<p>ಮೈಸೂರು: ‘ರಾಜ್ಯದ ಎಸ್ಸಿ ಪಟ್ಟಿಯಲ್ಲಿ ಅಸಾಂವಿಧಾನಿಕವಾಗಿ ಸೇರ್ಪಡೆಗೊಂಡಿರುವ ಸ್ಪೃಶ್ಯ ಜಾತಿಗಳಾದ ಬಂಜಾರ, ಲಂಬಾಣಿ, ಭೋವಿ, ಕೊರಮ, ಕೊರಚ, ಬೇಡ- ಬುಡ್ಗ ಜಂಗಮರನ್ನು ಸರ್ಕಾರ ಬೇರ್ಪಡಿಸಬೇಕು’ ಎಂದು ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ- ಜಾಗೃತಿ ಅಭಿಯಾನ ಸಮಿತಿ ಅಧ್ಯಕ್ಷ ಕೃಷ್ಣ ಆಗ್ರಹಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನೈಜ ಅಸ್ಪೃಶ್ಯರಾದ ಹೊಲೆಯ, ಮಾದಿಗ ಸಮುದಾಯಗಳ ಒಳ ಮೀಸಲಾತಿಗೆ ಈ ಜಾತಿಗಳೇ ಅಡ್ಡಿಯಾಗಿವೆ. ಇವುಗಳನ್ನು ಪಟ್ಟಿಯಿಂದ ಹೊರ ತೆಗೆಯದ ಹೊರತು ಶಾಶ್ವತ ಪರಿಹಾರ ಅಸಾಧ್ಯ. ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಈ ಬಗ್ಗೆ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ನೈಜ ಪರಿಶಿಷ್ಟ ಜಾತಿ ಸಮುದಾಯಗಳ ನಡುವಿನ ಸಂಘರ್ಷ ಬಗೆಹರಿಸದ, ಅವುಗಳ ಸಾಂವಿಧಾನಿಕ ಹಕ್ಕು, ಸವಲತ್ತುಗಳನ್ನು ಸಂರಕ್ಷಿಸಲು ವಿಫಲರಾಗಿರುವ ಎಸ್ಸಿ ಮೀಸಲು ಕ್ಷೇತ್ರದ ಶಾಸಕರು, ಸಂಸದರು, ಸಚಿವರು ಕೂಡಲೇ ರಾಜೀನಾಮೆ ನೀಡಬೇಕು’ ಎಂದರು.</p>.<p>ಸಮಿತಿ ಪದಾಧಿಕಾರಿಗಳಾದ ನಂಜುಂಡ ಮೌರ್ಯ, ಸ್ವಾಮಿ, ರಾಚಪ್ಪ, ಸತೀಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-39-1723293646</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ರಾಜ್ಯದ ಎಸ್ಸಿ ಪಟ್ಟಿಯಲ್ಲಿ ಅಸಾಂವಿಧಾನಿಕವಾಗಿ ಸೇರ್ಪಡೆಗೊಂಡಿರುವ ಸ್ಪೃಶ್ಯ ಜಾತಿಗಳಾದ ಬಂಜಾರ, ಲಂಬಾಣಿ, ಭೋವಿ, ಕೊರಮ, ಕೊರಚ, ಬೇಡ- ಬುಡ್ಗ ಜಂಗಮರನ್ನು ಸರ್ಕಾರ ಬೇರ್ಪಡಿಸಬೇಕು’ ಎಂದು ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ- ಜಾಗೃತಿ ಅಭಿಯಾನ ಸಮಿತಿ ಅಧ್ಯಕ್ಷ ಕೃಷ್ಣ ಆಗ್ರಹಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನೈಜ ಅಸ್ಪೃಶ್ಯರಾದ ಹೊಲೆಯ, ಮಾದಿಗ ಸಮುದಾಯಗಳ ಒಳ ಮೀಸಲಾತಿಗೆ ಈ ಜಾತಿಗಳೇ ಅಡ್ಡಿಯಾಗಿವೆ. ಇವುಗಳನ್ನು ಪಟ್ಟಿಯಿಂದ ಹೊರ ತೆಗೆಯದ ಹೊರತು ಶಾಶ್ವತ ಪರಿಹಾರ ಅಸಾಧ್ಯ. ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಈ ಬಗ್ಗೆ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ನೈಜ ಪರಿಶಿಷ್ಟ ಜಾತಿ ಸಮುದಾಯಗಳ ನಡುವಿನ ಸಂಘರ್ಷ ಬಗೆಹರಿಸದ, ಅವುಗಳ ಸಾಂವಿಧಾನಿಕ ಹಕ್ಕು, ಸವಲತ್ತುಗಳನ್ನು ಸಂರಕ್ಷಿಸಲು ವಿಫಲರಾಗಿರುವ ಎಸ್ಸಿ ಮೀಸಲು ಕ್ಷೇತ್ರದ ಶಾಸಕರು, ಸಂಸದರು, ಸಚಿವರು ಕೂಡಲೇ ರಾಜೀನಾಮೆ ನೀಡಬೇಕು’ ಎಂದರು.</p>.<p>ಸಮಿತಿ ಪದಾಧಿಕಾರಿಗಳಾದ ನಂಜುಂಡ ಮೌರ್ಯ, ಸ್ವಾಮಿ, ರಾಚಪ್ಪ, ಸತೀಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-39-1723293646</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>