<p><strong>ಮೈಸೂರು</strong>: ‘ಸರ್ಕಾರಿ ಜಾಗ ಒತ್ತುವರಿಯಾಗಿದ್ದರೆ ತ್ವರಿತವಾಗಿ ತೆರವು ಕಾರ್ಯಾಚರಣೆ ನಡೆಸಿ, ಅದನ್ನು ಸಾರ್ವಜನಿಕ ಉದ್ದೇಶಗಳಿಗೆ ಕಾಯ್ದಿರಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು. </p>.<p>ಇಲ್ಲಿನ ಸಿದ್ಧಾರ್ಥನಗರದ ಜಿಲ್ಲಾಮಟ್ಟದ ಕಚೇರಿಗಳ ಸಂಕೀರ್ಣದ ಸಭಾಂಗಣದಲ್ಲಿ ಬುಧವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಹಳ್ಳಿಗಳಲ್ಲಿ ತೆರವು ಕಾರ್ಯಾಚರಣೆಯನ್ನು ನಿಗದಿತ ಸಮಯದೊಳಗೆ ಮುಗಿಸಬೇಕು. ಪ್ರಾಥಮಿಕ ಆಸ್ಪತ್ರೆ, ಶಾಲಾ ಕೊಠಡಿಗಳು, ಅಂಗನವಾಡಿ ಕೇಂದ್ರ, ವಸತಿನಿಲಯಗಳು, ಆಶ್ರಯ ಬಡಾವಣೆಗಳ ಮೊದಲಾದವುಗಳಿಗೆ ಮೀಸಲಿಡಬೇಕು’ ಎಂದರು.</p>.<p><strong>ಆದ್ಯತೆ ನೀಡಿ:</strong> ‘ಕೆರೆ–ಕಟ್ಟೆಗಳ ಒತ್ತುವರಿ ತೆರವಿಗೂ ಆದ್ಯತೆ ಕೊಡಬೇಕು. ಪಟ್ಟಿ ಮಾಡಿಕೊಂಡು ದಿನಾಂಕ ನಿಗದಿಪಡಿಸಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.</p>.<p>‘ರೈತರು ಸೇರಿದಂತೆ ಪ್ರತಿಯೊಬ್ಬರಿಗೂ ಕಂದಾಯ ಇಲಾಖೆಯು ಪ್ರಮುಖ ಹಾಗೂ ಮಾತೃ ಇಲಾಖೆಯಾಗಿದೆ. ಸಾರ್ವಜನಿಕರು ಸಣ್ಣಪುಟ್ಟ ವಿಚಾರಗಳಿಗೆ ಕಚೇರಿಗಳಿಗೆ ಅಲೆದಾಡದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.</p>.<p>‘ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇ-ಪೌತಿ ಖಾತೆ ಆಂದೋಲನದಿಂದಾಗಿ ಜನರಿಗೆ ಅನುಕೂಲವಾಗಿದೆ. ಇದನ್ನು ಹಳ್ಳಿಗಳಲ್ಲಿ ಮತ್ತಷ್ಟು ವೇಗಗೊಳಿಸಬೇಕು. ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್ಗಳು, ಆರ್ಐಗಳು ನಿಮ್ಮ ಹಂತದಲ್ಲಿ ಪರಿಶೀಲನೆ ನಡೆಸಿ ಇ– ಪೌತಿ ಖಾತೆ ಪ್ರಕ್ರಿಯೆ ಮುಗಿಸಬೇಕು. ಮುಂದಿನ ದಿನಗಳಲ್ಲಿ ನಾನೇ ಹಳ್ಳಿಗಳಿಗೆ ಭೇಟಿ ನೀಡಿ ಇ-ಪೌತಿ ಪ್ರಗತಿ ಕಾರ್ಯವನ್ನು ಪರಿಶೀಲನೆ ನಡೆಸುತ್ತೇನೆ’ ಎಂದು ತಿಳಿಸಿದರು.</p>.<p><strong>ಮೇಲ್ವಿಚಾರಣೆ ಮಾಡಿ</strong>: ‘ಭೂ ಸುರಕ್ಷಾ ಯೋಜನೆಯಡಿ ತಹಶೀಲ್ದಾರ್, ಎಸಿ ಕಚೇರಿಗಳಲ್ಲಿರುವ ಎಲ್ಲಾ ಕಡತಗಳನ್ನು ಪ್ರತಿದಿನ ಸ್ಕ್ಯಾನಿಂಗ್ ಮಾಡಿ ಕಂಪ್ಯೂಟರ್ನಲ್ಲಿ ಅಪ್ಲೋಡ್ ಮಾಡಬೇಕು. ಬಾಕಿ ಇರುವ ದಾಖಲೆಗಳನ್ನು ಸ್ಕ್ಯಾನ್ ಮಾಡಬೇಕು. ಈ ಪ್ರಕ್ರಿಯೆ ಮುಗಿದರೆ ರೈತರು ಇರುವಲ್ಲೇ ಆನ್ಲೈನ್ ಮೂಲಕ ದಾಖಲೆಗಳನ್ನು ಪಡೆಯಬಹುದಾಗಿದೆ. ನಿತ್ಯವೂ 200ರಿಂದ 300 ದಾಖಲೆಗಳನ್ನು ಸ್ಕ್ಯಾನ್ ಮಾಡಿದರೆ ಮಾರ್ಚ್ ತಿಂಗಳೊಳಗೆ ಮುಗಿಸಬಹುದು. ತಹಶೀಲ್ದಾರರು ನಿತ್ಯವೂ ಮೇಲ್ವಿಚಾರಣೆ ಮಾಡಬೇಕು’ ಎಂದು ತಿಳಿಸಿದರು.</p>.<p>‘ರೈತರ ಆರ್ಟಿಸಿಗೆ ಆಧಾರ್ ಸೀಡಿಂಗ್ ಕಾರ್ಯವನ್ನು ಶೇ 100ರಷ್ಟು ಪೂರ್ಣಗೊಳಿಸಬೇಕು. ಇದರಿಂದ ಬೋಗಸ್ ಪ್ರಕರಣಗಳನ್ನು ತಡೆಯಲು ಕ್ರಮ ವಹಿಸಬಹುದಾಗಿದೆ’ ಎಂದರು.</p>.<p>‘ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್ಗಳು ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮ ಆಡಳಿತ ಅಧಿಕಾರಿಗಳ ಕೆಲಸವನ್ನು ಮೇಲ್ವಿಚಾರಣೆ ನಡೆಸಬೇಕು. ಗ್ರಾಮೀಣ ರೈತರು, ಸಾರ್ವಜನಿಕರ ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಬೇಕು. ಮುಖ್ಯಮಂತ್ರಿಯವರ ಜಿಲ್ಲೆ ಆಗಿರುವುದರಿಂದ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಬರಬಾರದು. ಈ ನಿಟ್ಟಿನಲ್ಲಿ ಹೆಚ್ಚು ಕಾರ್ಯಪ್ರವೃತ್ತರಾಗಬೇಕು’ ಎಂದು ಸೂಚಿಸಿದರು.</p>.<p><strong>ಕಂದಾಯ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನೆ ಜನರಿಂದ ದೂರು ಬಾರದಂತೆ ನೋಡಿಕೊಳ್ಳಿ ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿ</strong></p>.<div><blockquote>ಕಂದಾಯ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದಲ್ಲಿ ಅಂಥವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು</blockquote><span class="attribution">ಪಿ.ಶಿವರಾಜು ಹೆಚ್ಚುವರಿ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸರ್ಕಾರಿ ಜಾಗ ಒತ್ತುವರಿಯಾಗಿದ್ದರೆ ತ್ವರಿತವಾಗಿ ತೆರವು ಕಾರ್ಯಾಚರಣೆ ನಡೆಸಿ, ಅದನ್ನು ಸಾರ್ವಜನಿಕ ಉದ್ದೇಶಗಳಿಗೆ ಕಾಯ್ದಿರಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು. </p>.<p>ಇಲ್ಲಿನ ಸಿದ್ಧಾರ್ಥನಗರದ ಜಿಲ್ಲಾಮಟ್ಟದ ಕಚೇರಿಗಳ ಸಂಕೀರ್ಣದ ಸಭಾಂಗಣದಲ್ಲಿ ಬುಧವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಹಳ್ಳಿಗಳಲ್ಲಿ ತೆರವು ಕಾರ್ಯಾಚರಣೆಯನ್ನು ನಿಗದಿತ ಸಮಯದೊಳಗೆ ಮುಗಿಸಬೇಕು. ಪ್ರಾಥಮಿಕ ಆಸ್ಪತ್ರೆ, ಶಾಲಾ ಕೊಠಡಿಗಳು, ಅಂಗನವಾಡಿ ಕೇಂದ್ರ, ವಸತಿನಿಲಯಗಳು, ಆಶ್ರಯ ಬಡಾವಣೆಗಳ ಮೊದಲಾದವುಗಳಿಗೆ ಮೀಸಲಿಡಬೇಕು’ ಎಂದರು.</p>.<p><strong>ಆದ್ಯತೆ ನೀಡಿ:</strong> ‘ಕೆರೆ–ಕಟ್ಟೆಗಳ ಒತ್ತುವರಿ ತೆರವಿಗೂ ಆದ್ಯತೆ ಕೊಡಬೇಕು. ಪಟ್ಟಿ ಮಾಡಿಕೊಂಡು ದಿನಾಂಕ ನಿಗದಿಪಡಿಸಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.</p>.<p>‘ರೈತರು ಸೇರಿದಂತೆ ಪ್ರತಿಯೊಬ್ಬರಿಗೂ ಕಂದಾಯ ಇಲಾಖೆಯು ಪ್ರಮುಖ ಹಾಗೂ ಮಾತೃ ಇಲಾಖೆಯಾಗಿದೆ. ಸಾರ್ವಜನಿಕರು ಸಣ್ಣಪುಟ್ಟ ವಿಚಾರಗಳಿಗೆ ಕಚೇರಿಗಳಿಗೆ ಅಲೆದಾಡದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.</p>.<p>‘ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇ-ಪೌತಿ ಖಾತೆ ಆಂದೋಲನದಿಂದಾಗಿ ಜನರಿಗೆ ಅನುಕೂಲವಾಗಿದೆ. ಇದನ್ನು ಹಳ್ಳಿಗಳಲ್ಲಿ ಮತ್ತಷ್ಟು ವೇಗಗೊಳಿಸಬೇಕು. ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್ಗಳು, ಆರ್ಐಗಳು ನಿಮ್ಮ ಹಂತದಲ್ಲಿ ಪರಿಶೀಲನೆ ನಡೆಸಿ ಇ– ಪೌತಿ ಖಾತೆ ಪ್ರಕ್ರಿಯೆ ಮುಗಿಸಬೇಕು. ಮುಂದಿನ ದಿನಗಳಲ್ಲಿ ನಾನೇ ಹಳ್ಳಿಗಳಿಗೆ ಭೇಟಿ ನೀಡಿ ಇ-ಪೌತಿ ಪ್ರಗತಿ ಕಾರ್ಯವನ್ನು ಪರಿಶೀಲನೆ ನಡೆಸುತ್ತೇನೆ’ ಎಂದು ತಿಳಿಸಿದರು.</p>.<p><strong>ಮೇಲ್ವಿಚಾರಣೆ ಮಾಡಿ</strong>: ‘ಭೂ ಸುರಕ್ಷಾ ಯೋಜನೆಯಡಿ ತಹಶೀಲ್ದಾರ್, ಎಸಿ ಕಚೇರಿಗಳಲ್ಲಿರುವ ಎಲ್ಲಾ ಕಡತಗಳನ್ನು ಪ್ರತಿದಿನ ಸ್ಕ್ಯಾನಿಂಗ್ ಮಾಡಿ ಕಂಪ್ಯೂಟರ್ನಲ್ಲಿ ಅಪ್ಲೋಡ್ ಮಾಡಬೇಕು. ಬಾಕಿ ಇರುವ ದಾಖಲೆಗಳನ್ನು ಸ್ಕ್ಯಾನ್ ಮಾಡಬೇಕು. ಈ ಪ್ರಕ್ರಿಯೆ ಮುಗಿದರೆ ರೈತರು ಇರುವಲ್ಲೇ ಆನ್ಲೈನ್ ಮೂಲಕ ದಾಖಲೆಗಳನ್ನು ಪಡೆಯಬಹುದಾಗಿದೆ. ನಿತ್ಯವೂ 200ರಿಂದ 300 ದಾಖಲೆಗಳನ್ನು ಸ್ಕ್ಯಾನ್ ಮಾಡಿದರೆ ಮಾರ್ಚ್ ತಿಂಗಳೊಳಗೆ ಮುಗಿಸಬಹುದು. ತಹಶೀಲ್ದಾರರು ನಿತ್ಯವೂ ಮೇಲ್ವಿಚಾರಣೆ ಮಾಡಬೇಕು’ ಎಂದು ತಿಳಿಸಿದರು.</p>.<p>‘ರೈತರ ಆರ್ಟಿಸಿಗೆ ಆಧಾರ್ ಸೀಡಿಂಗ್ ಕಾರ್ಯವನ್ನು ಶೇ 100ರಷ್ಟು ಪೂರ್ಣಗೊಳಿಸಬೇಕು. ಇದರಿಂದ ಬೋಗಸ್ ಪ್ರಕರಣಗಳನ್ನು ತಡೆಯಲು ಕ್ರಮ ವಹಿಸಬಹುದಾಗಿದೆ’ ಎಂದರು.</p>.<p>‘ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್ಗಳು ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮ ಆಡಳಿತ ಅಧಿಕಾರಿಗಳ ಕೆಲಸವನ್ನು ಮೇಲ್ವಿಚಾರಣೆ ನಡೆಸಬೇಕು. ಗ್ರಾಮೀಣ ರೈತರು, ಸಾರ್ವಜನಿಕರ ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಬೇಕು. ಮುಖ್ಯಮಂತ್ರಿಯವರ ಜಿಲ್ಲೆ ಆಗಿರುವುದರಿಂದ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಬರಬಾರದು. ಈ ನಿಟ್ಟಿನಲ್ಲಿ ಹೆಚ್ಚು ಕಾರ್ಯಪ್ರವೃತ್ತರಾಗಬೇಕು’ ಎಂದು ಸೂಚಿಸಿದರು.</p>.<p><strong>ಕಂದಾಯ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನೆ ಜನರಿಂದ ದೂರು ಬಾರದಂತೆ ನೋಡಿಕೊಳ್ಳಿ ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿ</strong></p>.<div><blockquote>ಕಂದಾಯ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದಲ್ಲಿ ಅಂಥವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು</blockquote><span class="attribution">ಪಿ.ಶಿವರಾಜು ಹೆಚ್ಚುವರಿ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>