<p><strong>ಮೈಸೂರು:</strong> ಪರಿಸರಕ್ಕಾಗಿ ನಾವು– ಪರಿಸರ ಕಾರ್ಯಕರ್ತರ ರಾಜ್ಯ ಸಂಘಟನೆಯಿಂದ ಮೇ 10ರಂದು ಮರಗಳ ಪರಿಶೀಲನೆ ಹಾಗೂ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ.</p>.<p>ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಹತ್ತಿರ ಮೇಲ್ಸೇತುವೆ ನಿರ್ಮಾಣಕ್ಕೆ 350 ಮರಗಳನ್ನು ಕಡಿಯುವ ಪ್ರಸ್ತಾವವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮಾಡಿದೆ. ಕಡಿಯಬೇಕಾದ ಮರಗಳ ಮೇಲೆ ಈಗಾಗಲೇ ಗುರುತು ಹಾಕಲಾಗಿದೆ. ಈ ಮರಗಳನ್ನು ಉಳಿಸುವ ಸಂಬಂಧ, 10ರಂದು (ಭಾನುವಾರ) ಬೆಳಿಗ್ಗೆ 7ರಿಂದ 10ರವರೆಗೆ ಪರಿಶೀಲನೆ ಹಾಗೂ ಬನ್ನಿಮಂಟಪ ರಸ್ತೆಯ ಮಿಲನ್ ಫಂಕ್ಷನ್ ಹಾಲ್ ಎದುರಿನ ಉದ್ಯಾನದಲ್ಲಿ ಸಭೆ ನಡೆಸಲಾಗುವುದು.</p>.<p>ನಿವೃತ್ತ ಮೇಜರ್ ಜನರಲ್ ಎಸ್.ಜಿ. ಒಂಬತ್ಕೆರೆ, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಭಾನು ಮೋಹನ್ ಸೇರಿದಂತೆ ಪರಿಸರ ತಜ್ಞರು ಹಾಗೂ ಹೋರಾಟಗಾರರು ಪಾಲ್ಗೊ ಳ್ಳುವರು ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-39-1901093535</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಪರಿಸರಕ್ಕಾಗಿ ನಾವು– ಪರಿಸರ ಕಾರ್ಯಕರ್ತರ ರಾಜ್ಯ ಸಂಘಟನೆಯಿಂದ ಮೇ 10ರಂದು ಮರಗಳ ಪರಿಶೀಲನೆ ಹಾಗೂ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ.</p>.<p>ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಹತ್ತಿರ ಮೇಲ್ಸೇತುವೆ ನಿರ್ಮಾಣಕ್ಕೆ 350 ಮರಗಳನ್ನು ಕಡಿಯುವ ಪ್ರಸ್ತಾವವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮಾಡಿದೆ. ಕಡಿಯಬೇಕಾದ ಮರಗಳ ಮೇಲೆ ಈಗಾಗಲೇ ಗುರುತು ಹಾಕಲಾಗಿದೆ. ಈ ಮರಗಳನ್ನು ಉಳಿಸುವ ಸಂಬಂಧ, 10ರಂದು (ಭಾನುವಾರ) ಬೆಳಿಗ್ಗೆ 7ರಿಂದ 10ರವರೆಗೆ ಪರಿಶೀಲನೆ ಹಾಗೂ ಬನ್ನಿಮಂಟಪ ರಸ್ತೆಯ ಮಿಲನ್ ಫಂಕ್ಷನ್ ಹಾಲ್ ಎದುರಿನ ಉದ್ಯಾನದಲ್ಲಿ ಸಭೆ ನಡೆಸಲಾಗುವುದು.</p>.<p>ನಿವೃತ್ತ ಮೇಜರ್ ಜನರಲ್ ಎಸ್.ಜಿ. ಒಂಬತ್ಕೆರೆ, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಭಾನು ಮೋಹನ್ ಸೇರಿದಂತೆ ಪರಿಸರ ತಜ್ಞರು ಹಾಗೂ ಹೋರಾಟಗಾರರು ಪಾಲ್ಗೊ ಳ್ಳುವರು ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-39-1901093535</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>