‘ನಮ್ಮ ಸರ್ಕಾರದ ಬದ್ಧತೆ ಇದು’
‘ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅನುಕೂಲ ಕಲ್ಪಿಸುವ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದಕ್ಕೆ ಅಡಿಪಾಯ ಹಾಕುವ ಮಹತ್ವದ ಉದ್ದೇಶದಿಂದ ತೊಟ್ಟವಾಡಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ನಿರ್ಮಿಸಲಾಗುತ್ತಿದೆ. ಇದು ಅಭಿವೃದ್ಧಿ ಹಾಗೂ ಶಿಕ್ಷಣದ ಕುರಿತಂತೆ ನಮ್ಮ ಸರ್ಕಾರವು ಹೊಂದಿರುವ ಬದ್ಧತೆಗೆ ಸಾಕ್ಷಿಯಾಗಿದೆ’ ಎಂದು ಸಚಿವ ಮಹದೇವಪ್ಪ ತಿಳಿಸಿದ್ದಾರೆ.