<p>ಮೈಸೂರು: ‘ರೇಣುಕಾಚಾರ್ಯರು ಸೇರಿದಂತೆ ಎಲ್ಲ ಮಹಾನ್ಪುರುಷರು ಸಮಾಜದ ಉನ್ನತಿಗಾಗಿ ಶ್ರಮಿಸಿದವರು. ಸಮಾನತೆ, ಮನುಕುಲದ ಉದ್ಧಾರಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟವರು. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವು ನಡೆಯಬೇಕು’ ಎಂದು ತೆಂಕಲಗೂಡು ಬೃಹನ್ಮಠದ ಪೀಠಾಧ್ಯಕ್ಷ ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಶ್ರೀರಾಂಪುರ 2ನೇ ಹಂತದಲ್ಲಿರುವ ವೀರಶೈವ ಸಾರ್ವಜನಿಕ ಸಂಸ್ಥೆ ವತಿಯಿಂದ ಭಾನುವಾರ ಆಯೋಜಿಸಿದ್ದ ರೇಣುಕಾಚಾರ್ಯ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.</p>.<p>‘ಬಸವಾದಿ ಶರಣರು ವಚನ ಸಾಹಿತ್ಯದ ಮೂಲಕ ಜನರಿಗೆ ಸರಿ ಮಾರ್ಗ ತೋರಿದ್ದಾರೆ. ಮುಂದಿನ ಪೀಳಿಗೆಗೆ ಸಿದ್ಧಾಂತ ಶಿಖಾಮಣಿ, ವಚನ ಸಾಹಿತ್ಯವನ್ನು ಪರಿಚಯಿಸುವ ಅಗತ್ಯವಿದೆ. ಎಲ್ಲ ಸಮಾಜದ ಜನರನ್ನೂ ಅಪ್ಪಿಕೊಳ್ಳುವುದು, ಪ್ರೀತಿ– ವಿಶ್ವಾಸದಿಂದ ಕಾಣುವುದು ವೀರಶೈವ ಧರ್ಮದ ಮೂಲವಾಗಿದೆ’ ಎಂದರು.</p>.<p>‘ರೇಣುಕಾಚಾರ್ಯರ ಸರ್ವ ಶ್ರೇಷ್ಠ, ಮೌಲಿಕವಾದ ಗ್ರಂಥವಾದ ಸಿದ್ಧಾಂತ ಶಿಖಾಮಣಿ’ಯ ತತ್ವ, ಸಿದ್ಧಾಂತದ ಬೋಧನೆ ಮಾನವಕುಲ ದೈವತ್ವದೆಡೆಗೆ ಸಾಗಲು ದಾರಿದೀಪವಾಗಿದೆ. ಇಡೀ ಮನುಕುಲಕ್ಕೆ ಸಂಸ್ಕಾರ ಕೊಡುವಂತಹ ಕೆಲಸವನ್ನು ಅವರು ಮಾಡಿದ್ದಾರೆ’ ಎಂದು ಸ್ಮರಿಸಿದರು.</p>.<p>ವಿಧಾನಪರಿಷತ್ ಮಾಜಿ ಸದಸ್ಯ ತೋಂಟದಾರ್ಯ, ‘ಮಾನವೀಯತೆ ಇದ್ದರೆ ಜಗತ್ತು ಚೆನ್ನಾಗಿರುತ್ತದೆ ಹಾಗೂ ಸಮಾಜದಲ್ಲಿ ಶಾಂತಿ ಕಾಪಾಡಬಹುದು. ಮನಸ್ಸಿನಲ್ಲಿ ಪರಿಶುದ್ಧತೆ ಇರಬೇಕು’ ಎಂದು ಹೇಳಿದರು.</p>.<p>‘ರೇಣುಕಾಚಾರ್ಯರು, ಬಸವಾದಿ ಶರಣರು ಜಾತಿ–ಮತಗಳನ್ನು ನೋಡಲಿಲ್ಲ. ಧರ್ಮ ಪ್ರಚಾರ ಹಾಗೂ ಮಾನವನನ್ನು ದೇವನನ್ನಾಗಿ ಮಾಡುವುದು ಅವರ ಉದ್ದೇಶವಾಗಿತ್ತು.ಅವರು ಒಂದು ಧರ್ಮಕ್ಕೆ ಸೀಮಿತವಾಗದೆ, ಸಕಲರಿಗೂ ಲೇಸು ಬಯಸುವ ಮಾನವೀಯ ಮೌಲ್ಯಗಳನ್ನು ಸಾರಿದ್ದಾರೆ’ ಎಂದು ಹೇಳಿದರು.</p>.<p>ಮುಡುಕುತೊರೆಯ ತೋಪಿನ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಧನಗೂರು ಮಠದ ಮುಮ್ಮಡಿ ಷಡಕ್ಷರ ದೇಶಿಕೇಂದ್ರ ಸ್ವಾಮೀಜಿ, ಸಿಗ್ಮಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಸ್. ಜ್ಞಾನಶಂಕರ, ಮೈಮುಲ್ ಮಾಜಿ ನಿರ್ದೇಶಕ ಎಸ್.ಸಿ. ಅಶೋಕ್, ರುದ್ರಪ್ಪ, ಟಿ.ಎನ್. ಸುಧಾಕರ್, ಎಂ.ವಿ.ನಂದೀಶ್, ಎಂ.ಎನ್. ಶಶಿಕುಮಾರ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-39-1937947963</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ರೇಣುಕಾಚಾರ್ಯರು ಸೇರಿದಂತೆ ಎಲ್ಲ ಮಹಾನ್ಪುರುಷರು ಸಮಾಜದ ಉನ್ನತಿಗಾಗಿ ಶ್ರಮಿಸಿದವರು. ಸಮಾನತೆ, ಮನುಕುಲದ ಉದ್ಧಾರಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟವರು. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವು ನಡೆಯಬೇಕು’ ಎಂದು ತೆಂಕಲಗೂಡು ಬೃಹನ್ಮಠದ ಪೀಠಾಧ್ಯಕ್ಷ ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಶ್ರೀರಾಂಪುರ 2ನೇ ಹಂತದಲ್ಲಿರುವ ವೀರಶೈವ ಸಾರ್ವಜನಿಕ ಸಂಸ್ಥೆ ವತಿಯಿಂದ ಭಾನುವಾರ ಆಯೋಜಿಸಿದ್ದ ರೇಣುಕಾಚಾರ್ಯ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.</p>.<p>‘ಬಸವಾದಿ ಶರಣರು ವಚನ ಸಾಹಿತ್ಯದ ಮೂಲಕ ಜನರಿಗೆ ಸರಿ ಮಾರ್ಗ ತೋರಿದ್ದಾರೆ. ಮುಂದಿನ ಪೀಳಿಗೆಗೆ ಸಿದ್ಧಾಂತ ಶಿಖಾಮಣಿ, ವಚನ ಸಾಹಿತ್ಯವನ್ನು ಪರಿಚಯಿಸುವ ಅಗತ್ಯವಿದೆ. ಎಲ್ಲ ಸಮಾಜದ ಜನರನ್ನೂ ಅಪ್ಪಿಕೊಳ್ಳುವುದು, ಪ್ರೀತಿ– ವಿಶ್ವಾಸದಿಂದ ಕಾಣುವುದು ವೀರಶೈವ ಧರ್ಮದ ಮೂಲವಾಗಿದೆ’ ಎಂದರು.</p>.<p>‘ರೇಣುಕಾಚಾರ್ಯರ ಸರ್ವ ಶ್ರೇಷ್ಠ, ಮೌಲಿಕವಾದ ಗ್ರಂಥವಾದ ಸಿದ್ಧಾಂತ ಶಿಖಾಮಣಿ’ಯ ತತ್ವ, ಸಿದ್ಧಾಂತದ ಬೋಧನೆ ಮಾನವಕುಲ ದೈವತ್ವದೆಡೆಗೆ ಸಾಗಲು ದಾರಿದೀಪವಾಗಿದೆ. ಇಡೀ ಮನುಕುಲಕ್ಕೆ ಸಂಸ್ಕಾರ ಕೊಡುವಂತಹ ಕೆಲಸವನ್ನು ಅವರು ಮಾಡಿದ್ದಾರೆ’ ಎಂದು ಸ್ಮರಿಸಿದರು.</p>.<p>ವಿಧಾನಪರಿಷತ್ ಮಾಜಿ ಸದಸ್ಯ ತೋಂಟದಾರ್ಯ, ‘ಮಾನವೀಯತೆ ಇದ್ದರೆ ಜಗತ್ತು ಚೆನ್ನಾಗಿರುತ್ತದೆ ಹಾಗೂ ಸಮಾಜದಲ್ಲಿ ಶಾಂತಿ ಕಾಪಾಡಬಹುದು. ಮನಸ್ಸಿನಲ್ಲಿ ಪರಿಶುದ್ಧತೆ ಇರಬೇಕು’ ಎಂದು ಹೇಳಿದರು.</p>.<p>‘ರೇಣುಕಾಚಾರ್ಯರು, ಬಸವಾದಿ ಶರಣರು ಜಾತಿ–ಮತಗಳನ್ನು ನೋಡಲಿಲ್ಲ. ಧರ್ಮ ಪ್ರಚಾರ ಹಾಗೂ ಮಾನವನನ್ನು ದೇವನನ್ನಾಗಿ ಮಾಡುವುದು ಅವರ ಉದ್ದೇಶವಾಗಿತ್ತು.ಅವರು ಒಂದು ಧರ್ಮಕ್ಕೆ ಸೀಮಿತವಾಗದೆ, ಸಕಲರಿಗೂ ಲೇಸು ಬಯಸುವ ಮಾನವೀಯ ಮೌಲ್ಯಗಳನ್ನು ಸಾರಿದ್ದಾರೆ’ ಎಂದು ಹೇಳಿದರು.</p>.<p>ಮುಡುಕುತೊರೆಯ ತೋಪಿನ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಧನಗೂರು ಮಠದ ಮುಮ್ಮಡಿ ಷಡಕ್ಷರ ದೇಶಿಕೇಂದ್ರ ಸ್ವಾಮೀಜಿ, ಸಿಗ್ಮಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಸ್. ಜ್ಞಾನಶಂಕರ, ಮೈಮುಲ್ ಮಾಜಿ ನಿರ್ದೇಶಕ ಎಸ್.ಸಿ. ಅಶೋಕ್, ರುದ್ರಪ್ಪ, ಟಿ.ಎನ್. ಸುಧಾಕರ್, ಎಂ.ವಿ.ನಂದೀಶ್, ಎಂ.ಎನ್. ಶಶಿಕುಮಾರ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-39-1937947963</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>