<p><strong>ಮೈಸೂರು:</strong> ಮೈಸೂರಿನಿಂದ ತಿರುಪತಿಗೆ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>‘ಸಚಿವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಚರ್ಚಿಸಿದ್ದೇನೆ. ಆಂಧ್ರದ ಖ್ಯಾತ ಧಾರ್ಮಿಕ ಕ್ಷೇತ್ರ ತಿರುಪತಿಗೆ ಮೈಸೂರು, ಮಂಡ್ಯ, ಚಾಮರಾಜನಗರದಿಂದ ಅತಿ ಹೆಚ್ಚು ಭಕ್ತರು ಪ್ರಯಾಣಿಸುತ್ತಾರೆ. ಆದ್ದರಿಂದ ಹೆಚ್ಚುವರಿ ರೈಲ್ವೆ ಸೇವೆ ಒದಗಿಸುವ ಅಗತ್ಯವಿದೆ ಎಂದು ತಿಳಿಸಿದ್ದು, ತಿರುಪತಿ-ಬೆಂಗಳೂರು ನಡುವಿನ ವಂದೇಭಾರತ್ ರೈಲನ್ನು ಮೈಸೂರಿನವರೆಗೆ ವಿಸ್ತರಿಸುವಂತೆ ಕೋರಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಭಕ್ತರ ದೀರ್ಘಕಾಲದ ಬೇಡಿಕೆಯೂ ಇದಾಗಿದೆ. ಪ್ರಸ್ತುತ ರೈಲು ಸೇವೆ ವಿರಳವಾಗಿದೆ. ಕೆಲವು ದೀರ್ಘ ಪ್ರಯಾಣದ ಅವಧಿಯದ್ದಾಗಿದೆ. ಇದರಿಂದ ಹಿರಿಯ ನಾಗರಿಕರು, ಭಕ್ತರು ಮತ್ತು ಪ್ರವಾಸಿಗರಿಗೆ ಅನಾನುಕೂಲ ಉಂಟಾಗುತ್ತಿದೆ ಎಂದು ಸಚಿವರಿಗೆ ತಿಳಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಮೈಸೂರು ನಿಲ್ದಾಣದಲ್ಲಿ ಪ್ಲಾಟ್ಫಾರ್ಮ್ ಲಭ್ಯತೆ ಮತ್ತು ನಿರ್ವಹಣಾ ಸೌಲಭ್ಯಗಳನ್ನು ಪರಿಗಣಿಸಿ, ಮೈಸೂರು -ರೇಣಿಗುಂಟ/ತಿರುಪತಿ - ಮೈಸೂರು ವಂದೇಭಾರತ್ ಎಕ್ಸ್ಪ್ರೆಸ್ ಆರಂಭಿಸಬಹುದಾಗಿದೆ. ಈ ಅತಿ ವೇಗದ, ಆಧುನಿಕ ರೈಲು ಸೇವೆಯು ಸಾವಿರಾರು ಪ್ರಯಾಣಿಕರಿಗೆ ಸುರಕ್ಷಿತ, ಆರಾಮದಾಯಕ ಮತ್ತು ಉತ್ತಮ ಪ್ರಯಾಣ ಆಯ್ಕೆ ಒದಗಿಸುತ್ತದೆ. ಇದರಿಂದ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ’ ಎಂದು ವಿವರಿಸಿದ್ದಾರೆ.</p>.<p>‘ಮೈಸೂರು-ಚಾಮರಾಜನಗರ ರೈಲು ಮಾರ್ಗದ ವಿದ್ಯುದ್ದೀಕರಣ ತ್ವರಿತಗೊಳಿಸುವುದು ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ದಾರಿ ಮಾಡಿಕೊಡುವ ನಿರ್ಣಾಯಕ ಹೆಜ್ಜೆಯಾಗಿದೆ. ಅವರ ಸಕಾಲಿಕ ನಡೆಯು ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ’ ಎಂದು ಹೇಳಿದ್ದಾರೆ.</p>.<p>‘ತಮಿಳುನಾಡಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ರಾಮೇಶ್ವರಂಗೆ ಮೈಸೂರಿನಿಂದ ಇದುವರೆಗೆ ಯಾವುದೇ ನೇರ ರೈಲು ಸಂಪರ್ಕ ಇಲ್ಲ. ಇದರಿಂದ ಮೈಸೂರು ಭಾಗದ ಜನರು ಈ ತೀರ್ಥಕ್ಷೇತ್ರಕ್ಕೆ ತೆರಳಲು ಅನನುಕೂಲ ಆಗುತ್ತಿದೆ. ಈ ನಿಟ್ಟಿನಲ್ಲಿ ಮೈಸೂರು-ರಾಮೇಶ್ವರಂ ನಡುವೆ ರೈಲು ಸಂಚಾರ ಆರಂಭಿಸುವಂತೆಯೂ ಕೋರಲಾಗಿದೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.</p>.<p>Quote - ಮನವಿ ಪತ್ರ ಸ್ವೀಕರಿಸಿದ ಸಚಿವರು ಅತಿ ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಸದ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರಿನಿಂದ ತಿರುಪತಿಗೆ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>‘ಸಚಿವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಚರ್ಚಿಸಿದ್ದೇನೆ. ಆಂಧ್ರದ ಖ್ಯಾತ ಧಾರ್ಮಿಕ ಕ್ಷೇತ್ರ ತಿರುಪತಿಗೆ ಮೈಸೂರು, ಮಂಡ್ಯ, ಚಾಮರಾಜನಗರದಿಂದ ಅತಿ ಹೆಚ್ಚು ಭಕ್ತರು ಪ್ರಯಾಣಿಸುತ್ತಾರೆ. ಆದ್ದರಿಂದ ಹೆಚ್ಚುವರಿ ರೈಲ್ವೆ ಸೇವೆ ಒದಗಿಸುವ ಅಗತ್ಯವಿದೆ ಎಂದು ತಿಳಿಸಿದ್ದು, ತಿರುಪತಿ-ಬೆಂಗಳೂರು ನಡುವಿನ ವಂದೇಭಾರತ್ ರೈಲನ್ನು ಮೈಸೂರಿನವರೆಗೆ ವಿಸ್ತರಿಸುವಂತೆ ಕೋರಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಭಕ್ತರ ದೀರ್ಘಕಾಲದ ಬೇಡಿಕೆಯೂ ಇದಾಗಿದೆ. ಪ್ರಸ್ತುತ ರೈಲು ಸೇವೆ ವಿರಳವಾಗಿದೆ. ಕೆಲವು ದೀರ್ಘ ಪ್ರಯಾಣದ ಅವಧಿಯದ್ದಾಗಿದೆ. ಇದರಿಂದ ಹಿರಿಯ ನಾಗರಿಕರು, ಭಕ್ತರು ಮತ್ತು ಪ್ರವಾಸಿಗರಿಗೆ ಅನಾನುಕೂಲ ಉಂಟಾಗುತ್ತಿದೆ ಎಂದು ಸಚಿವರಿಗೆ ತಿಳಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಮೈಸೂರು ನಿಲ್ದಾಣದಲ್ಲಿ ಪ್ಲಾಟ್ಫಾರ್ಮ್ ಲಭ್ಯತೆ ಮತ್ತು ನಿರ್ವಹಣಾ ಸೌಲಭ್ಯಗಳನ್ನು ಪರಿಗಣಿಸಿ, ಮೈಸೂರು -ರೇಣಿಗುಂಟ/ತಿರುಪತಿ - ಮೈಸೂರು ವಂದೇಭಾರತ್ ಎಕ್ಸ್ಪ್ರೆಸ್ ಆರಂಭಿಸಬಹುದಾಗಿದೆ. ಈ ಅತಿ ವೇಗದ, ಆಧುನಿಕ ರೈಲು ಸೇವೆಯು ಸಾವಿರಾರು ಪ್ರಯಾಣಿಕರಿಗೆ ಸುರಕ್ಷಿತ, ಆರಾಮದಾಯಕ ಮತ್ತು ಉತ್ತಮ ಪ್ರಯಾಣ ಆಯ್ಕೆ ಒದಗಿಸುತ್ತದೆ. ಇದರಿಂದ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ’ ಎಂದು ವಿವರಿಸಿದ್ದಾರೆ.</p>.<p>‘ಮೈಸೂರು-ಚಾಮರಾಜನಗರ ರೈಲು ಮಾರ್ಗದ ವಿದ್ಯುದ್ದೀಕರಣ ತ್ವರಿತಗೊಳಿಸುವುದು ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ದಾರಿ ಮಾಡಿಕೊಡುವ ನಿರ್ಣಾಯಕ ಹೆಜ್ಜೆಯಾಗಿದೆ. ಅವರ ಸಕಾಲಿಕ ನಡೆಯು ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ’ ಎಂದು ಹೇಳಿದ್ದಾರೆ.</p>.<p>‘ತಮಿಳುನಾಡಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ರಾಮೇಶ್ವರಂಗೆ ಮೈಸೂರಿನಿಂದ ಇದುವರೆಗೆ ಯಾವುದೇ ನೇರ ರೈಲು ಸಂಪರ್ಕ ಇಲ್ಲ. ಇದರಿಂದ ಮೈಸೂರು ಭಾಗದ ಜನರು ಈ ತೀರ್ಥಕ್ಷೇತ್ರಕ್ಕೆ ತೆರಳಲು ಅನನುಕೂಲ ಆಗುತ್ತಿದೆ. ಈ ನಿಟ್ಟಿನಲ್ಲಿ ಮೈಸೂರು-ರಾಮೇಶ್ವರಂ ನಡುವೆ ರೈಲು ಸಂಚಾರ ಆರಂಭಿಸುವಂತೆಯೂ ಕೋರಲಾಗಿದೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.</p>.<p>Quote - ಮನವಿ ಪತ್ರ ಸ್ವೀಕರಿಸಿದ ಸಚಿವರು ಅತಿ ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಸದ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>