<p><strong>ಮೈಸೂರು</strong>: ವಿದ್ಯಾರ್ಥಿಗಳ ನೆಚ್ಚಿನ ವಲಯ ಮಟ್ಟದ ‘ಪ್ರಜಾವಾಣಿ ರಸಪ್ರಶ್ನೆ ಚಾಂಪಿಯನ್ಷಿಪ್’ ಸ್ಪರ್ಧೆಗೆ ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಕ್ಯಾಂಪಸ್ನ ವಿಜ್ಞಾನ ಭವನದಲ್ಲಿ ಶುಕ್ರವಾರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಚಾಲನೆ ನೀಡಿದರು.</p><p>ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಇತರರ ಜ್ಞಾನದ ಬಗ್ಗೆಯೂ ವಿನಮ್ರ ಭಾವನೆಯನ್ನು ಹೊಂದಿರಬೇಕು. ನಿರಂತರ ಕಲಿಕೆಯಲ್ಲಿ ತೊಡಗಬೇಕು ಆಗ ಮಾತ್ರ ಯಶಸ್ಸು ಸಾಧ್ಯ ಎಂದರು.</p><p>ಪ್ರಜಾವಾಣಿ ಆಯೋಜಿಸಿರುವ ರಸಪ್ರಶ್ನೆ ಸ್ಪರ್ಧೆಯು ಅರಿವು ಹೆಚ್ಚಳಕ್ಕೆ ಪ್ರಯೋಜನಕಾರಿ. ಪ್ರಶ್ನೆ ಕೇಳುವಾಗ ಪ್ರಶ್ನೆ ಕೇಳುವವರ ಹಾವ ಭಾವವನ್ನು ಗಮನಿಸಬೇಕು. ಪ್ರಶ್ನೆಯನ್ನೂ ವಿವಿಧ ಭಾಗಗಳಾಗಿ ವಿಭಜಿಸಿ ಸೂಕ್ತವಾಗಿ ಅರಿತುಕೊಂಡು ಉತ್ತರಿಸಬೇಕು ಎಂದು ಸಲಹೆ ನೀಡಿ ಶುಭ ಹಾರೈಸಿದರು. </p><p>ಸ್ಪರ್ಧೆಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗಿನ 7ರಿಂದ 10ನೇ ತರಗತಿಯ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ವಿದ್ಯಾರ್ಥಿಗಳ ನೆಚ್ಚಿನ ವಲಯ ಮಟ್ಟದ ‘ಪ್ರಜಾವಾಣಿ ರಸಪ್ರಶ್ನೆ ಚಾಂಪಿಯನ್ಷಿಪ್’ ಸ್ಪರ್ಧೆಗೆ ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಕ್ಯಾಂಪಸ್ನ ವಿಜ್ಞಾನ ಭವನದಲ್ಲಿ ಶುಕ್ರವಾರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಚಾಲನೆ ನೀಡಿದರು.</p><p>ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಇತರರ ಜ್ಞಾನದ ಬಗ್ಗೆಯೂ ವಿನಮ್ರ ಭಾವನೆಯನ್ನು ಹೊಂದಿರಬೇಕು. ನಿರಂತರ ಕಲಿಕೆಯಲ್ಲಿ ತೊಡಗಬೇಕು ಆಗ ಮಾತ್ರ ಯಶಸ್ಸು ಸಾಧ್ಯ ಎಂದರು.</p><p>ಪ್ರಜಾವಾಣಿ ಆಯೋಜಿಸಿರುವ ರಸಪ್ರಶ್ನೆ ಸ್ಪರ್ಧೆಯು ಅರಿವು ಹೆಚ್ಚಳಕ್ಕೆ ಪ್ರಯೋಜನಕಾರಿ. ಪ್ರಶ್ನೆ ಕೇಳುವಾಗ ಪ್ರಶ್ನೆ ಕೇಳುವವರ ಹಾವ ಭಾವವನ್ನು ಗಮನಿಸಬೇಕು. ಪ್ರಶ್ನೆಯನ್ನೂ ವಿವಿಧ ಭಾಗಗಳಾಗಿ ವಿಭಜಿಸಿ ಸೂಕ್ತವಾಗಿ ಅರಿತುಕೊಂಡು ಉತ್ತರಿಸಬೇಕು ಎಂದು ಸಲಹೆ ನೀಡಿ ಶುಭ ಹಾರೈಸಿದರು. </p><p>ಸ್ಪರ್ಧೆಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗಿನ 7ರಿಂದ 10ನೇ ತರಗತಿಯ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>