<p>ಮೈಸೂರು: ‘ಆರಂಭಿಕ ರೋಗ ನಿರ್ಣಯದಿಂದ ಪಾರ್ಕಿನ್ಸನ್ ಕಾಯಿಲೆಯನ್ನು ಸುಧಾರಿಸಬಹುದು’ ಎಂದು ಜೆಎಸ್ಎಸ್ ಆಸ್ಪತ್ರೆ ನಿರ್ದೇಶಕ ಡಾ.ಸಿ.ಪಿ.ಮಧು ತಿಳಿಸಿದರು.</p>.<p>ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಈಚೆಗೆ ಆಯೋಜಿಸಿದ್ದ ವಿಶ್ವ ಪಾರ್ಕಿನ್ಸನ್ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸಲು, ಆರಂಭಿಕ ರೋಗನಿರ್ಣಯವನ್ನು ಉತ್ತೇಜಿಸಲು ಮತ್ತು ರೋಗಿಗಳಿಗೆ ಉತ್ತಮ ಆರೈಕೆ ವ್ಯವಸ್ಥೆಯನ್ನು ಒದಗಿಸುವುದು ಈ ದಿನದ ಉದ್ದೇಶ ಎಂದರು.</p>.<p>ನರ ಸಂಬಂಧಿತ ಕಾಯಿಲೆಯ ರೋಗಿಗಳ ಜೀವನದ ಗುಣಮಟ್ಟ ಸುಧಾರಿಸುವಲ್ಲಿ ಜೆಎಸ್ಎಸ್ ಆಸ್ಪತ್ರೆ ಶ್ರಮಿಸುತ್ತಿದೆ ಎಂದು ಹೇಳಿದರು.</p>.<p>ನ್ಯೂರಾಲಜಿ ವಿಭಾಗದ ಮುಖ್ಯಸ್ಥ ಡಾ.ಎಸ್.ಹರ್ಷ ಮಾತನಾಡಿ, ‘ಪಾರ್ಕಿನ್ಸನ್ ಕಾಯಿಲೆಯು ನರಮಂಡಲದ ಚಲನೆಯ ಅಸ್ವಸ್ಥತೆಯಾಗಿದ್ದು, ಇದು ಕಾಲಾನಂತರದಲ್ಲಿ ತೊಂದರೆ ನೀಡುತ್ತದೆ’ ಎಂದರು.</p>.<p>ನ್ಯೂರಾಲಜಿ ವಿಭಾಗದ ಪ್ರಾಧ್ಯಾಪಕ ಡಾ.ನೇಮಿಚಂದ್ರ, ಸಹಾಯಕ ಪ್ರಾಧ್ಯಾಪಕ ಡಾ.ಶಸ್ತಾರ ಪಿ. ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-39-660137764</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಆರಂಭಿಕ ರೋಗ ನಿರ್ಣಯದಿಂದ ಪಾರ್ಕಿನ್ಸನ್ ಕಾಯಿಲೆಯನ್ನು ಸುಧಾರಿಸಬಹುದು’ ಎಂದು ಜೆಎಸ್ಎಸ್ ಆಸ್ಪತ್ರೆ ನಿರ್ದೇಶಕ ಡಾ.ಸಿ.ಪಿ.ಮಧು ತಿಳಿಸಿದರು.</p>.<p>ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಈಚೆಗೆ ಆಯೋಜಿಸಿದ್ದ ವಿಶ್ವ ಪಾರ್ಕಿನ್ಸನ್ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸಲು, ಆರಂಭಿಕ ರೋಗನಿರ್ಣಯವನ್ನು ಉತ್ತೇಜಿಸಲು ಮತ್ತು ರೋಗಿಗಳಿಗೆ ಉತ್ತಮ ಆರೈಕೆ ವ್ಯವಸ್ಥೆಯನ್ನು ಒದಗಿಸುವುದು ಈ ದಿನದ ಉದ್ದೇಶ ಎಂದರು.</p>.<p>ನರ ಸಂಬಂಧಿತ ಕಾಯಿಲೆಯ ರೋಗಿಗಳ ಜೀವನದ ಗುಣಮಟ್ಟ ಸುಧಾರಿಸುವಲ್ಲಿ ಜೆಎಸ್ಎಸ್ ಆಸ್ಪತ್ರೆ ಶ್ರಮಿಸುತ್ತಿದೆ ಎಂದು ಹೇಳಿದರು.</p>.<p>ನ್ಯೂರಾಲಜಿ ವಿಭಾಗದ ಮುಖ್ಯಸ್ಥ ಡಾ.ಎಸ್.ಹರ್ಷ ಮಾತನಾಡಿ, ‘ಪಾರ್ಕಿನ್ಸನ್ ಕಾಯಿಲೆಯು ನರಮಂಡಲದ ಚಲನೆಯ ಅಸ್ವಸ್ಥತೆಯಾಗಿದ್ದು, ಇದು ಕಾಲಾನಂತರದಲ್ಲಿ ತೊಂದರೆ ನೀಡುತ್ತದೆ’ ಎಂದರು.</p>.<p>ನ್ಯೂರಾಲಜಿ ವಿಭಾಗದ ಪ್ರಾಧ್ಯಾಪಕ ಡಾ.ನೇಮಿಚಂದ್ರ, ಸಹಾಯಕ ಪ್ರಾಧ್ಯಾಪಕ ಡಾ.ಶಸ್ತಾರ ಪಿ. ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-39-660137764</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>