‘ಛತ್ರದ ಬೀದಿಯಲ್ಲಿರುವ ಕುಂಬಾರಕಟ್ಟೆಯಲ್ಲಿ ಪ್ರತಿ ವರ್ಷ ಮಳೆ ನೀರು ಹರಿದು ಅಕ್ಕಪಕ್ಕದ ಮನೆಗಳಿಗೆ ಅಪಾರ ಪ್ರಮಾಣದಲ್ಲಿ ನೀರು ನುಗ್ಗಿ ಹಾನಿಯಾಗುತ್ತಿದ್ದರೂ ಇದರ ಬಗ್ಗೆ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ, ಯಾರೂ ಗಮನ ಹರಿಸುತ್ತಿಲ್ಲ. ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿನ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ಜೀವ ಹಾನಿಯಾದರೆ ಯಾರು ಹೊಣೆ’ ಎಂದು ಇಲ್ಲಿನ ನಿವಾಸಿ ಪುಟ್ಟರಾಜು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.