<p><strong>ಮೈಸೂರು</strong>: ವರುಣ ಕ್ಷೇತ್ರದ ರಾಂಪುರ ಎಡದಂಡೆ ನಾಲೆ ಕೊನೆಭಾಗಕ್ಕೂ ಸುಗಮವಾಗಿ ನೀರು ಹರಿಯುವಂತೆ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ.</p>.<p>ಇಲ್ಲಿನ ಸಿದ್ದರಾಮನಹುಂಡಿ, ನಂದಿಗುಂದ, ಯಡಕೊಳ, ಅಂಚೆಹುಂಡಿ, ಕುಪ್ಪೇಗಾಲ ವ್ಯಾಪ್ತಿಯಲ್ಲಿ ಭತ್ತದ ಕೃಷಿ ಮಾಡುತ್ತಿದ್ದ ರೈತರು, ನಾಲೆ ನೀರು ಸರಿಯಾಗಿ ತಲುಪುತ್ತಿಲ್ಲ ಹಾಗೂ ಅಧಿಕಾರಿಗಳು ಕ್ರಮವಹಿಸುತ್ತಿಲ್ಲ ಎಂದು ಆರೋಪಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದರು.</p>.<p>ಈ ಬಗ್ಗೆ ‘ಪ್ರಜಾವಾಣಿ’ಯು ಮೇ 15ರಂದು ವರದಿ ಮಾಡಿ ಗಮನ ಸೆಳೆದಿತ್ತು.</p>.<p>‘ಪತ್ರಿಕೆಯ ವರದಿ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಎಂಜಿನಿಯರ್ ರಾಧಾ ಹಾಲಪ್ಪ ಅವರು ನಾಲೆ ಕೊನೆವರೆಗೂ ನೀರನ್ನು ತಲುಪಿಸುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ನಮ್ಮ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ’ ಎಂದು ರೈತರು ಸ್ಮರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-38-110545683</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ವರುಣ ಕ್ಷೇತ್ರದ ರಾಂಪುರ ಎಡದಂಡೆ ನಾಲೆ ಕೊನೆಭಾಗಕ್ಕೂ ಸುಗಮವಾಗಿ ನೀರು ಹರಿಯುವಂತೆ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ.</p>.<p>ಇಲ್ಲಿನ ಸಿದ್ದರಾಮನಹುಂಡಿ, ನಂದಿಗುಂದ, ಯಡಕೊಳ, ಅಂಚೆಹುಂಡಿ, ಕುಪ್ಪೇಗಾಲ ವ್ಯಾಪ್ತಿಯಲ್ಲಿ ಭತ್ತದ ಕೃಷಿ ಮಾಡುತ್ತಿದ್ದ ರೈತರು, ನಾಲೆ ನೀರು ಸರಿಯಾಗಿ ತಲುಪುತ್ತಿಲ್ಲ ಹಾಗೂ ಅಧಿಕಾರಿಗಳು ಕ್ರಮವಹಿಸುತ್ತಿಲ್ಲ ಎಂದು ಆರೋಪಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದರು.</p>.<p>ಈ ಬಗ್ಗೆ ‘ಪ್ರಜಾವಾಣಿ’ಯು ಮೇ 15ರಂದು ವರದಿ ಮಾಡಿ ಗಮನ ಸೆಳೆದಿತ್ತು.</p>.<p>‘ಪತ್ರಿಕೆಯ ವರದಿ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಎಂಜಿನಿಯರ್ ರಾಧಾ ಹಾಲಪ್ಪ ಅವರು ನಾಲೆ ಕೊನೆವರೆಗೂ ನೀರನ್ನು ತಲುಪಿಸುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ನಮ್ಮ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ’ ಎಂದು ರೈತರು ಸ್ಮರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-38-110545683</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>