<p><strong>ಮೈಸೂರು</strong>: ಸಮಾಜ ಕಲ್ಯಾಣ ಇಲಾಖೆಗೆ ಸೇರಿದ್ದ 38 ಗುಂಟೆ ಒತ್ತುವರಿಯನ್ನು ಶುಕ್ರವಾರ ಮುಂಜಾನೆ ಜಿಲ್ಲಾಡಳಿತವು ತೆರವು ಮಾಡಿದೆ. </p>.<p>ಬೆಂಗಳೂರು– ನೀಲಗಿರಿ ರಸ್ತೆಯ ಜೆಎಸ್ಎಸ್ ಕಾಲೇಜು ಎದುರು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿ ಅಕ್ರಮವಾಗಿ ಪಾರ್ಕಿಂಗ್ ಮತ್ತು ಟೀ ಮಾರಾಟ ಅಂಗಡಿಗಳನ್ನು ಇರಿಸಿದ್ದರು. 2011ರಲ್ಲಿಯೇ ಈ ಜಾಗವನ್ನು ಹಿಂದುಳಿದ ವರ್ಗಗಳ ಡಿ.ದೇವರಾಜ ಅರಸು ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಸರ್ಕಾರವು ಮಂಜೂರು ಮಾಡಿತ್ತು. </p>.<p>25 ವರ್ಷಗಳಿಂದ ಇದೇ ಜಾಗದಲ್ಲಿ ಒತ್ತುವರಿದಾರರಿದ್ದರೂ ಕ್ರಮ ಕೈಗೊಳ್ಳದ್ದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ ವ್ಯಕ್ತವಾಗಿತ್ತು. ಎಚ್ಚೆತ್ತ ಜಿಲ್ಲಾಡಳಿತವು ಕಾರ್ಯಾಚರಣೆ ನಡೆಸಿತು. ತಹಶೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಾಘವೇಂದ್ರ, ಇನ್ಸ್ಪೆಕ್ಟರ್ಗಳಾದ ಯೋಗಾಂಜನಪ್ಪ, ರವಿಕುಮಾರ್ ಭಾಗವಹಿಸಿದ್ದರು.</p>.<p>ಜೆಸಿಬಿ ಸಹಾಯದಿಂದ ಅಂಗಡಿಗಳನ್ನು ಕೆಡವಿದ ನಂತರ ಜಾಗವನ್ನು ಇಲಾಖೆಗೆ ಹಸ್ತಾಂತರಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಸಮಾಜ ಕಲ್ಯಾಣ ಇಲಾಖೆಗೆ ಸೇರಿದ್ದ 38 ಗುಂಟೆ ಒತ್ತುವರಿಯನ್ನು ಶುಕ್ರವಾರ ಮುಂಜಾನೆ ಜಿಲ್ಲಾಡಳಿತವು ತೆರವು ಮಾಡಿದೆ. </p>.<p>ಬೆಂಗಳೂರು– ನೀಲಗಿರಿ ರಸ್ತೆಯ ಜೆಎಸ್ಎಸ್ ಕಾಲೇಜು ಎದುರು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿ ಅಕ್ರಮವಾಗಿ ಪಾರ್ಕಿಂಗ್ ಮತ್ತು ಟೀ ಮಾರಾಟ ಅಂಗಡಿಗಳನ್ನು ಇರಿಸಿದ್ದರು. 2011ರಲ್ಲಿಯೇ ಈ ಜಾಗವನ್ನು ಹಿಂದುಳಿದ ವರ್ಗಗಳ ಡಿ.ದೇವರಾಜ ಅರಸು ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಸರ್ಕಾರವು ಮಂಜೂರು ಮಾಡಿತ್ತು. </p>.<p>25 ವರ್ಷಗಳಿಂದ ಇದೇ ಜಾಗದಲ್ಲಿ ಒತ್ತುವರಿದಾರರಿದ್ದರೂ ಕ್ರಮ ಕೈಗೊಳ್ಳದ್ದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ ವ್ಯಕ್ತವಾಗಿತ್ತು. ಎಚ್ಚೆತ್ತ ಜಿಲ್ಲಾಡಳಿತವು ಕಾರ್ಯಾಚರಣೆ ನಡೆಸಿತು. ತಹಶೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಾಘವೇಂದ್ರ, ಇನ್ಸ್ಪೆಕ್ಟರ್ಗಳಾದ ಯೋಗಾಂಜನಪ್ಪ, ರವಿಕುಮಾರ್ ಭಾಗವಹಿಸಿದ್ದರು.</p>.<p>ಜೆಸಿಬಿ ಸಹಾಯದಿಂದ ಅಂಗಡಿಗಳನ್ನು ಕೆಡವಿದ ನಂತರ ಜಾಗವನ್ನು ಇಲಾಖೆಗೆ ಹಸ್ತಾಂತರಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>