<p>ಮೈಸೂರು: ‘ಒಳ ಮೀಸಲು ಹಂಚಿಕೆಯು ಯಾವುದೇ ಪರಿಶಿಷ್ಟ ಸಮುದಾಯಕ್ಕೆ ಅನ್ಯಾಯವಾಗಿಲ್ಲ. ಶೇ 17ರ ಬದಲು ಶೇ 15 ಔದ್ಯೋಗಿಕ, ಶೈಕ್ಷಣಿಕ ಹಂಚಿಕೆ ಮಾಡಿರುವುದು ಸ್ವಾಗತಾರ್ಹ ಕ್ರಮ’ ಎಂದು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಸ್. ರಾಜೇಶ್ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಚಿವ ಸಂಪುಟದ ಡಾ. ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ ಸೇರಿದಂತೆ ಎಲ್ಲ ಮುಖಂಡರ ಜೊತೆ ಕೂಲಂಕಷವಾಗಿ ಚರ್ಚಿಸಿ ಯಾರಿಗೂ ಅನ್ಯಾಯವಾಗದಂತೆ ಒಳಮೀಸಲು ಜಾರಿಗೊಳಿಸಲಾಗಿದೆ. ಪ್ರಣಾಳಿಕೆಯ ಭರವಸೆಯನ್ನು ಈಡೇರಿಸಿದೆ’ ಎಂದರು.</p>.<p>ಗೋಷ್ಠಿಯಲ್ಲಿ ಅಶೋಕಪುರಂ ಮಹೇಶ್, ರಾಜಶೇಖರ್, ಕುಕ್ಕರಹಳ್ಳಿ ನಂಜುಂಡಸ್ವಾಮಿ, ಅಶೋಕಪುರಂ ಪುಟ್ಟರಾಜು, ಶಿವಶಂಕರಮೂರ್ತಿ, ರಾಮು, ರವಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-39-168044556</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಒಳ ಮೀಸಲು ಹಂಚಿಕೆಯು ಯಾವುದೇ ಪರಿಶಿಷ್ಟ ಸಮುದಾಯಕ್ಕೆ ಅನ್ಯಾಯವಾಗಿಲ್ಲ. ಶೇ 17ರ ಬದಲು ಶೇ 15 ಔದ್ಯೋಗಿಕ, ಶೈಕ್ಷಣಿಕ ಹಂಚಿಕೆ ಮಾಡಿರುವುದು ಸ್ವಾಗತಾರ್ಹ ಕ್ರಮ’ ಎಂದು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಸ್. ರಾಜೇಶ್ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಚಿವ ಸಂಪುಟದ ಡಾ. ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ ಸೇರಿದಂತೆ ಎಲ್ಲ ಮುಖಂಡರ ಜೊತೆ ಕೂಲಂಕಷವಾಗಿ ಚರ್ಚಿಸಿ ಯಾರಿಗೂ ಅನ್ಯಾಯವಾಗದಂತೆ ಒಳಮೀಸಲು ಜಾರಿಗೊಳಿಸಲಾಗಿದೆ. ಪ್ರಣಾಳಿಕೆಯ ಭರವಸೆಯನ್ನು ಈಡೇರಿಸಿದೆ’ ಎಂದರು.</p>.<p>ಗೋಷ್ಠಿಯಲ್ಲಿ ಅಶೋಕಪುರಂ ಮಹೇಶ್, ರಾಜಶೇಖರ್, ಕುಕ್ಕರಹಳ್ಳಿ ನಂಜುಂಡಸ್ವಾಮಿ, ಅಶೋಕಪುರಂ ಪುಟ್ಟರಾಜು, ಶಿವಶಂಕರಮೂರ್ತಿ, ರಾಮು, ರವಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-39-168044556</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>