<p><strong>ಮೈಸೂರು:</strong> ‘ವಿದ್ಯಾರ್ಥಿಗಳು ಸಾಧಕರ ಚರಿತ್ರೆ ಅಧ್ಯಯನ ಮಾಡಬೇಕು. ಗೆದ್ದವರ ಸ್ಫೂರ್ತಿಯೊಂದಿಗೆ, ಸೋತವರ ಬದುಕಿನ ಅಧ್ಯಯನವೂ ಆಗುತ್ತಿರಬೇಕು’ ಎಂದು ವೈದ್ಯ ಸಾಹಿತಿ ಡಾ.ನಾ.ಸೋಮೇಶ್ವರ ಹೇಳಿದರು.</p>.<p>ಇಲ್ಲಿನ ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆದ ಸ್ನಾತಕೋತ್ತರ ವಿಭಾಗದ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಚರಿತ್ರೆಯಲ್ಲಿ ಗೆದ್ದವರ ಕಥೆಯಷ್ಟೆ ಇರುವುದಿಲ್ಲ. ಸೋತವರ ಕಥೆಯೂ ಇದೆ. ಅದರಿಂದಲೂ ಕಲಿಯುವುದು ಸಾಕಷ್ಟಿದೆ. ಸೋಲಿಗೆ ಹೆದರಬಾರದು, ಗೆಲುವಿಗೆ ಪ್ರಯತ್ನಿಸಬೇಕು. ಗೆದ್ದವರು ಬೀಗಬಾರದು. ಮುಂದಿನ ಮಹತ್ವದ ಜವಾಬ್ದಾರಿ, ಸವಾಲುಗಳನ್ನು ಎಚ್ಚರಿಕೆಯಿಂದ ಅರಿಯಬೇಕು’ ಎಂದರು.</p>.<p>‘ವಿದ್ಯಾರ್ಥಿಗಳು ಅರ್ಜುನನಂತೆ ಸವ್ಯಸಾಚಿ ಗುಣ ಬೆಳೆಸಿಕೊಳ್ಳಬೇಕು. ಶಿಸ್ತು, ಸಂಯಮ, ಸಮಯಪಾಲನೆ, ನಿಯಮಪಾಲನೆ, ಏಕಾಗ್ರತೆಯ ಮನೋಭಾವಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಯೋಗಪಟು ಎಚ್.ಖುಷಿ ಮಾತನಾಡಿ, ‘ಯೋಗ ಅಭ್ಯಾಸದಿಂದ ವಿಭಿನ್ನವಾದ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ದೇಹ ಮತ್ತು ಮನಸ್ಸಿನ ಮೇಲಿನ ನಿಯಂತ್ರಣ ಸಾಧಿಸುತ್ತೇವೆ’ ಎಂದು ಹೇಳಿದರು.</p>.<p>ಪ್ರಾಂಶುಪಾಲ ಎಂ.ಪ್ರಭು, ‘ಅನಿವಾರ್ಯ ಮತ್ತು ಅವಕಾಶಗಳ ಬಗ್ಗೆ ನಿಮಗೆ ಪ್ರಜ್ಞೆ ಇರಲಿ. ಬದುಕಿನಲ್ಲಿ ಯಾವುದೂ ಅನಿವಾರ್ಯವಲ್ಲ. ಎಲ್ಲವನ್ನು ಅವಕಾಶವಾಗಿ ನೋಡಿ’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ.ಸಾಂಬಶಿವಯ್ಯ, ‘ಇಂದು ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಾವಕಾಶ ನಾಶವಾಗುತ್ತಿವೆ ಎಂಬ ಚರ್ಚೆ ಕೇಳಿಬರುತ್ತಿದೆ. ಆದರೆ ಈ ತಂತ್ರಜ್ಞಾನದಿಂದ ಉದ್ಯೋಗ ನಾಶವಾಗುತ್ತಿಲ್ಲ. ಉದ್ಯೋಗದ ಸ್ವರೂಪಗಳು ಬದಲಾಗುತ್ತಿವೆ. ಇದನ್ನು ವಿದ್ಯಾರ್ಥಿಗಳು ಸರಿಯಾಗಿ ಅರಿತುಕೊಂಡರೆ ಹಲವು ಅವಕಾಶ ಲಭಿಸುತ್ತವೆ’ ಎಂದು ತಿಳಿಸಿದರು.</p>.<p>ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರ ಮತ್ತು ಬಹುಮಾನ ವಿತರಿಸಲಾಯಿತು.</p>.<p>ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಎಂ.ಪಿ.ಸೋಮಶೇಖರ್, ದೈಹಿಕ ನಿರ್ದೇಶಕ ಎಂ.ಕಾರ್ತಿಕ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-38-671870858</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ವಿದ್ಯಾರ್ಥಿಗಳು ಸಾಧಕರ ಚರಿತ್ರೆ ಅಧ್ಯಯನ ಮಾಡಬೇಕು. ಗೆದ್ದವರ ಸ್ಫೂರ್ತಿಯೊಂದಿಗೆ, ಸೋತವರ ಬದುಕಿನ ಅಧ್ಯಯನವೂ ಆಗುತ್ತಿರಬೇಕು’ ಎಂದು ವೈದ್ಯ ಸಾಹಿತಿ ಡಾ.ನಾ.ಸೋಮೇಶ್ವರ ಹೇಳಿದರು.</p>.<p>ಇಲ್ಲಿನ ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆದ ಸ್ನಾತಕೋತ್ತರ ವಿಭಾಗದ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಚರಿತ್ರೆಯಲ್ಲಿ ಗೆದ್ದವರ ಕಥೆಯಷ್ಟೆ ಇರುವುದಿಲ್ಲ. ಸೋತವರ ಕಥೆಯೂ ಇದೆ. ಅದರಿಂದಲೂ ಕಲಿಯುವುದು ಸಾಕಷ್ಟಿದೆ. ಸೋಲಿಗೆ ಹೆದರಬಾರದು, ಗೆಲುವಿಗೆ ಪ್ರಯತ್ನಿಸಬೇಕು. ಗೆದ್ದವರು ಬೀಗಬಾರದು. ಮುಂದಿನ ಮಹತ್ವದ ಜವಾಬ್ದಾರಿ, ಸವಾಲುಗಳನ್ನು ಎಚ್ಚರಿಕೆಯಿಂದ ಅರಿಯಬೇಕು’ ಎಂದರು.</p>.<p>‘ವಿದ್ಯಾರ್ಥಿಗಳು ಅರ್ಜುನನಂತೆ ಸವ್ಯಸಾಚಿ ಗುಣ ಬೆಳೆಸಿಕೊಳ್ಳಬೇಕು. ಶಿಸ್ತು, ಸಂಯಮ, ಸಮಯಪಾಲನೆ, ನಿಯಮಪಾಲನೆ, ಏಕಾಗ್ರತೆಯ ಮನೋಭಾವಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಯೋಗಪಟು ಎಚ್.ಖುಷಿ ಮಾತನಾಡಿ, ‘ಯೋಗ ಅಭ್ಯಾಸದಿಂದ ವಿಭಿನ್ನವಾದ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ದೇಹ ಮತ್ತು ಮನಸ್ಸಿನ ಮೇಲಿನ ನಿಯಂತ್ರಣ ಸಾಧಿಸುತ್ತೇವೆ’ ಎಂದು ಹೇಳಿದರು.</p>.<p>ಪ್ರಾಂಶುಪಾಲ ಎಂ.ಪ್ರಭು, ‘ಅನಿವಾರ್ಯ ಮತ್ತು ಅವಕಾಶಗಳ ಬಗ್ಗೆ ನಿಮಗೆ ಪ್ರಜ್ಞೆ ಇರಲಿ. ಬದುಕಿನಲ್ಲಿ ಯಾವುದೂ ಅನಿವಾರ್ಯವಲ್ಲ. ಎಲ್ಲವನ್ನು ಅವಕಾಶವಾಗಿ ನೋಡಿ’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ.ಸಾಂಬಶಿವಯ್ಯ, ‘ಇಂದು ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಾವಕಾಶ ನಾಶವಾಗುತ್ತಿವೆ ಎಂಬ ಚರ್ಚೆ ಕೇಳಿಬರುತ್ತಿದೆ. ಆದರೆ ಈ ತಂತ್ರಜ್ಞಾನದಿಂದ ಉದ್ಯೋಗ ನಾಶವಾಗುತ್ತಿಲ್ಲ. ಉದ್ಯೋಗದ ಸ್ವರೂಪಗಳು ಬದಲಾಗುತ್ತಿವೆ. ಇದನ್ನು ವಿದ್ಯಾರ್ಥಿಗಳು ಸರಿಯಾಗಿ ಅರಿತುಕೊಂಡರೆ ಹಲವು ಅವಕಾಶ ಲಭಿಸುತ್ತವೆ’ ಎಂದು ತಿಳಿಸಿದರು.</p>.<p>ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರ ಮತ್ತು ಬಹುಮಾನ ವಿತರಿಸಲಾಯಿತು.</p>.<p>ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಎಂ.ಪಿ.ಸೋಮಶೇಖರ್, ದೈಹಿಕ ನಿರ್ದೇಶಕ ಎಂ.ಕಾರ್ತಿಕ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-38-671870858</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>