ರೇಶ್ ಪತ್ನಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ, ಬಲೂನ್ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಫೋಟಗೊಂಡು ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರಿಗೆ ಗಾಯಗಳಾಗಿವೆ.</p>.<p>ಬಲೂನು ಮಾರುತ್ತಿದ್ದ ಉತ್ತರ ಪ್ರದೇಶದ ಕನೋಜ್ ಜಿಲ್ಲೆ ತೊಫಿಯ ಗ್ರಾಮದ ಸಲೀಂ (40) ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ, ನಂಜನಗೂಡಿನ ಮಂಜುಳಾ, ಕೋಲ್ಕತ್ತದ ಶಮಿನಾ ಶಬಿಲ್, ರಾಣೆಬೆನ್ನೂರಿನ ಕೊಟ್ರೇಶ್ ಅವರಿಗೆ ಗಾಯವಾಗಿದ್ದು, ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಲಕ್ಷ್ಮಿ ಪರಿಸ್ಥಿತಿ ಗಂಭೀರವಾಗಿದ್ದು, ಐಸಿಯು ವಾರ್ಡ್ಗೆ ವರ್ಗಾಯಿಸಲಾಗಿದೆ. ಮತ್ತೊಬ್ಬ ಗಾಯಾಳು ರಂಜಿತಾ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. </p>.<p>‘ವ್ಯಕ್ತಿಯೊಬ್ಬರು ಸೈಕಲ್ನಲ್ಲಿ ಬಲೂನ್ ಮಾರುತ್ತಿದ್ದಾಗ ರಾತ್ರಿ 8.30ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡು, ಅವರು ಸ್ಥಳದಲ್ಲೇ ಮೃತಪಟ್ಟರು’ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದರು. </p>.<p>‘ಸಿಲಿಂಡರ್ ಸ್ಫೋಟಗೊಂಡಾಗ ಸ್ಥಳದಲ್ಲಿ ಮೂವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಇಬ್ಬರ ದೇಹಗಳು ಛಿದ್ರಗೊಂಡಿದ್ದವು’ ಎಂದು ಪೊಲೀಸರು ತಿಳಿಸಿದರು.</p>.<p>‘ಮೂವರು ಯುವಕರು ಹೊರ ರಾಜ್ಯದಿಂದ ನಗರಕ್ಕೆ ಬಂದು ಮಂಡಿ ಮೊಹಲ್ಲಾದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅರಮನೆ ಸುತ್ತಮುತ್ತ ಬಲೂನ್ ವ್ಯಾಪಾರ ನಡೆಸುತ್ತಿದ್ದರು. ಸಲೀಂ ಎಂದಿನಂತೆ ಜಯಮಾರ್ತಾಂಡ ದ್ವಾರದ ಬಳಿ ವ್ಯಾಪಾರ ನಡೆಸುತ್ತಿದ್ದಾಗ ಘಟನೆ ನಡೆದಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿ ಆರ್.ಎನ್.ಬಿಂದುಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ, ಅಗ್ನಿಶಾಮಕ ದಳ ಸಿಬ್ಬಂದಿ ಪರಿಶೀಲನೆ ನಡೆಸಿದರು. </p>.<p><strong>ತಡವಾಗಿ ಬಂದ ಆಂಬುಲೆನ್ಸ್:</strong> ‘ಗಾಯಾಳುಗಳನ್ನು ಘಟನಾ ಸ್ಥಳದಿಂದ ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಸಿಗಲಿಲ್ಲ. ಅವು ತಡವಾಗಿ ಬಂದವು. ಪೊಲೀಸರು ಆಟೊ, 112 ಹಾಗೂ ಸಂಜೀವಿನಿ ವಾಹನದಲ್ಲಿ ಗಾಯಾಳುಗಳನ್ನು ಕರೆದೊಯ್ದರು’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.</p>.<div><blockquote>ಕ್ರಿಸ್ಮಸ್ ರಜೆಯ ಕಾರಣ ಲಕ್ಷ್ಮಿ ಅವರು ಇಬ್ಬರು ಮಕ್ಕಳು ಹಾಗೂ ಸಂಬಂಧಿಕರಾದ ರಂಜಿತಾ ಅವರೊಂದಿಗೆ ನಗರಕ್ಕೆ ಬಂದಿದ್ದರು. ಮಕ್ಕಳಿಗೆ ಯಾವುದೇ ಗಾಯವಾಗಿಲ್ಲ</blockquote><span class="attribution">ಸುಹಾಸ್ ಲಕ್ಷ್ಮಿ ಪರಿಚಯಸ್ಥರು</span></div>.<div><blockquote>ಅರಮನೆಯಲ್ಲಿ ಮಾಗಿ ಉತ್ಸವ ನಡೆಯುತ್ತಿರುವುದರಿಂದ ಜಯಮಾರ್ತಾಂಡ ದ್ವಾರದಲ್ಲಿ ಜನ ಕಡಿಮೆ ಇತ್ತು ಹೀಗಾಗಿ ದೊಡ್ಡ ಅಪಾಯ ತಪ್ಪಿದೆ </blockquote><span class="attribution">ಯೋಗೇಶ್ ವ್ಯಾಪಾರಿ</span></div>.<div><blockquote>ತಿ ಹಾವೇರಿ ಕೆಎಸ್ಆರ್ಟಿಸಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು ಗುರುವಾರ ಬೆಳಿಗ್ಗೆ ಕುಟುಂಬ ಸಮೇತರಾಗಿ ಮೈಸೂರಿಗೆ ಪ್ರವಾಸಕ್ಕಾಗಿ ಬಂದಿದ್ದೆವು </blockquote><span class="attribution">ಪ್ರಿಯಾಂಕ ಕೊಟ್ರೇಶ್ ಪತ್ನಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>