<p><strong>ಮೈಸೂರು:</strong> ‘ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿರುವುದು ರೈತರಿಗೆ ದೊಡ್ಡ ಹೊಡೆತ ನೀಡಿದೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೆರಿಗೆ ಇಳಿಸಬೇಕು’ ಎಂದು ವಿಶ್ವಮಾನವ ರೈತ ಸಂಘದ ರಾಜ್ಯಾಧ್ಯಕ್ಷ ಮೋಹಿತ್ಗೌಡ ಆಗ್ರಹಿಸಿದರು.</p>.<p>ಇಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಅಗತ್ಯ ವಸ್ತುಗಳ ದರ ಏರಿಕೆಗೂ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದರು.</p>.<p>‘ಸರ್ಕಾರಿ ಕಚೇರಿಗಳಿಗೆ ರೈತರು ಕೆಲಸಕ್ಕೆಂದುಬಂದಾಗ ಅಧಿಕಾರಿಗಳು, ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಕೆಲಸ ಮಾಡಿಕೊಡಲು ಅನಗತ್ಯವಾಗಿ ಅಲೆದಾಡಿಸಬಾರದು’ ಎಂದು ಒತ್ತಾಯಿಸಿದರು.</p>.<p>‘ಎಚ್.ಡಿ. ಕೋಟೆ, ನಂಜನಗೂಡು, ಸರಗೂರು, ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲ್ಲೂಕುಗಳಲ್ಲಿಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ರೈತರ ಮೇಲೆ ದಾಳಿ ಮಾಡುವುದಲ್ಲದೆ, ಬೆಳೆ ಹಾನಿಯನ್ನೂ ಉಂಟು ಮಾಡುತ್ತಿವೆ. ಹೀಗಾಗಿ, ಇದರ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಪದಾಧಿಕಾರಿಗಳಾದ ಕೆ. ಶಂಕರ್, ಸಂದೇಶ್ ಪವಾರ್, ಹಳ್ಳಿಕಾರ್ ದರ್ಶನ್, ಅಭಿಷೇಕ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-39-116250243</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿರುವುದು ರೈತರಿಗೆ ದೊಡ್ಡ ಹೊಡೆತ ನೀಡಿದೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೆರಿಗೆ ಇಳಿಸಬೇಕು’ ಎಂದು ವಿಶ್ವಮಾನವ ರೈತ ಸಂಘದ ರಾಜ್ಯಾಧ್ಯಕ್ಷ ಮೋಹಿತ್ಗೌಡ ಆಗ್ರಹಿಸಿದರು.</p>.<p>ಇಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಅಗತ್ಯ ವಸ್ತುಗಳ ದರ ಏರಿಕೆಗೂ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದರು.</p>.<p>‘ಸರ್ಕಾರಿ ಕಚೇರಿಗಳಿಗೆ ರೈತರು ಕೆಲಸಕ್ಕೆಂದುಬಂದಾಗ ಅಧಿಕಾರಿಗಳು, ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಕೆಲಸ ಮಾಡಿಕೊಡಲು ಅನಗತ್ಯವಾಗಿ ಅಲೆದಾಡಿಸಬಾರದು’ ಎಂದು ಒತ್ತಾಯಿಸಿದರು.</p>.<p>‘ಎಚ್.ಡಿ. ಕೋಟೆ, ನಂಜನಗೂಡು, ಸರಗೂರು, ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲ್ಲೂಕುಗಳಲ್ಲಿಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ರೈತರ ಮೇಲೆ ದಾಳಿ ಮಾಡುವುದಲ್ಲದೆ, ಬೆಳೆ ಹಾನಿಯನ್ನೂ ಉಂಟು ಮಾಡುತ್ತಿವೆ. ಹೀಗಾಗಿ, ಇದರ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಪದಾಧಿಕಾರಿಗಳಾದ ಕೆ. ಶಂಕರ್, ಸಂದೇಶ್ ಪವಾರ್, ಹಳ್ಳಿಕಾರ್ ದರ್ಶನ್, ಅಭಿಷೇಕ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-39-116250243</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>