<p>ಪಿರಿಯಾಪಟ್ಟಣ: ‘ವಕೀಲರು ಉತ್ತಮ ಸಹಕಾರ ನೀಡಿದರೆ ಶೀಘ್ರವಾಗಿ ನ್ಯಾಯದಾನ ಮಾಡಲು ಸಾಧ್ಯವಾಗುತ್ತದೆ’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಧನುರಾಜ್ ತಿಳಿಸಿದರು.</p>.<p>ಪಟ್ಟಣದ ವಕೀಲರ ಭವನದಲ್ಲಿ ಸೋಮವಾರ ಹೊಸದಾಗಿ ಬಂದ ನ್ಯಾಯಾಧೀಶರಿಗೆ ಏರ್ಪಡಿಸಿದ್ದ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು. ‘ನಾನು ಹಿಂದೆ ಕಾರ್ಯನಿರ್ವಹಿಸಿದ ಎಲ್ಲಾ ಕಡೆಗಳಲ್ಲಿ ವಕೀಲರು ಅಗತ್ಯ ಸಹಕಾರ ನೀಡಿದ್ದಾರೆ, ಇಲ್ಲಿಯೂ ಅದೇ ಸಹಕಾರ ನಿರೀಕ್ಷಿಸುತ್ತಿದ್ದೇನೆ’ ಎಂದರು.</p>.<p>ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎ.ಎಸ್. ವಿದ್ಯಾ ಮಾತನಾಡಿ, ‘ಬಾರ್ ಆ್ಯಂಡ್ ಬೆಂಚ್ ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಆದ್ದರಿಂದ ಯಾವುದೇ ರೀತಿಯ ಸಂಘರ್ಷಕ್ಕೆ ಎಡೆಯಾಗದಂತೆ ಸಹಕಾರ ನೀಡಬೇಕು’ ಎಂದು ವಕೀಲರ ಸಂಘಕ್ಕೆ ಮನವಿ ಮಾಡಿದರು.</p>.<p>ಸಿವಿಲ್ ಹಿರಿಯ ಶ್ರೇಣಿ ನ್ಯಾಯಾಧೀಶ ಎಂ. ರಾಜು ಮಾತನಾಡಿ, ‘ಪಿರಿಯಾಪಟ್ಟಣದಲ್ಲಿ ವಕೀಲರ ಸಂಘ ಸಣ್ಣದಾಗಿದ್ದರೂ ವಕೀಲರು ಸಹೋದರರಂತೆ ಪ್ರೀತಿ ತೋರಿಸಿ ಕೆಲಸ ಮಾಡಲು ಸಹಕಾರ ನೀಡುತ್ತಿದ್ದಾರೆ. ಅದೇ ಸಹಕಾರವನ್ನು ಹೊಸದಾಗಿ ಆಗಮಿಸಿರುವ ನ್ಯಾಯಾಧೀಶರುಗಳಿಗೂ ನೀಡುತ್ತಾರೆ’ ಎಂದು ಭರವಸೆ ನೀಡಿದರು.</p>.<p>ವಕೀಲರ ಸಂಘದ ಅಧ್ಯಕ್ಷ ಧನಪಾಲ್ ಮಾತನಾಡಿ, ‘ಈ ಹಿಂದೆ ಕಾರ್ಯನಿರ್ವಹಿಸಿದ ನ್ಯಾಯಾಧೀಶರುಗಳ ರೀತಿಯಲ್ಲಿ ಕಕ್ಷಿದಾರ ಹಿತಾಸಕ್ತಿಯನ್ನು ಪರಿಗಣಿಸಿ ಕಾರ್ಯನಿರ್ವಹಿಸುವಂತೆ ಮನವಿ ಮಾಡಿದರಲ್ಲದೆ, ವಕೀಲರ ಸಂಘದಿಂದ ಅಗತ್ಯ ಸಹಕಾರ ನೀಡಿ ಶೀಘ್ರ ನ್ಯಾಯದಾನಕ್ಕೆ ಎಲ್ಲಾ ರೀತಿಯಲ್ಲಿ ಸಹಕರಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಹಿರಿಯ ವಕೀಲ ಗೋವಿಂದ ಗೌಡ ಮಾತನಾಡಿದರು. ವಕೀಲರ ಸಂಘದ ಕಾರ್ಯದರ್ಶಿ ಶಂಕರ್, ಉಪಾಧ್ಯಕ್ಷ ಚಂದ್ರೇಗೌಡ, ಸರ್ಕಾರಿ ಸಹಾಯಕ ಅಭಿಯೋಜಕರುಗಳಾದ ಶಿವಶಂಕರ್ ಗಾವಂಕರ್, ಜಾನಕಿ, ಉಮಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-38-745676415</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಿರಿಯಾಪಟ್ಟಣ: ‘ವಕೀಲರು ಉತ್ತಮ ಸಹಕಾರ ನೀಡಿದರೆ ಶೀಘ್ರವಾಗಿ ನ್ಯಾಯದಾನ ಮಾಡಲು ಸಾಧ್ಯವಾಗುತ್ತದೆ’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಧನುರಾಜ್ ತಿಳಿಸಿದರು.</p>.<p>ಪಟ್ಟಣದ ವಕೀಲರ ಭವನದಲ್ಲಿ ಸೋಮವಾರ ಹೊಸದಾಗಿ ಬಂದ ನ್ಯಾಯಾಧೀಶರಿಗೆ ಏರ್ಪಡಿಸಿದ್ದ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು. ‘ನಾನು ಹಿಂದೆ ಕಾರ್ಯನಿರ್ವಹಿಸಿದ ಎಲ್ಲಾ ಕಡೆಗಳಲ್ಲಿ ವಕೀಲರು ಅಗತ್ಯ ಸಹಕಾರ ನೀಡಿದ್ದಾರೆ, ಇಲ್ಲಿಯೂ ಅದೇ ಸಹಕಾರ ನಿರೀಕ್ಷಿಸುತ್ತಿದ್ದೇನೆ’ ಎಂದರು.</p>.<p>ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎ.ಎಸ್. ವಿದ್ಯಾ ಮಾತನಾಡಿ, ‘ಬಾರ್ ಆ್ಯಂಡ್ ಬೆಂಚ್ ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಆದ್ದರಿಂದ ಯಾವುದೇ ರೀತಿಯ ಸಂಘರ್ಷಕ್ಕೆ ಎಡೆಯಾಗದಂತೆ ಸಹಕಾರ ನೀಡಬೇಕು’ ಎಂದು ವಕೀಲರ ಸಂಘಕ್ಕೆ ಮನವಿ ಮಾಡಿದರು.</p>.<p>ಸಿವಿಲ್ ಹಿರಿಯ ಶ್ರೇಣಿ ನ್ಯಾಯಾಧೀಶ ಎಂ. ರಾಜು ಮಾತನಾಡಿ, ‘ಪಿರಿಯಾಪಟ್ಟಣದಲ್ಲಿ ವಕೀಲರ ಸಂಘ ಸಣ್ಣದಾಗಿದ್ದರೂ ವಕೀಲರು ಸಹೋದರರಂತೆ ಪ್ರೀತಿ ತೋರಿಸಿ ಕೆಲಸ ಮಾಡಲು ಸಹಕಾರ ನೀಡುತ್ತಿದ್ದಾರೆ. ಅದೇ ಸಹಕಾರವನ್ನು ಹೊಸದಾಗಿ ಆಗಮಿಸಿರುವ ನ್ಯಾಯಾಧೀಶರುಗಳಿಗೂ ನೀಡುತ್ತಾರೆ’ ಎಂದು ಭರವಸೆ ನೀಡಿದರು.</p>.<p>ವಕೀಲರ ಸಂಘದ ಅಧ್ಯಕ್ಷ ಧನಪಾಲ್ ಮಾತನಾಡಿ, ‘ಈ ಹಿಂದೆ ಕಾರ್ಯನಿರ್ವಹಿಸಿದ ನ್ಯಾಯಾಧೀಶರುಗಳ ರೀತಿಯಲ್ಲಿ ಕಕ್ಷಿದಾರ ಹಿತಾಸಕ್ತಿಯನ್ನು ಪರಿಗಣಿಸಿ ಕಾರ್ಯನಿರ್ವಹಿಸುವಂತೆ ಮನವಿ ಮಾಡಿದರಲ್ಲದೆ, ವಕೀಲರ ಸಂಘದಿಂದ ಅಗತ್ಯ ಸಹಕಾರ ನೀಡಿ ಶೀಘ್ರ ನ್ಯಾಯದಾನಕ್ಕೆ ಎಲ್ಲಾ ರೀತಿಯಲ್ಲಿ ಸಹಕರಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಹಿರಿಯ ವಕೀಲ ಗೋವಿಂದ ಗೌಡ ಮಾತನಾಡಿದರು. ವಕೀಲರ ಸಂಘದ ಕಾರ್ಯದರ್ಶಿ ಶಂಕರ್, ಉಪಾಧ್ಯಕ್ಷ ಚಂದ್ರೇಗೌಡ, ಸರ್ಕಾರಿ ಸಹಾಯಕ ಅಭಿಯೋಜಕರುಗಳಾದ ಶಿವಶಂಕರ್ ಗಾವಂಕರ್, ಜಾನಕಿ, ಉಮಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-38-745676415</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>