<p>ಮೈಸೂರು: ರಂಗಾಯಣದ 22ನೇ ಚಿಣ್ಣರ ಮೇಳ ಏಪ್ರಿಲ್ 14ರಿಂದ ಮೇ 10ರ ವರೆಗೆ ನಡೆಯಲಿದ್ದು, ಏ.5ರಂದು ಭಾನುವಾರ ಬೆಳಿಗ್ಗೆ 10ಕ್ಕೆ ಸಂಸ್ಥೆಯ ಕಚೇರಿ ಆವರಣದಲ್ಲಿ 250 ಅರ್ಜಿಗಳ ವಿತರಣೆಯು ನಡೆಯಲಿದೆ.</p>.<p>2026ರ ಮಾರ್ಚ್ 31ಕ್ಕೆ 7 ವರ್ಷ ತುಂಬಿದ 15 ವರ್ಷ ಮೀರಿರದ ಮಕ್ಕಳಿಗೆ ಮಾತ್ರ ಪ್ರವೇಶ ಇರಲಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಶುಲ್ಕ ₹ 100 ಆಗಿದ್ದು, ಭರ್ತಿ ಮಾಡಿ ಏ.9ರಂದು ಸಂಜೆ 5ರೊಳಗೆ ಸಲ್ಲಿಸಬೇಕು. ಪ್ರವೇಶ ಶುಲ್ಕ ₹ 4 ಸಾವಿರ ಆಗಿದ್ದು, ‘ಉಪನಿರ್ದೇಶಕರು, ರಂಗಾಯಣ’ ಹೆಸರಿನಲ್ಲಿ ಡಿ.ಡಿ ತೆಗೆದು ಅರ್ಜಿ ಜೊತೆ ಲಗತ್ತಿಸಬೇಕು.</p>.<p>ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರಗಳೂ ಇರಬೇಕು. ಅರ್ಜಿಗಾಗಿ ಸಾಲಿನಲ್ಲಿ ನಿಂತವರು ಅರ್ಜಿಯಲ್ಲಿ ಮತ್ತು ರಸೀದಿಯಲ್ಲಿ ಕಡ್ಡಾಯವಾಗಿ ಮಗುವಿನ ಹೆಸರು ಬರೆಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ರಸೀದಿ ಜೊತೆಯೆ ಮರಳಿಸಬೇಕು ಎಂದು ರಂಗಾಯಣ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-39-486048890</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ರಂಗಾಯಣದ 22ನೇ ಚಿಣ್ಣರ ಮೇಳ ಏಪ್ರಿಲ್ 14ರಿಂದ ಮೇ 10ರ ವರೆಗೆ ನಡೆಯಲಿದ್ದು, ಏ.5ರಂದು ಭಾನುವಾರ ಬೆಳಿಗ್ಗೆ 10ಕ್ಕೆ ಸಂಸ್ಥೆಯ ಕಚೇರಿ ಆವರಣದಲ್ಲಿ 250 ಅರ್ಜಿಗಳ ವಿತರಣೆಯು ನಡೆಯಲಿದೆ.</p>.<p>2026ರ ಮಾರ್ಚ್ 31ಕ್ಕೆ 7 ವರ್ಷ ತುಂಬಿದ 15 ವರ್ಷ ಮೀರಿರದ ಮಕ್ಕಳಿಗೆ ಮಾತ್ರ ಪ್ರವೇಶ ಇರಲಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಶುಲ್ಕ ₹ 100 ಆಗಿದ್ದು, ಭರ್ತಿ ಮಾಡಿ ಏ.9ರಂದು ಸಂಜೆ 5ರೊಳಗೆ ಸಲ್ಲಿಸಬೇಕು. ಪ್ರವೇಶ ಶುಲ್ಕ ₹ 4 ಸಾವಿರ ಆಗಿದ್ದು, ‘ಉಪನಿರ್ದೇಶಕರು, ರಂಗಾಯಣ’ ಹೆಸರಿನಲ್ಲಿ ಡಿ.ಡಿ ತೆಗೆದು ಅರ್ಜಿ ಜೊತೆ ಲಗತ್ತಿಸಬೇಕು.</p>.<p>ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರಗಳೂ ಇರಬೇಕು. ಅರ್ಜಿಗಾಗಿ ಸಾಲಿನಲ್ಲಿ ನಿಂತವರು ಅರ್ಜಿಯಲ್ಲಿ ಮತ್ತು ರಸೀದಿಯಲ್ಲಿ ಕಡ್ಡಾಯವಾಗಿ ಮಗುವಿನ ಹೆಸರು ಬರೆಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ರಸೀದಿ ಜೊತೆಯೆ ಮರಳಿಸಬೇಕು ಎಂದು ರಂಗಾಯಣ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-39-486048890</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>