<p>ಮೈಸೂರು: ‘ದಲಿತ ಸಮುದಾಯದವರು ರಾಜಕೀಯ ಶಕ್ತಿ ಹೊಂದಬೇಕೆಂಬ ಅಂಬೇಡ್ಕರ್ ಆಶಯಕ್ಕೆ ಒಳಮೀಸಲಾತಿ ಕಿತ್ತಾಟ ಹಾನಿ ಮಾಡುತ್ತಿದೆ’ ಎಂದು ಮಂಡ್ಯದ ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಬಿ.ಎಸ್.ಶಿವಣ್ಣ ಅಭಿಪ್ರಾಯಪಟ್ಟರು.</p>.<p>ದಲಿತ ಸಂಘರ್ಷ ಸಮಿತಿ (ಬಣರಹಿತ) ಮೈಸೂರು ವಿಭಾಗದಿಂದ ಇಲ್ಲಿನ ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಭಾನುವಾರ ನಡೆದ ಬಿ.ಆರ್.ಅಂಬೇಡ್ಕರ್ 135ನೇ ಜಯಂತಿ ಹಾಗೂ ‘ಸಮಕಾಲೀನ ಭಾರತದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆಗಳ ಪ್ರಸ್ತುತತೆ’ ಕುರಿತ ವಿಚಾರಸಂಕಿರಣ ಉದ್ಘಾಟಿಸಿ ಮಾತನಾಡಿದರು.</p>.<p>‘ಸಮುದಾಯವು ಶಿಕ್ಷಣ ಹಾಗೂ ರಾಜಕೀಯ ಸ್ಥಾನಮಾನಕ್ಕೆ ಸಂಘಟಿತವಾಗಿ ಹೋರಾಡಬೇಕು ಎನ್ನುವುದು ಬಾಬಸಾಹೇಬರ ಆಶಯವಾಗಿತ್ತು. ಪರಸ್ಪರರ ಬಗ್ಗೆ ಉದಾರತೆ ತೋರುವುದು, ಸೌಹಾರ್ದದಿಂದ ಸಮಸ್ಯೆ ಬಗೆಹರಿಸಿಕೊಂಡರೆ ಮಾತ್ರ ದೇಶ ನಡೆಸುವ ಪ್ರಜೆಗಳಾಗುತ್ತೀರಿ. ಇಲ್ಲದಿದ್ದರೆ ಇರುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತೀರಿ’ ಎಂದು ಎಚ್ಚರಿಸಿದರು.</p>.<p>ನೋಟುಗಳಲ್ಲಿ ಬಾಬಾಸಾಹೇಬ್ ಇರಲಿ: ‘ದೇಶದ ನೋಟುಗಳಲ್ಲಿ ಮಹಾತ್ಮ ಗಾಂಧೀಜಿ ಜತೆಯಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಫೋಟೊಗೂ ಆದ್ಯತೆ ನೀಡಬೇಕು. ಅಂಬೇಡ್ಕರ್ ಭಾವಚಿತ್ರವನ್ನು ಹತ್ತಿರ ಸೇರಿಸಿಕೊಳ್ಳದ ಮನಸ್ಥಿತಿಯ ಜನರಿದ್ದು, ನೋಟಿನ ಮೂಲಕವಾದರೂ ಜನರು ಅವರನ್ನು ಮುಟ್ಟಲಿ. ಅವರ ಸೇವೆಯನ್ನು ಸ್ಮರಿಸುವಂತಾಗಲಿ. ಈ ಬಗ್ಗೆ ಸಂಬಂಧಿಸಿದ ಎಲ್ಲ ಸಂಸ್ಥೆಗಳಿಗೂ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸಮುದಾಯ ಈ ಬಗ್ಗೆ ದನಿ ಎತ್ತಬೇಕು’ ಎಂದು ಒತ್ತಾಯಿಸಿದರು.</p>.<p>ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಪ್ರಥಮ ಮೂರು ಸ್ಥಾನ ಪಡೆದವರಿಗೆ ವೈಯಕ್ತಿಕವಾಗಿ ಟ್ಯಾಬ್ಗಳನ್ನು ನೀಡಿದರು.</p>.<p>ಪ್ರೊ.ನಾಗರತ್ನಮ್ಮ, ಎಸ್.ಜಯಕುಮಾರ್, ಡಿಎಸ್ಎಸ್ ರಾಜ್ಯ ಸಂಚಾಲಕ ಸಿ.ಉಮಾಮಹದೇವ್, ಪ್ರೊ.ಸುರೇಶ್, ಪ್ರೊ.ಉದಯ್ ಕುಮಾರ್ ಉರ್ಗಲವಾಡಿ ರಾಮಣ್ಣ, ಪ್ರೊ.ಇಂದಿರಮ್ಮ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-39-1367978851</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ದಲಿತ ಸಮುದಾಯದವರು ರಾಜಕೀಯ ಶಕ್ತಿ ಹೊಂದಬೇಕೆಂಬ ಅಂಬೇಡ್ಕರ್ ಆಶಯಕ್ಕೆ ಒಳಮೀಸಲಾತಿ ಕಿತ್ತಾಟ ಹಾನಿ ಮಾಡುತ್ತಿದೆ’ ಎಂದು ಮಂಡ್ಯದ ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಬಿ.ಎಸ್.ಶಿವಣ್ಣ ಅಭಿಪ್ರಾಯಪಟ್ಟರು.</p>.<p>ದಲಿತ ಸಂಘರ್ಷ ಸಮಿತಿ (ಬಣರಹಿತ) ಮೈಸೂರು ವಿಭಾಗದಿಂದ ಇಲ್ಲಿನ ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಭಾನುವಾರ ನಡೆದ ಬಿ.ಆರ್.ಅಂಬೇಡ್ಕರ್ 135ನೇ ಜಯಂತಿ ಹಾಗೂ ‘ಸಮಕಾಲೀನ ಭಾರತದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆಗಳ ಪ್ರಸ್ತುತತೆ’ ಕುರಿತ ವಿಚಾರಸಂಕಿರಣ ಉದ್ಘಾಟಿಸಿ ಮಾತನಾಡಿದರು.</p>.<p>‘ಸಮುದಾಯವು ಶಿಕ್ಷಣ ಹಾಗೂ ರಾಜಕೀಯ ಸ್ಥಾನಮಾನಕ್ಕೆ ಸಂಘಟಿತವಾಗಿ ಹೋರಾಡಬೇಕು ಎನ್ನುವುದು ಬಾಬಸಾಹೇಬರ ಆಶಯವಾಗಿತ್ತು. ಪರಸ್ಪರರ ಬಗ್ಗೆ ಉದಾರತೆ ತೋರುವುದು, ಸೌಹಾರ್ದದಿಂದ ಸಮಸ್ಯೆ ಬಗೆಹರಿಸಿಕೊಂಡರೆ ಮಾತ್ರ ದೇಶ ನಡೆಸುವ ಪ್ರಜೆಗಳಾಗುತ್ತೀರಿ. ಇಲ್ಲದಿದ್ದರೆ ಇರುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತೀರಿ’ ಎಂದು ಎಚ್ಚರಿಸಿದರು.</p>.<p>ನೋಟುಗಳಲ್ಲಿ ಬಾಬಾಸಾಹೇಬ್ ಇರಲಿ: ‘ದೇಶದ ನೋಟುಗಳಲ್ಲಿ ಮಹಾತ್ಮ ಗಾಂಧೀಜಿ ಜತೆಯಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಫೋಟೊಗೂ ಆದ್ಯತೆ ನೀಡಬೇಕು. ಅಂಬೇಡ್ಕರ್ ಭಾವಚಿತ್ರವನ್ನು ಹತ್ತಿರ ಸೇರಿಸಿಕೊಳ್ಳದ ಮನಸ್ಥಿತಿಯ ಜನರಿದ್ದು, ನೋಟಿನ ಮೂಲಕವಾದರೂ ಜನರು ಅವರನ್ನು ಮುಟ್ಟಲಿ. ಅವರ ಸೇವೆಯನ್ನು ಸ್ಮರಿಸುವಂತಾಗಲಿ. ಈ ಬಗ್ಗೆ ಸಂಬಂಧಿಸಿದ ಎಲ್ಲ ಸಂಸ್ಥೆಗಳಿಗೂ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸಮುದಾಯ ಈ ಬಗ್ಗೆ ದನಿ ಎತ್ತಬೇಕು’ ಎಂದು ಒತ್ತಾಯಿಸಿದರು.</p>.<p>ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಪ್ರಥಮ ಮೂರು ಸ್ಥಾನ ಪಡೆದವರಿಗೆ ವೈಯಕ್ತಿಕವಾಗಿ ಟ್ಯಾಬ್ಗಳನ್ನು ನೀಡಿದರು.</p>.<p>ಪ್ರೊ.ನಾಗರತ್ನಮ್ಮ, ಎಸ್.ಜಯಕುಮಾರ್, ಡಿಎಸ್ಎಸ್ ರಾಜ್ಯ ಸಂಚಾಲಕ ಸಿ.ಉಮಾಮಹದೇವ್, ಪ್ರೊ.ಸುರೇಶ್, ಪ್ರೊ.ಉದಯ್ ಕುಮಾರ್ ಉರ್ಗಲವಾಡಿ ರಾಮಣ್ಣ, ಪ್ರೊ.ಇಂದಿರಮ್ಮ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-39-1367978851</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>