<p><strong>ಮೈಸೂರು:</strong> ಸಂಚಾರ ನಿಯಮ ಉಲ್ಲಂಘನೆ ಕುರಿತ ದಂಡ ಪಾವತಿಗೆ ರಾಜ್ಯ ಸರ್ಕಾರ ಶೇ 50ರಷ್ಟು ರಿಯಾಯಿತಿ ನೀಡಿದ್ದ 21 ದಿನಗಳ ಅವಧಿಯಲ್ಲಿ ಮೈಸೂರು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 55,269 ಪ್ರಕರಣಗಳು ಇತ್ಯರ್ಥಗೊಂಡು, ₹1,39,14,250 ದಂಡ ಸಂಗ್ರಹಿಸಲಾಗಿದೆ.</p>.<p>ಪೊಲೀಸ್ ಇಲಾಖೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿ, ಈ ಚಲನ್ ಮೂಲಕ ದಾಖಲಾಗಿರುವ ಪ್ರಕರಣಗಳ ಸಂಬಂಧ ಇಲ್ಲಿಯವರೆಗೆ ದಂಡವನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡವನ್ನು ಪಾವತಿಸಲು ರಾಜ್ಯ ಸರ್ಕಾರವು ಶೇ 50 ರಿಯಾಯಿತಿ ನೀಡಿತ್ತು.</p>.<p>ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಸಲು ಶೇ 50 ರಿಯಾಯಿತಿ ನೀಡಿರುವ ಬಗ್ಗೆ ಜಿಲ್ಲಾ ಪೊಲೀಸ್ ವತಿಯಿಂದ ಟ್ವಿಟರ್, ಫೇಸ್ಬುಕ್, ಕೆ.ಎಸ್.ಪಿ.ಎಸ್ ಆ್ಯಪ್ ಮತ್ತು ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದರು.</p>.<p>‘ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ವಾಹನ ಸವಾರರು ಆ.23ರಿಂದ ಸೆ.12ರವರೆಗೆ 55,269 ಪ್ರಕರಣಗಳು ಇತ್ಯರ್ಥಗೊಂಡಿವೆ’ ಎಂದು ಎಎಸ್ಪಿ ಸಿ. ಮಲ್ಲಿಕ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಸಂಚಾರ ನಿಯಮ ಉಲ್ಲಂಘನೆ ಕುರಿತ ದಂಡ ಪಾವತಿಗೆ ರಾಜ್ಯ ಸರ್ಕಾರ ಶೇ 50ರಷ್ಟು ರಿಯಾಯಿತಿ ನೀಡಿದ್ದ 21 ದಿನಗಳ ಅವಧಿಯಲ್ಲಿ ಮೈಸೂರು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 55,269 ಪ್ರಕರಣಗಳು ಇತ್ಯರ್ಥಗೊಂಡು, ₹1,39,14,250 ದಂಡ ಸಂಗ್ರಹಿಸಲಾಗಿದೆ.</p>.<p>ಪೊಲೀಸ್ ಇಲಾಖೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿ, ಈ ಚಲನ್ ಮೂಲಕ ದಾಖಲಾಗಿರುವ ಪ್ರಕರಣಗಳ ಸಂಬಂಧ ಇಲ್ಲಿಯವರೆಗೆ ದಂಡವನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡವನ್ನು ಪಾವತಿಸಲು ರಾಜ್ಯ ಸರ್ಕಾರವು ಶೇ 50 ರಿಯಾಯಿತಿ ನೀಡಿತ್ತು.</p>.<p>ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಸಲು ಶೇ 50 ರಿಯಾಯಿತಿ ನೀಡಿರುವ ಬಗ್ಗೆ ಜಿಲ್ಲಾ ಪೊಲೀಸ್ ವತಿಯಿಂದ ಟ್ವಿಟರ್, ಫೇಸ್ಬುಕ್, ಕೆ.ಎಸ್.ಪಿ.ಎಸ್ ಆ್ಯಪ್ ಮತ್ತು ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದರು.</p>.<p>‘ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ವಾಹನ ಸವಾರರು ಆ.23ರಿಂದ ಸೆ.12ರವರೆಗೆ 55,269 ಪ್ರಕರಣಗಳು ಇತ್ಯರ್ಥಗೊಂಡಿವೆ’ ಎಂದು ಎಎಸ್ಪಿ ಸಿ. ಮಲ್ಲಿಕ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>