<p><strong>ಮೈಸೂರು:</strong> ‘ಜಾಗತಿಕ ಬಿಕ್ಕಟ್ಟಿನ ಕಾರಣದಿಂದ ಚಿನ್ನ ಖರೀದಿಯನ್ನು ಮುಂದೂಡಿ, ಪೆಟ್ರೋಲಿಯಂ ಉತ್ಪನ್ನಗಳನ್ನು ಮಿತವಾಗಿ ಬಳಸಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯ ಹಿಂದಿನ ಕಾರಣದ ಅರಿವಿದ್ದರೂ ವಿರೋಧ ಪಕ್ಷದವರು ಟೀಕಿಸುತ್ತಿರುವುದು ವಿಷಾದನೀಯ’ ಎಂದು ಬಿಜೆಪಿ ಮುಖಂಡ ಸಂದೇಶ್ ಸ್ವಾಮಿ ಹೇಳಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಪಶ್ಚಿಮ ಏಷ್ಯಾದಲ್ಲಿ ಮೂರು ತಿಂಗಳಿಂದ ಸಂಘರ್ಷ ನಡೆಯುತ್ತಿರುವ ಪರಿಣಾಮವನ್ನು ಇಡೀ ವಿಶ್ವವೇ ಎದುರಿಸುತ್ತಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಪೂರೈಕೆ ವ್ಯತ್ಯಯದಿಂದ ಜಾಗತಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಹಲವು ದೇಶಗಳು ಬೆಲೆ ಏರಿಕೆಯಿಂದ ತತ್ತರಿಸಿವೆ. ಭಾರತದಲ್ಲೂ ಅನಿವಾರ್ಯವಾಗಿ ಕನಿಷ್ಠ ಪ್ರಮಾಣದ ದರ ಏರಿಸಲಾಗಿದೆ. ಈ ಎಲ್ಲಾ ವಾಸ್ತವ ಗೊತ್ತಿದ್ದರೂ ರಾಜಕೀಯವಾಗಿ ಟೀಕಿಸುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಇಡೀ ದೇಶದಲ್ಲಿ ಈ ಕ್ರಮ ಅನುಸರಿಸಿದರೆ ಪೆಟ್ರೋಲಿಯಂ ಉತ್ಪನ್ನ ಪೂರೈಕೆ ವಿಳಂಬವಾದರೂ ನಿರ್ವಹಿಸಬಹುದು. ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಧಾನಿಯವರು ಜನರಿಗೆ ಸಲಹೆ ನೀಡಿದ್ದಾರೆಯೇ ಹೊರತು ಆದೇಶಿಸಿಲ್ಲ. ಇದನ್ನು ಅರಿಯಬೇಕು’ ಎಂದು ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-39-1009930176</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಜಾಗತಿಕ ಬಿಕ್ಕಟ್ಟಿನ ಕಾರಣದಿಂದ ಚಿನ್ನ ಖರೀದಿಯನ್ನು ಮುಂದೂಡಿ, ಪೆಟ್ರೋಲಿಯಂ ಉತ್ಪನ್ನಗಳನ್ನು ಮಿತವಾಗಿ ಬಳಸಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯ ಹಿಂದಿನ ಕಾರಣದ ಅರಿವಿದ್ದರೂ ವಿರೋಧ ಪಕ್ಷದವರು ಟೀಕಿಸುತ್ತಿರುವುದು ವಿಷಾದನೀಯ’ ಎಂದು ಬಿಜೆಪಿ ಮುಖಂಡ ಸಂದೇಶ್ ಸ್ವಾಮಿ ಹೇಳಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಪಶ್ಚಿಮ ಏಷ್ಯಾದಲ್ಲಿ ಮೂರು ತಿಂಗಳಿಂದ ಸಂಘರ್ಷ ನಡೆಯುತ್ತಿರುವ ಪರಿಣಾಮವನ್ನು ಇಡೀ ವಿಶ್ವವೇ ಎದುರಿಸುತ್ತಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಪೂರೈಕೆ ವ್ಯತ್ಯಯದಿಂದ ಜಾಗತಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಹಲವು ದೇಶಗಳು ಬೆಲೆ ಏರಿಕೆಯಿಂದ ತತ್ತರಿಸಿವೆ. ಭಾರತದಲ್ಲೂ ಅನಿವಾರ್ಯವಾಗಿ ಕನಿಷ್ಠ ಪ್ರಮಾಣದ ದರ ಏರಿಸಲಾಗಿದೆ. ಈ ಎಲ್ಲಾ ವಾಸ್ತವ ಗೊತ್ತಿದ್ದರೂ ರಾಜಕೀಯವಾಗಿ ಟೀಕಿಸುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಇಡೀ ದೇಶದಲ್ಲಿ ಈ ಕ್ರಮ ಅನುಸರಿಸಿದರೆ ಪೆಟ್ರೋಲಿಯಂ ಉತ್ಪನ್ನ ಪೂರೈಕೆ ವಿಳಂಬವಾದರೂ ನಿರ್ವಹಿಸಬಹುದು. ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಧಾನಿಯವರು ಜನರಿಗೆ ಸಲಹೆ ನೀಡಿದ್ದಾರೆಯೇ ಹೊರತು ಆದೇಶಿಸಿಲ್ಲ. ಇದನ್ನು ಅರಿಯಬೇಕು’ ಎಂದು ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-39-1009930176</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>