<p><strong>ಮೈಸೂರು:</strong> ‘ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದ ದಿ.ಎನ್. ರಾಚಯ್ಯ ಅವರ ಸಾಮಾಜಿಕ ಬದ್ಧತೆ, ಸಾಧನೆ ಹಾಗೂ ಕೊಡುಗೆಗಳನ್ನು ಈಗಿನ ಯುವಪೀಳಿಗೆಗೆ ತಿಳಿಸುವ ಅಗತ್ಯವಿದೆ’ ಎಂದು ಚಿಂತಕ ಪ್ರೊ.ಕಾಳೇಗೌಡ ನಾಗವಾರ ಹೇಳಿದರು.</p>.<p>ಇಲ್ಲಿನ ಮಾನಸಗಂಗೋತ್ರಿಯ ಬಿಂಎಂಶ್ರೀ ಸಭಾಂಗಣದಲ್ಲಿ ಬುಧವಾರ ಮೈಸೂರು ವಿಶ್ವವಿದ್ಯಾಲಯದ ಎನ್. ರಾಚಯ್ಯ ಅಧ್ಯಯನ ಪೀಠ ಹಾಗೂ ರಾಜ್ಯಶಾಸ್ತ್ರ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ಎನ್. ರಾಚಯ್ಯ ಅವರ 107ನೇ ಜನ್ಮದಿನೋತ್ಸವದ ಅಂಗವಾಗಿ ಬುಧವಾರ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಕೃಷಿ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದ ಅವರು, ಸಾಮಾಜಿಕ ನ್ಯಾಯ, ಭೂ ಸುಧಾರಣೆ ಕಾರ್ಯಕ್ರಮಗಳಿಗೆ ಉತ್ತೇಜನ ಕೊಟ್ಟಿದ್ದರು. ಬುದ್ಧನಿಂದ ಪ್ರಭಾವಿತರಾಗಿದ್ದ ಮಾನವೀಯ ಕಾಳಜಿಯ ನಾಯಕರಾಗಿದ್ದರು’ ಎಂದು ಸ್ಮರಿಸಿದರು.</p>.<p>ಎನ್. ರಾಚಯ್ಯ ಅವರ ಜನ್ಮದಿನೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-37-1794634387</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದ ದಿ.ಎನ್. ರಾಚಯ್ಯ ಅವರ ಸಾಮಾಜಿಕ ಬದ್ಧತೆ, ಸಾಧನೆ ಹಾಗೂ ಕೊಡುಗೆಗಳನ್ನು ಈಗಿನ ಯುವಪೀಳಿಗೆಗೆ ತಿಳಿಸುವ ಅಗತ್ಯವಿದೆ’ ಎಂದು ಚಿಂತಕ ಪ್ರೊ.ಕಾಳೇಗೌಡ ನಾಗವಾರ ಹೇಳಿದರು.</p>.<p>ಇಲ್ಲಿನ ಮಾನಸಗಂಗೋತ್ರಿಯ ಬಿಂಎಂಶ್ರೀ ಸಭಾಂಗಣದಲ್ಲಿ ಬುಧವಾರ ಮೈಸೂರು ವಿಶ್ವವಿದ್ಯಾಲಯದ ಎನ್. ರಾಚಯ್ಯ ಅಧ್ಯಯನ ಪೀಠ ಹಾಗೂ ರಾಜ್ಯಶಾಸ್ತ್ರ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ಎನ್. ರಾಚಯ್ಯ ಅವರ 107ನೇ ಜನ್ಮದಿನೋತ್ಸವದ ಅಂಗವಾಗಿ ಬುಧವಾರ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಕೃಷಿ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದ ಅವರು, ಸಾಮಾಜಿಕ ನ್ಯಾಯ, ಭೂ ಸುಧಾರಣೆ ಕಾರ್ಯಕ್ರಮಗಳಿಗೆ ಉತ್ತೇಜನ ಕೊಟ್ಟಿದ್ದರು. ಬುದ್ಧನಿಂದ ಪ್ರಭಾವಿತರಾಗಿದ್ದ ಮಾನವೀಯ ಕಾಳಜಿಯ ನಾಯಕರಾಗಿದ್ದರು’ ಎಂದು ಸ್ಮರಿಸಿದರು.</p>.<p>ಎನ್. ರಾಚಯ್ಯ ಅವರ ಜನ್ಮದಿನೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-37-1794634387</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>