<p><strong>ಮೈಸೂರು</strong>: ‘ಪರಮಾತ್ಮನ ಧ್ಯಾನದಿಂದ ಮೋಕ್ಷ ಸಾಧ್ಯ’ ಎಂದು ಘೋಡಗೇರಿ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ ಹೇಳಿದರು.</p>.<p>ಸುತ್ತೂರು ಮಠದಲ್ಲಿ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಹಾಗೂ ಜೆಎಸ್ಎಸ್ ಮಹಾವಿದ್ಯಾಪೀಠದಿಂದ ಆಯೋಜಿಸಿದ್ದ ನಿಜಗುಣ ಶಿವಯೋಗಿಗಳ ವಿವೇಕ ಚಿಂತಾಮಣಿ ಕೃತಿ ಕುರಿತು ಮಠಾಧಿಪತಿಗಳು, ಮಾತಾಜಿಗಳು, ಆಧ್ಯಾತ್ಮಿಕ ಜಿಜ್ಞಾಸುಗಳು ಹಾಗೂ ಸಾಧಕರ ಅಧ್ಯಯನ ಶಿಬಿರದಲ್ಲಿ ಉಪನ್ಯಾಸ ನೀಡಿದರು.</p>.<p>‘ಜಗತ್ತಿಗೆ ದೇವರೇ ಆಶ್ರಯದಾತ. ಲೋಕವನ್ನು ನಡೆಸುತ್ತಿರುವ ಅವನೇ ಸೃಷ್ಟಿ, ಸ್ಥಿತಿ, ಲಯಕ್ಕೆ ಕಾರಣ. ವಿವೇಕ ಚಿಂತಾಮಣಿ ಕೃತಿಯು ಈ ಬಗ್ಗೆ ಮಾಹಿತಿ ಒದಗಿಸುತ್ತದೆ’ ಎಂದರು.</p>.<p>ನಿವೃತ್ತ ಪ್ರಾಧ್ಯಾಪಕ ಕೆ.ಅನಂತರಾಮು ಅವರು, ‘ಬದುಕು ಪಾಪ ಪುಣ್ಯಗಳ ಫಲ. ಸದ್ಗುರು ಭಕ್ತನನ್ನು ಕತ್ತಲಿಂದ ಜ್ಞಾನವೆಂಬ ಬೆಳಕಿನ ಕಡೆಗೆ ಕರೆದೊಯ್ಯುತ್ತಾನೆ’ ಎಂದು ಹೇಳಿದರು.</p>.<p>ಯೋಗಗುರು ಕೆ.ರಾಘವೇಂದ್ರ ಪೈ, ‘ಯೋಗ ಮತ್ತು ಧ್ಯಾನದಿಂದ ದೇಹ ಮತ್ತು ಮನಸ್ಸನ್ನು ಶಾಂತಗೊಳಿಸಬಹುದು. ಜೀವನದಲ್ಲಿ ದೈವಿಕತೆ ಹೊಂದಬಹುದು’ ಎಂದರು.</p>.<p>ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-38-1360341555</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಪರಮಾತ್ಮನ ಧ್ಯಾನದಿಂದ ಮೋಕ್ಷ ಸಾಧ್ಯ’ ಎಂದು ಘೋಡಗೇರಿ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ ಹೇಳಿದರು.</p>.<p>ಸುತ್ತೂರು ಮಠದಲ್ಲಿ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಹಾಗೂ ಜೆಎಸ್ಎಸ್ ಮಹಾವಿದ್ಯಾಪೀಠದಿಂದ ಆಯೋಜಿಸಿದ್ದ ನಿಜಗುಣ ಶಿವಯೋಗಿಗಳ ವಿವೇಕ ಚಿಂತಾಮಣಿ ಕೃತಿ ಕುರಿತು ಮಠಾಧಿಪತಿಗಳು, ಮಾತಾಜಿಗಳು, ಆಧ್ಯಾತ್ಮಿಕ ಜಿಜ್ಞಾಸುಗಳು ಹಾಗೂ ಸಾಧಕರ ಅಧ್ಯಯನ ಶಿಬಿರದಲ್ಲಿ ಉಪನ್ಯಾಸ ನೀಡಿದರು.</p>.<p>‘ಜಗತ್ತಿಗೆ ದೇವರೇ ಆಶ್ರಯದಾತ. ಲೋಕವನ್ನು ನಡೆಸುತ್ತಿರುವ ಅವನೇ ಸೃಷ್ಟಿ, ಸ್ಥಿತಿ, ಲಯಕ್ಕೆ ಕಾರಣ. ವಿವೇಕ ಚಿಂತಾಮಣಿ ಕೃತಿಯು ಈ ಬಗ್ಗೆ ಮಾಹಿತಿ ಒದಗಿಸುತ್ತದೆ’ ಎಂದರು.</p>.<p>ನಿವೃತ್ತ ಪ್ರಾಧ್ಯಾಪಕ ಕೆ.ಅನಂತರಾಮು ಅವರು, ‘ಬದುಕು ಪಾಪ ಪುಣ್ಯಗಳ ಫಲ. ಸದ್ಗುರು ಭಕ್ತನನ್ನು ಕತ್ತಲಿಂದ ಜ್ಞಾನವೆಂಬ ಬೆಳಕಿನ ಕಡೆಗೆ ಕರೆದೊಯ್ಯುತ್ತಾನೆ’ ಎಂದು ಹೇಳಿದರು.</p>.<p>ಯೋಗಗುರು ಕೆ.ರಾಘವೇಂದ್ರ ಪೈ, ‘ಯೋಗ ಮತ್ತು ಧ್ಯಾನದಿಂದ ದೇಹ ಮತ್ತು ಮನಸ್ಸನ್ನು ಶಾಂತಗೊಳಿಸಬಹುದು. ಜೀವನದಲ್ಲಿ ದೈವಿಕತೆ ಹೊಂದಬಹುದು’ ಎಂದರು.</p>.<p>ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-38-1360341555</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>