<p><strong>ಸಂತೇಮರಹಳ್ಳಿ</strong>: ಮೈಸೂರು ಹಾಗೂ ತಿ.ನರಸೀಪುರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಕಳೆದ ಒಂದೂವರೆ ವರ್ಷದಿಂದ ರಸ್ತೆ ಹದಗೆಟ್ಟಿದ್ದು, ದುರಸ್ತಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಸಂತೇಮರಹಳ್ಳಿಯಿಂದ ಮೈಸೂರು ಹಾಗೂ ತಿ.ನರಸೀಪುರಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆಯು ಬಾಲಕಿಯರ ವಸತಿ ನಿಲಯದಿಂದ ಬಸವಟ್ಟಿ ಗೇಟ್ ತಲುಪುವ ಒಂದು ಕಿ.ಮೀ ವರೆಗೆ ಹದಗೆಟ್ಟಿದೆ. ರಸ್ತೆಯ ಉದ್ದಗಲಕ್ಕೂ ಹೊಂಡಗಳು ಬಿದ್ದಿವೆ. ಅಲ್ಲಲ್ಲಿ ಕೊರಕಲು ಉಂಟಾಗಿವೆ. ರಸ್ತೆಗೆ ಹಿಂದೆ ಹಾಕಿದ್ದ ಜಲ್ಲಿ ಕಲ್ಲುಗಳು ಮೇಲೆ ಬರುತ್ತಿವೆ. ಡಾಂಬರು ಸಂಪೂರ್ಣ ಹಾಳಾಗಿದೆ. ಈ ಭಾಗಕ್ಕೆ ವಾಹನಗಳು ಬಂದಾಗ ತುಂಬಾ ನಿಧಾನವಾಗಿ ಸಂಚರಿಸಬೇಕಾಗಿದೆ.</p>.<p>‘ರಸ್ತೆ ಅವ್ಯವಸ್ಥೆಯಿಂದ ರಾತ್ರಿ ಸಮಯದಲ್ಲಿ ದ್ವಿಚಕ್ರ ವಾಹನಗಳು ಅಪಘಾತಕ್ಕೀಡಾಗಿ ಪ್ರಾಣಾಪಾಯಗಳಾಗಿವೆ. ಮಳೆಗಾಲ ಆಗಿರುವುದರಿಂದ ರಸ್ತೆಯಲ್ಲಿ ನೀರು ನಿಂತು ಅಪಘಾತಗಳಿಗೆ ಆಹ್ವಾನ ನೀಡುತ್ತಿವೆ, ಶೀಘ್ರ ದುರಸ್ತಿಗೆ ಮನವಿ ಮಾಡಿದರೂ ಯಾರೂ ಗಮನ ಹರಿಸಿಲ್ಲ’ ಎಂದು ಮೂಗೂರು ಮಂಜುನಾಥ್ ಹಾಗೂ ರಾಜಶೇಖರ್ ಆರೋಪಿಸುತ್ತಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-37-807479485</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ</strong>: ಮೈಸೂರು ಹಾಗೂ ತಿ.ನರಸೀಪುರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಕಳೆದ ಒಂದೂವರೆ ವರ್ಷದಿಂದ ರಸ್ತೆ ಹದಗೆಟ್ಟಿದ್ದು, ದುರಸ್ತಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಸಂತೇಮರಹಳ್ಳಿಯಿಂದ ಮೈಸೂರು ಹಾಗೂ ತಿ.ನರಸೀಪುರಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆಯು ಬಾಲಕಿಯರ ವಸತಿ ನಿಲಯದಿಂದ ಬಸವಟ್ಟಿ ಗೇಟ್ ತಲುಪುವ ಒಂದು ಕಿ.ಮೀ ವರೆಗೆ ಹದಗೆಟ್ಟಿದೆ. ರಸ್ತೆಯ ಉದ್ದಗಲಕ್ಕೂ ಹೊಂಡಗಳು ಬಿದ್ದಿವೆ. ಅಲ್ಲಲ್ಲಿ ಕೊರಕಲು ಉಂಟಾಗಿವೆ. ರಸ್ತೆಗೆ ಹಿಂದೆ ಹಾಕಿದ್ದ ಜಲ್ಲಿ ಕಲ್ಲುಗಳು ಮೇಲೆ ಬರುತ್ತಿವೆ. ಡಾಂಬರು ಸಂಪೂರ್ಣ ಹಾಳಾಗಿದೆ. ಈ ಭಾಗಕ್ಕೆ ವಾಹನಗಳು ಬಂದಾಗ ತುಂಬಾ ನಿಧಾನವಾಗಿ ಸಂಚರಿಸಬೇಕಾಗಿದೆ.</p>.<p>‘ರಸ್ತೆ ಅವ್ಯವಸ್ಥೆಯಿಂದ ರಾತ್ರಿ ಸಮಯದಲ್ಲಿ ದ್ವಿಚಕ್ರ ವಾಹನಗಳು ಅಪಘಾತಕ್ಕೀಡಾಗಿ ಪ್ರಾಣಾಪಾಯಗಳಾಗಿವೆ. ಮಳೆಗಾಲ ಆಗಿರುವುದರಿಂದ ರಸ್ತೆಯಲ್ಲಿ ನೀರು ನಿಂತು ಅಪಘಾತಗಳಿಗೆ ಆಹ್ವಾನ ನೀಡುತ್ತಿವೆ, ಶೀಘ್ರ ದುರಸ್ತಿಗೆ ಮನವಿ ಮಾಡಿದರೂ ಯಾರೂ ಗಮನ ಹರಿಸಿಲ್ಲ’ ಎಂದು ಮೂಗೂರು ಮಂಜುನಾಥ್ ಹಾಗೂ ರಾಜಶೇಖರ್ ಆರೋಪಿಸುತ್ತಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-37-807479485</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>