<p><strong>ಮೈಸೂರು:</strong> ನಗರದ ಬಸವನಗುಡಿ ಉದ್ಯಾನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಅನುಮತಿ ನೀಡದ ಮಹಾನಗರ ಪಾಲಿಕೆ ತಾರತಮ್ಯ ಧೋರಣೆ ಖಂಡಿಸಿ ಕರ್ನಾಟಕ ರಾಜ್ಯ ಭೀಮ್ ಸೇನೆ ಸದಸ್ಯರು ಪಾಲಿಕೆ ಮುಂಭಾಗ ಅನಿರ್ದಿಷ್ಠಾವಧಿ ಪ್ರತಿಭಟನೆ ನಡೆಸಿದರು.</p>.<p>ಸಂಘಟನೆ ಮುಖಂಡ ಎಚ್.ಧರ್ಮರಾಜ, ‘ಇದೇ ಉದ್ಯಾನದಲ್ಲಿ ಕುವೆಂಪು ಹಾಗೂ ಬಾಲಗಂಗಾಧರನಾಥ ಸ್ವಾಮೀಜಿ ಪುತ್ಥಳಿ ಸ್ಥಾಪನೆಗೆ ಅನುಮತಿ ನೀಡಿರುವ ಪಾಲಿಕೆ ಅಂಬೇಡ್ಕರ್ ಪುತ್ಥಳಿ ಸ್ಥಾಪನೆ ಕುರಿತು ತಾರತಮ್ಯ ನೀತಿ ಅನುಸರಿಸುತ್ತಿದೆ’ ಎಂದು ದೂರಿದರು.</p>.<p>‘ತಾರತಮ್ಯ ನೀತಿ ಅನುಸರಿಸದೆ ಸ್ಥಾಪನೆಗೆ ಕೂಡಲೇ ಅನುಮತಿ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಎಸ್.ಸರ್ವೇಶ್, ಕಿರಣ್, ಸಿದ್ದರಾಜು, ಮಲ್ಲೇಶ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-39-1856893166</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರದ ಬಸವನಗುಡಿ ಉದ್ಯಾನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಅನುಮತಿ ನೀಡದ ಮಹಾನಗರ ಪಾಲಿಕೆ ತಾರತಮ್ಯ ಧೋರಣೆ ಖಂಡಿಸಿ ಕರ್ನಾಟಕ ರಾಜ್ಯ ಭೀಮ್ ಸೇನೆ ಸದಸ್ಯರು ಪಾಲಿಕೆ ಮುಂಭಾಗ ಅನಿರ್ದಿಷ್ಠಾವಧಿ ಪ್ರತಿಭಟನೆ ನಡೆಸಿದರು.</p>.<p>ಸಂಘಟನೆ ಮುಖಂಡ ಎಚ್.ಧರ್ಮರಾಜ, ‘ಇದೇ ಉದ್ಯಾನದಲ್ಲಿ ಕುವೆಂಪು ಹಾಗೂ ಬಾಲಗಂಗಾಧರನಾಥ ಸ್ವಾಮೀಜಿ ಪುತ್ಥಳಿ ಸ್ಥಾಪನೆಗೆ ಅನುಮತಿ ನೀಡಿರುವ ಪಾಲಿಕೆ ಅಂಬೇಡ್ಕರ್ ಪುತ್ಥಳಿ ಸ್ಥಾಪನೆ ಕುರಿತು ತಾರತಮ್ಯ ನೀತಿ ಅನುಸರಿಸುತ್ತಿದೆ’ ಎಂದು ದೂರಿದರು.</p>.<p>‘ತಾರತಮ್ಯ ನೀತಿ ಅನುಸರಿಸದೆ ಸ್ಥಾಪನೆಗೆ ಕೂಡಲೇ ಅನುಮತಿ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಎಸ್.ಸರ್ವೇಶ್, ಕಿರಣ್, ಸಿದ್ದರಾಜು, ಮಲ್ಲೇಶ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-39-1856893166</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>